Featured

ಹಿಂದೂ ನಾಯಕರಿಗೆ ಯಾವುದೇ ಸಮಸ್ಯೆಯಾದರೆ ಅದಕ್ಕೆ ತಕ್ಕ ಪ್ರತಿಕ್ರಿಯೆ ನೀಡಲು ಕರಾವಳಿಯ ಹಿಂದೂ ಸಮಾಜ ಸಿದ್ಧವಿದೆ : ಬಿಜೆಪಿ ಮುಖಂಡ ಯಶಪಾಲ್‌ ಸುವರ್ಣ

ಉಡುಪಿ: ಹಿಂದೂ ಮುಖಂಡರಾದ ಕಲ್ಲಡ್ಕ ಪ್ರಭಾಕರ ಭಟ್‌, ಶರಣ್‌ ಪಂಪ್‌ವೆಲ್‌ ಮತ್ತು ಜಗದೀಶ ಶೇಣವ ಅವರ ಹತ್ಯೆಗೆ ಸಂಚು ರೂಪಿಸಲಾಗಿದೆ ಎಂಬ ವಿಷಯ ನಿಜಕ್ಕೂ ಅತಂಕಕಾರಿ. ರಾಜ್ಯ ಸರಕಾರ ಹಿಂದೂ ನಾಯಕರಿಗೆ ಹೆಚ್ಚಿನ ಭದ್ರತೆ ಒದಗಿಸಬೇಕು ಎಂದು ಬಿಜೆಪಿ ಮುಖಂಡ ಯಶಪಾಲ್‌ ಸುವರ್ಣ ಆಗ್ರಹಿಸಿದ್ದಾರೆ.

ರಾಷ್ಟ್ರೀಯವಾದಿ, ಹಿಂದೂ ಪರ ಸಂಘಟನೆಗಳ ದಮನಕ್ಕೆ ವಿದೇಶಿ ಶಕ್ತಿಗಳ ಜತೆಗೆ ಇಲ್ಲಿನ ಕೆಲವು ಸಮಾಜಘಾತುಕರು ಕೈ ಜೋಡಿಸಿದ್ದು, ಇವರನ್ನು ಎದುರಿಸುವ ಶಕ್ತಿ ಹಿಂದೂ ಸಮಾಜಕ್ಕಿದೆ. ಹಿಂದೂ ನಾಯಕರಿಗೆ ಯಾವುದೇ ಸಮಸ್ಯೆಯಾದರೆ ಅದಕ್ಕೆ ತಕ್ಕ ಪ್ರತಿಕ್ರಿಯೆ ನೀಡಲು ಕರಾವಳಿಯ ಹಿಂದೂ ಸಮಾಜ ಸಿದ್ಧವಿದೆ ಎಂದು ಅವರು ಎಚ್ಚರಿಸಿದ್ದಾರೆ.

ಚುನಾವಣೆ ಸಮೀಪಿಸುತ್ತಿರುವ ಕಾರಣ ನಿರ್ದಿಷ್ಟ ಸಮುದಾಯವೊಂದರ ಮತ ಕ್ರೋಡೀಕರಣಕ್ಕೆ ಮುಂದಾಗಿದೆ.ಈ ಹಿಂದೆಯೂ ಹಲವಾರು ಬಾರಿ ಚುನಾವಣೆಯ ಸಮಯದಲ್ಲಿ ಹಿಂದೂ ಮುಖಂಡರ ಹತ್ಯೆ ಯತ್ನ ನಡೆಸಿ ಕೋಮುಗಲಭೆ ಎಬ್ಬಿಸುವ ಹುನ್ನಾರ ನಡೆದಿತ್ತು. ಸಮಾಜದಲ್ಲಿ ಅಶಾಂತಿ, ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿರುವವರನ್ನು ಸರ್ಕಾರ ಮಟ್ಟ ಹಾಕಬೇಕು ಎಂದು ಯಶಪಾಲ್ ಒತ್ತಾಯಿಸಿದ್ದಾರೆ.

ದೇಶದ ಭದ್ರತಾ ವ್ಯವಸ್ಥೆ ಅತ್ಯಂತ ಬಲಿಷ್ಠವಾಗಿದ್ದು, ರಾಷ್ಟ್ರಘಾತುಕ ಶಕ್ತಿಗಳನ್ನು ಮಟ್ಟ ಹಾಕುವ ಸಾಮರ್ಥ್ಯ‌ ನಮ್ಮ ಇಲಾಖೆಗಳಿಗಿದೆ. ಆದರೆ ದೇಶದ ಒಳಗಿದ್ದುಕೊಂಡು ಈ ರೀತಿಯ ಕಾರ್ಯಗಳಿಗೆ ಕುಮ್ಮಕ್ಕು ನೀಡುವ ದುಷ್ಕರ್ಮಿಗಳನ್ನು ನಿಗ್ರಹಿಸುವುದು ದೊಡ್ಡ ಸವಾಲಾಗಿದೆ. ರಾಜ್ಯ ಸರಕಾರ ಈ ವಿಚಾರದಲ್ಲಿ ತನ್ನ ತುಷ್ಟೀಕರಣ ನೀತಿಯನ್ನು ಪಕ್ಕಕ್ಕಿಟ್ಟು ಮತೀಯವಾದಿ ಶಕ್ತಿಗಳನ್ನು ಕಠಿಣ ಕ್ರಮದ ಮೂಲಕ ಹತ್ತಿಕ್ಕಬೇಕು ಎಂದು ಅವರು ಆಗ್ರಹಿಸಿದ್ದಾರೆ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

5 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

6 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

7 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

8 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

8 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

9 hours ago