Featured

ಹಿಂದೂ ನಾಯಕರನ್ನು ಹತ್ತಿಕ್ಕುವುದೇ ಸರ್ಕಾರದ ಉದ್ದೇಶ : ಪ್ರಮೋದ್‌ ಮುತಾಲಿಕ್‌ ಆಕ್ರೋಶ – Vishwanews24

ಹಿಂದೂ ನಾಯಕರನ್ನು ಹತ್ತಿಕ್ಕುವುದೇ ಸರ್ಕಾರದ ಉದ್ದೇಶ : ಪ್ರಮೋದ್‌ ಮುತಾಲಿಕ್‌ ಆಕ್ರೋಶ

ದಾವಣಗೆರೆ : ರಾಜ್ಯದಲ್ಲಿ ಹಿಂದೂಗಳಿಗೆ ಸ್ವಾತಂತ್ರ್ಯವಿಲ್ಲ. ರಾಗಿಗುಡ್ಡದ ಹಿಂದೂ ಸಮುದಾಯದವರಿಗೆ ಸಾಂತ್ವನ ಹೇಳಲು ಹೊರಟಿದ್ದೆ. ನಾನೇನು ಅಲ್ಲಿ ಪ್ರಚೋದನಕಾರಿ ಭಾಷಣ ಮಾಡಲು ಹೊರಟಿರಲಿಲ್ಲ. ನಮ್ಮದು ಎಂತ ಕರ್ಮ ನೋಡಿ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್‌ ಮುತಾಲಿಕ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಿವಮೊಗ್ಗದ ರಾಗಿಗುಡ್ಡಕ್ಕೆ ತೆರಳುತ್ತಿದ್ದ ಪ್ರಮೋದ್ ಮುತಾಲಿಕ್ ಅವರನ್ನು ಶಿವಮೊಗ್ಗದ ಮಾಸ್ತಿಕಟ್ಟೆ ಬಳಿ ತಡರಾತ್ರಿ ಪೊಲೀಸರು ವಶಕ್ಕೆ ಪಡೆದಿದ್ದರು. ಪ್ರಚೋದನಕಾರಿ ಭಾಷಣ ಹಿನ್ನಲೆ ಮುನ್ನೆಚ್ಚರಿಕೆ ಕ್ರಮವಾಗಿ ಪ್ರಮೋದ್‌ ಮುತಾಲಿಕ್‌ ಅವರನ್ನು ಬಂಧಿಸಿದ ಪೊಲೀಸರು ಅವರನ್ನು ಶಿವಮೊಗ್ಗ ಗಡಿ ದಾಟಿಸಿ ದಾವಣಗೆರೆಗೆ ತಂದು ಬಿಟ್ಟಿದ್ದರು. ಪೊಲೀಸರ ನಡೆಯನ್ನು ಪ್ರಮೋದ್‌ ಮುತಾಲಿಕ್‌ ಖಂಡಿಸಿದ್ದು, ಕಾಂಗ್ರೆಸ್‌ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ದಾವಣಗೆರೆಯಲ್ಲಿ ಈ ಬಗ್ಗೆ ಮಾತನಾಡಿದ ಅವರು, ಪೊಲೀಸರು ನನ್ನ ಬಸ್ ಟ್ರೇಸ್ ಮಾಡಿ ಬಂಧಿಸಿದ್ದಾರೆ. ಬೆಳಗ್ಗೆ 6 ಗಂಟೆಗೆ ದಾವಣಗೆರೆಗೆ ತಂದು ಬಿಟ್ಟಿದ್ದಾರೆ. ನಾನೇನು ಶಿವಮೊಗ್ಗದ ರಾಗಿಗುಡ್ಡದಲ್ಲಿ ಪ್ರಚೋದನಕಾರಿ ಭಾಷಣ ಮಾಡಲು ಹೊರಟಿರಲಿಲ್ಲ. ನಮ್ಮದು ಎಂತ ಕರ್ಮ ನೋಡಿ ಎಂದ ಪ್ರಮೋದ್ ಮುತಾಲಿಕ್ ಅವರು, ಕಾಂಗ್ರೆಸ್ ಹಿಂದು ವಿರೋಧಿ ಎನ್ನುವುದು ಇದರಿಂದ ಸ್ಪಷ್ಟ ಆಗಿದೆ ಎಂದರು.

ಹಿಂದೂ ನಾಯಕರು ಮತ್ತು ಸಂಘಟನೆಗಳ ನಾಯಕರ ಮೇಲೆ ಕೇಸ್ ಹಾಕುವುದು. ಹಿಂದೂ ನಾಯಕರನ್ನ ಹತ್ತಿಕ್ಕುವುದು ಸರ್ಕಾರದ ಉದ್ದೇಶ ಆಗಿದೆ. ಅಧಿಕಾರಕ್ಕೆ ಬಂದಾಗಿನಿಂದ ಕಾಂಗ್ರೆಸ್‌ ಇದನ್ನೇ ಮಾಡುತ್ತಿದೆ. ನನ್ನ ಬಂಧಿಸಿರುವ ಸರ್ಕಾರದ ನೀತಿ ಖಂಡನೀಯ. ರಾಗಿಗುಡ್ಡಕ್ಕೆ 15 ದಿನ ಹೋಗದಂತೆ ನಿರ್ಬಂಧ ಹಾಕಿದೆ. ಇದು ಕಾಂಗ್ರೆಸ್ ಸರ್ಕಾರದ ನೀತಿ ಎಂದು ಹೇಳಿದರು.

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

13 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

15 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

16 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

16 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

16 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

16 hours ago