ದಾವಣಗೆರೆ : ರಾಜ್ಯದಲ್ಲಿ ಹಿಂದೂಗಳಿಗೆ ಸ್ವಾತಂತ್ರ್ಯವಿಲ್ಲ. ರಾಗಿಗುಡ್ಡದ ಹಿಂದೂ ಸಮುದಾಯದವರಿಗೆ ಸಾಂತ್ವನ ಹೇಳಲು ಹೊರಟಿದ್ದೆ. ನಾನೇನು ಅಲ್ಲಿ ಪ್ರಚೋದನಕಾರಿ ಭಾಷಣ ಮಾಡಲು ಹೊರಟಿರಲಿಲ್ಲ. ನಮ್ಮದು ಎಂತ ಕರ್ಮ ನೋಡಿ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶಿವಮೊಗ್ಗದ ರಾಗಿಗುಡ್ಡಕ್ಕೆ ತೆರಳುತ್ತಿದ್ದ ಪ್ರಮೋದ್ ಮುತಾಲಿಕ್ ಅವರನ್ನು ಶಿವಮೊಗ್ಗದ ಮಾಸ್ತಿಕಟ್ಟೆ ಬಳಿ ತಡರಾತ್ರಿ ಪೊಲೀಸರು ವಶಕ್ಕೆ ಪಡೆದಿದ್ದರು. ಪ್ರಚೋದನಕಾರಿ ಭಾಷಣ ಹಿನ್ನಲೆ ಮುನ್ನೆಚ್ಚರಿಕೆ ಕ್ರಮವಾಗಿ ಪ್ರಮೋದ್ ಮುತಾಲಿಕ್ ಅವರನ್ನು ಬಂಧಿಸಿದ ಪೊಲೀಸರು ಅವರನ್ನು ಶಿವಮೊಗ್ಗ ಗಡಿ ದಾಟಿಸಿ ದಾವಣಗೆರೆಗೆ ತಂದು ಬಿಟ್ಟಿದ್ದರು. ಪೊಲೀಸರ ನಡೆಯನ್ನು ಪ್ರಮೋದ್ ಮುತಾಲಿಕ್ ಖಂಡಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ದಾವಣಗೆರೆಯಲ್ಲಿ ಈ ಬಗ್ಗೆ ಮಾತನಾಡಿದ ಅವರು, ಪೊಲೀಸರು ನನ್ನ ಬಸ್ ಟ್ರೇಸ್ ಮಾಡಿ ಬಂಧಿಸಿದ್ದಾರೆ. ಬೆಳಗ್ಗೆ 6 ಗಂಟೆಗೆ ದಾವಣಗೆರೆಗೆ ತಂದು ಬಿಟ್ಟಿದ್ದಾರೆ. ನಾನೇನು ಶಿವಮೊಗ್ಗದ ರಾಗಿಗುಡ್ಡದಲ್ಲಿ ಪ್ರಚೋದನಕಾರಿ ಭಾಷಣ ಮಾಡಲು ಹೊರಟಿರಲಿಲ್ಲ. ನಮ್ಮದು ಎಂತ ಕರ್ಮ ನೋಡಿ ಎಂದ ಪ್ರಮೋದ್ ಮುತಾಲಿಕ್ ಅವರು, ಕಾಂಗ್ರೆಸ್ ಹಿಂದು ವಿರೋಧಿ ಎನ್ನುವುದು ಇದರಿಂದ ಸ್ಪಷ್ಟ ಆಗಿದೆ ಎಂದರು.
ಹಿಂದೂ ನಾಯಕರು ಮತ್ತು ಸಂಘಟನೆಗಳ ನಾಯಕರ ಮೇಲೆ ಕೇಸ್ ಹಾಕುವುದು. ಹಿಂದೂ ನಾಯಕರನ್ನ ಹತ್ತಿಕ್ಕುವುದು ಸರ್ಕಾರದ ಉದ್ದೇಶ ಆಗಿದೆ. ಅಧಿಕಾರಕ್ಕೆ ಬಂದಾಗಿನಿಂದ ಕಾಂಗ್ರೆಸ್ ಇದನ್ನೇ ಮಾಡುತ್ತಿದೆ. ನನ್ನ ಬಂಧಿಸಿರುವ ಸರ್ಕಾರದ ನೀತಿ ಖಂಡನೀಯ. ರಾಗಿಗುಡ್ಡಕ್ಕೆ 15 ದಿನ ಹೋಗದಂತೆ ನಿರ್ಬಂಧ ಹಾಕಿದೆ. ಇದು ಕಾಂಗ್ರೆಸ್ ಸರ್ಕಾರದ ನೀತಿ ಎಂದು ಹೇಳಿದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…