Featured

ಹಿಂದೂ ನಾಯಕರಿಗೆ ಯಾವುದೇ ಸಮಸ್ಯೆಯಾದರೆ ಅದಕ್ಕೆ ತಕ್ಕ ಪ್ರತಿಕ್ರಿಯೆ ನೀಡಲು ಕರಾವಳಿಯ ಹಿಂದೂ ಸಮಾಜ ಸಿದ್ಧವಿದೆ : ಬಿಜೆಪಿ ಮುಖಂಡ ಯಶಪಾಲ್‌ ಸುವರ್ಣ

ಉಡುಪಿ: ಹಿಂದೂ ಮುಖಂಡರಾದ ಕಲ್ಲಡ್ಕ ಪ್ರಭಾಕರ ಭಟ್‌, ಶರಣ್‌ ಪಂಪ್‌ವೆಲ್‌ ಮತ್ತು ಜಗದೀಶ ಶೇಣವ ಅವರ ಹತ್ಯೆಗೆ ಸಂಚು ರೂಪಿಸಲಾಗಿದೆ ಎಂಬ ವಿಷಯ ನಿಜಕ್ಕೂ ಅತಂಕಕಾರಿ. ರಾಜ್ಯ ಸರಕಾರ ಹಿಂದೂ ನಾಯಕರಿಗೆ ಹೆಚ್ಚಿನ ಭದ್ರತೆ ಒದಗಿಸಬೇಕು ಎಂದು ಬಿಜೆಪಿ ಮುಖಂಡ ಯಶಪಾಲ್‌ ಸುವರ್ಣ ಆಗ್ರಹಿಸಿದ್ದಾರೆ.

ರಾಷ್ಟ್ರೀಯವಾದಿ, ಹಿಂದೂ ಪರ ಸಂಘಟನೆಗಳ ದಮನಕ್ಕೆ ವಿದೇಶಿ ಶಕ್ತಿಗಳ ಜತೆಗೆ ಇಲ್ಲಿನ ಕೆಲವು ಸಮಾಜಘಾತುಕರು ಕೈ ಜೋಡಿಸಿದ್ದು, ಇವರನ್ನು ಎದುರಿಸುವ ಶಕ್ತಿ ಹಿಂದೂ ಸಮಾಜಕ್ಕಿದೆ. ಹಿಂದೂ ನಾಯಕರಿಗೆ ಯಾವುದೇ ಸಮಸ್ಯೆಯಾದರೆ ಅದಕ್ಕೆ ತಕ್ಕ ಪ್ರತಿಕ್ರಿಯೆ ನೀಡಲು ಕರಾವಳಿಯ ಹಿಂದೂ ಸಮಾಜ ಸಿದ್ಧವಿದೆ ಎಂದು ಅವರು ಎಚ್ಚರಿಸಿದ್ದಾರೆ.

ಚುನಾವಣೆ ಸಮೀಪಿಸುತ್ತಿರುವ ಕಾರಣ ನಿರ್ದಿಷ್ಟ ಸಮುದಾಯವೊಂದರ ಮತ ಕ್ರೋಡೀಕರಣಕ್ಕೆ ಮುಂದಾಗಿದೆ.ಈ ಹಿಂದೆಯೂ ಹಲವಾರು ಬಾರಿ ಚುನಾವಣೆಯ ಸಮಯದಲ್ಲಿ ಹಿಂದೂ ಮುಖಂಡರ ಹತ್ಯೆ ಯತ್ನ ನಡೆಸಿ ಕೋಮುಗಲಭೆ ಎಬ್ಬಿಸುವ ಹುನ್ನಾರ ನಡೆದಿತ್ತು. ಸಮಾಜದಲ್ಲಿ ಅಶಾಂತಿ, ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿರುವವರನ್ನು ಸರ್ಕಾರ ಮಟ್ಟ ಹಾಕಬೇಕು ಎಂದು ಯಶಪಾಲ್ ಒತ್ತಾಯಿಸಿದ್ದಾರೆ.

ದೇಶದ ಭದ್ರತಾ ವ್ಯವಸ್ಥೆ ಅತ್ಯಂತ ಬಲಿಷ್ಠವಾಗಿದ್ದು, ರಾಷ್ಟ್ರಘಾತುಕ ಶಕ್ತಿಗಳನ್ನು ಮಟ್ಟ ಹಾಕುವ ಸಾಮರ್ಥ್ಯ‌ ನಮ್ಮ ಇಲಾಖೆಗಳಿಗಿದೆ. ಆದರೆ ದೇಶದ ಒಳಗಿದ್ದುಕೊಂಡು ಈ ರೀತಿಯ ಕಾರ್ಯಗಳಿಗೆ ಕುಮ್ಮಕ್ಕು ನೀಡುವ ದುಷ್ಕರ್ಮಿಗಳನ್ನು ನಿಗ್ರಹಿಸುವುದು ದೊಡ್ಡ ಸವಾಲಾಗಿದೆ. ರಾಜ್ಯ ಸರಕಾರ ಈ ವಿಚಾರದಲ್ಲಿ ತನ್ನ ತುಷ್ಟೀಕರಣ ನೀತಿಯನ್ನು ಪಕ್ಕಕ್ಕಿಟ್ಟು ಮತೀಯವಾದಿ ಶಕ್ತಿಗಳನ್ನು ಕಠಿಣ ಕ್ರಮದ ಮೂಲಕ ಹತ್ತಿಕ್ಕಬೇಕು ಎಂದು ಅವರು ಆಗ್ರಹಿಸಿದ್ದಾರೆ.

Vishwa News 24

Recent Posts

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

3 minutes ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

2 hours ago

ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು – vishwanews24

ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…

3 hours ago

ಕರ್ನಾಟಕ ವಿಧಾನಸಭೆ ನೂತನ ಸ್ಪೀಕರ್​ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ – vishwanews24

ಕರ್ನಾಟಕ ವಿಧಾನಸಭೆ ಸ್ಪೀಕರ್​ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…

3 hours ago

ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು : 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ – vishwanews24

ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…

3 hours ago

ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ  ಸ್ಪಂದಿಸಿದ ಸಿಎಂ  – vishwanews24

ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ  ಸ್ಪಂದಿಸಿದ ಸಿಎಂ  ಚುನಾವಣೆ, ಪಕ್ಷ ಸಂಘಟನೆ ಕಾರಣ…

3 hours ago