ಉಡುಪಿ: ಹಿಂದೂ ಮುಖಂಡರಾದ ಕಲ್ಲಡ್ಕ ಪ್ರಭಾಕರ ಭಟ್, ಶರಣ್ ಪಂಪ್ವೆಲ್ ಮತ್ತು ಜಗದೀಶ ಶೇಣವ ಅವರ ಹತ್ಯೆಗೆ ಸಂಚು ರೂಪಿಸಲಾಗಿದೆ ಎಂಬ ವಿಷಯ ನಿಜಕ್ಕೂ ಅತಂಕಕಾರಿ. ರಾಜ್ಯ ಸರಕಾರ ಹಿಂದೂ ನಾಯಕರಿಗೆ ಹೆಚ್ಚಿನ ಭದ್ರತೆ ಒದಗಿಸಬೇಕು ಎಂದು ಬಿಜೆಪಿ ಮುಖಂಡ ಯಶಪಾಲ್ ಸುವರ್ಣ ಆಗ್ರಹಿಸಿದ್ದಾರೆ.
ರಾಷ್ಟ್ರೀಯವಾದಿ, ಹಿಂದೂ ಪರ ಸಂಘಟನೆಗಳ ದಮನಕ್ಕೆ ವಿದೇಶಿ ಶಕ್ತಿಗಳ ಜತೆಗೆ ಇಲ್ಲಿನ ಕೆಲವು ಸಮಾಜಘಾತುಕರು ಕೈ ಜೋಡಿಸಿದ್ದು, ಇವರನ್ನು ಎದುರಿಸುವ ಶಕ್ತಿ ಹಿಂದೂ ಸಮಾಜಕ್ಕಿದೆ. ಹಿಂದೂ ನಾಯಕರಿಗೆ ಯಾವುದೇ ಸಮಸ್ಯೆಯಾದರೆ ಅದಕ್ಕೆ ತಕ್ಕ ಪ್ರತಿಕ್ರಿಯೆ ನೀಡಲು ಕರಾವಳಿಯ ಹಿಂದೂ ಸಮಾಜ ಸಿದ್ಧವಿದೆ ಎಂದು ಅವರು ಎಚ್ಚರಿಸಿದ್ದಾರೆ.
ಚುನಾವಣೆ ಸಮೀಪಿಸುತ್ತಿರುವ ಕಾರಣ ನಿರ್ದಿಷ್ಟ ಸಮುದಾಯವೊಂದರ ಮತ ಕ್ರೋಡೀಕರಣಕ್ಕೆ ಮುಂದಾಗಿದೆ.ಈ ಹಿಂದೆಯೂ ಹಲವಾರು ಬಾರಿ ಚುನಾವಣೆಯ ಸಮಯದಲ್ಲಿ ಹಿಂದೂ ಮುಖಂಡರ ಹತ್ಯೆ ಯತ್ನ ನಡೆಸಿ ಕೋಮುಗಲಭೆ ಎಬ್ಬಿಸುವ ಹುನ್ನಾರ ನಡೆದಿತ್ತು. ಸಮಾಜದಲ್ಲಿ ಅಶಾಂತಿ, ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿರುವವರನ್ನು ಸರ್ಕಾರ ಮಟ್ಟ ಹಾಕಬೇಕು ಎಂದು ಯಶಪಾಲ್ ಒತ್ತಾಯಿಸಿದ್ದಾರೆ.
ದೇಶದ ಭದ್ರತಾ ವ್ಯವಸ್ಥೆ ಅತ್ಯಂತ ಬಲಿಷ್ಠವಾಗಿದ್ದು, ರಾಷ್ಟ್ರಘಾತುಕ ಶಕ್ತಿಗಳನ್ನು ಮಟ್ಟ ಹಾಕುವ ಸಾಮರ್ಥ್ಯ ನಮ್ಮ ಇಲಾಖೆಗಳಿಗಿದೆ. ಆದರೆ ದೇಶದ ಒಳಗಿದ್ದುಕೊಂಡು ಈ ರೀತಿಯ ಕಾರ್ಯಗಳಿಗೆ ಕುಮ್ಮಕ್ಕು ನೀಡುವ ದುಷ್ಕರ್ಮಿಗಳನ್ನು ನಿಗ್ರಹಿಸುವುದು ದೊಡ್ಡ ಸವಾಲಾಗಿದೆ. ರಾಜ್ಯ ಸರಕಾರ ಈ ವಿಚಾರದಲ್ಲಿ ತನ್ನ ತುಷ್ಟೀಕರಣ ನೀತಿಯನ್ನು ಪಕ್ಕಕ್ಕಿಟ್ಟು ಮತೀಯವಾದಿ ಶಕ್ತಿಗಳನ್ನು ಕಠಿಣ ಕ್ರಮದ ಮೂಲಕ ಹತ್ತಿಕ್ಕಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…