ಮೈಸೂರು: ಹಿಂದೂ ಧರ್ಮವನ್ನು ನಾಶಮಾಡಲು ಕಾಂಗ್ರೆಸ್ ನವರು ಹುನ್ನಾರ ನಡೆಸಿದ್ದು ಮೋದಿ ಇರುವವರೆಗೂ ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಗುಡುಗಿದ್ದಾರೆ.
ಸಾಂಸ್ಕೃತಿಕ ನಗರಿ ಮೈಸೂರಿನ ವಿಜಯಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಮೋದಿ ಕನ್ನಡದಲ್ಲೇ ಭಾಷಣ ಆರಂಭಿಸಿ “ನಿಮಗೆಲ್ಲಾ ನನ್ನ ನಮಸ್ಕಾರಗಳು, ಚೈತ್ರ ನವಮಿಯ ದಿನ ತಾಯಿ ಚಾಮುಂಡೇಶ್ವರಿಯ ಆಶೀರ್ವಾದ ಪಡೆಯುವ ಅವಕಾಶ ಸಿಕ್ಕಿದೆ. ತಾಯಿ ಚಾಮುಂಡೇಶ್ವರಿ ಜೊತೆ, ತಾಯಿ ಭುವನೇಶ್ವರಿ ಮತ್ತು ತಾಯಿ ಕಾವೇರಿಗೆ ನಮಿಸುತ್ತೇನೆ” ಎಂದರು. ಕರ್ನಾಟಕದಲ್ಲಿ ಕಾಂಗ್ರೆಸ್ ತುಷ್ಠೀಕರಣ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದರು. ರಾಮಮಂದಿರದ ಪ್ರಾಣ ಪ್ರತಿಷ್ಠಾಪನೆಯ ಆಹ್ವಾನವನ್ನು ತಿರಸ್ಕರಿಸುವ ಮೂಲಕ ಕಾಂಗ್ರೆಸ್ ನವರು ಅಪಮಾನ ಮಾಡಿದೆ. ಇಂಡಿ ಮೈತ್ರಿ ಕೂಟವು ಸನಾತನ ಧರ್ಮವನ್ನು ನಾಶ ಮಾಡುತ್ತೇವೆ ಎನ್ನುತ್ತಾರೆ. ಹಿಂದೂ ಧರ್ಮವನ್ನು ನಾಶಮಾಡಲು ಕಾಂಗ್ರೆಸ್ ನವರು ಹುನ್ನಾರ ನಡೆಸಿದ್ದು ಮೋದಿ ಇರುವವರೆಗೂ ಸಾಧ್ಯವಿಲ್ಲ ಎಂದು ಪ್ರಧಾನಿ ಘೋಷಿಸಿದರು.
.ರಾಜ್ಯ ಕಾಂಗ್ರೆಸ್ ಪಕ್ಷದ ಆಡಳಿತ ವೈಖರಿಯನ್ನೂ ತರಾಟೆಗೆ ತೆಗೆದುಕೊಂಡ ಮೋದಿ ಕಾಂಗ್ರೆಸ್ ಗ್ಯಾರಂಟಿಗಳ ವಿರುದ್ಧ ನಿರಂತರ ವಾಗ್ದಾಳಿ ನಡೆಸಿ, ಬಿಜೆಪಿಯಿಂದ ಮೋದಿಯೇ ಗ್ಯಾರಂಟಿ ಎಂದು ಹೇಳಿದರು. ಇದಕ್ಕೂ ಮೊದಲು ಇಡೀ ಭಾರತದಲ್ಲಿ ಅತ್ಯಂತ ಹೆಚ್ಚು ಅನುಭವಿ ರಾಜಕಾರಣಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಜೊತೆ ವೇದಿಕೆ ಹಂಚಿಕೊಂಡಿರುವುದು ನನ್ನ ಸೌಭಾಗ್ಯ ಅವರು ಹೇಳಿರುವುದನ್ನು ಸಂಪೂರ್ಣವಾಗಿ ಕೇಳಿಸಿಕೊಂಡೆ ಎಂದ ಪ್ರಧಾನಿ ಬಿಜೆಪಿಯಿಂದ ಪ್ರಾದೇಶಿಕ ಅಸ್ಮಿತೆ, ಕನ್ನಡ ಅಸ್ಮಿತೆಗೆ ಧಕ್ಕೆ ಬರುತ್ತಿದೆ ಎಂಬ ಕಾಂಗ್ರೆಸ್ ಆರೋಪಕ್ಕೂ ತಿರುಗೇಟು ನೀಡಿದ ಅವರು, ಕನ್ನಡವು ಅತ್ಯಂತ ಸುಂದರವಾದ ಭಾಷೆಯಾಗಿದೆ. ಬಿಜೆಪಿ ಸರ್ಕಾರವು ಕನ್ನಡ ಭಾಷೆಯ ಬೆಳವಣಿಗೆಗೆ ಪೂರಕ ಯೋಜನೆಗಳನ್ನು ಹಮ್ಮಿಕೊಳ್ಳಲಿದೆ ಎಂದೂ ತಿಳಿಸಿದರು.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…