Featured

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ

ಉಡುಪಿ: ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಜಿಲ್ಲೆಯ ವಿವಿಧ ಕಾರ್ಯಕ್ರಮಗಳಿಗೆ ಆಗಮಿಸಲಿರುವ ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧಿಸಿರುವುದನ್ನು ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಉಡುಪಿ ಜಿಲ್ಲಾ ಘಟಕ ತೀವ್ರವಾಗಿ ಖಂಡಿಸಿದೆ.

ಪ್ರತಿವರ್ಷ ಜಿಲ್ಲೆಯಲ್ಲಿ ನಡೆಯುವ ಪಂಜಿನ ಮೆರವಣಿಗೆಯು ದೇಶಕ್ಕಾಗಿ ಬಲಿದಾನಗೈದ ವೀರ ಪುರುಷರ ಇತಿಹಾಸವನ್ನು ಯುವ ಸಮುದಾಯಕ್ಕೆ ಪರಿಚಯಿಸುವ ಹಾಗೂ ಜಾಗೃತಿ ಮೂಡಿಸುವ ಕಾರ್ಯಕ್ರಮವಾಗಿದೆ. ಈ ಕಾರ್ಯಕ್ರಮದಿಂದ ಸಮಾಜದಲ್ಲಿ ಯಾವುದೇ ಅಶಾಂತಿ ಉಂಟಾಗುವುದಿಲ್ಲ ಎಂದು ವಿಹಿಂಪ–ಬಜರಂಗದಳದ ಮುಖಂಡರು ತಿಳಿಸಿದ್ದಾರೆ.

ಪಂಜಿನ ಮೆರವಣಿಗೆ ಕಾರ್ಯಕ್ರಮಕ್ಕೆ ಆಗಮಿಸಲಿರುವ ಬಜರಂಗದಳ ಮುಖಂಡ ಪುನೀತ್ ಅತ್ತಾವರ ಹಾಗೂ ಹಿಂದೂ ಜಾಗರಣ ವೇದಿಕೆಯ ನರಸಿಂಹ ಮಾಣಿ ಅವರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿಯಾಗಿದೆ ಎಂದು ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ದಿನೇಶ್ ಮೆಂಡನ್ ಆರೋಪಿಸಿದ್ದಾರೆ.

ಹಿಂದೂ ಸಂಘಟನೆಗಳ ವಿರುದ್ಧ ಇಂತಹ ದಮನಕಾರಿ ಕ್ರಮಗಳನ್ನು ಮುಂದುವರಿಸಿದರೆ, ಮುಂದಿನ ದಿನಗಳಲ್ಲಿ ಎಲ್ಲಾ ಹಿಂದೂ ಸಂಘಟನೆಗಳ ಸಹಯೋಗದೊಂದಿಗೆ ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.

Vishwa News 24

Recent Posts

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

4 minutes ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

44 minutes ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

1 hour ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

2 hours ago

ಕಟಪಾಡಿ: ಮಟ್ಟು ಬೀಚ್‌ನಲ್ಲಿ ಮುಂದುವರಿದ ಕಡಲ್ಕೊರೆತ – vishwanews24

ಕಟಪಾಡಿ: ಮಟ್ಟು ಬೀಚ್‌ನಲ್ಲಿ ಮುಂದುವರಿದ ಕಡಲ್ಕೊರೆತ ಕಟಪಾಡಿ: ಕಾಪು ತಾಲೂಕು ಕೋಟೆ ಗ್ರಾ.ಪಂ. ವ್ಯಾಪ್ತಿಯ ಮಟ್ಟು ಬೀಚ್‌ನಲ್ಲಿ ಕಡಲ್ಕೂರೆತ ಮುಂದುವರಿದಿದೆ.…

2 hours ago

ರಾಜ್ಯದ ಹಿತಕ್ಕಾಗಿ ಬಂದ್ ವಾಪಸ್ ಪಡೆದಿರುವ ಎಲ್ಲಾ ಸಂಘಟನೆಗಳಿಗೆ ಧನ್ಯವಾದಗಳು : ಸಿಎಂ – vishwanews24

ರಾಜ್ಯದ ಹಿತಕ್ಕಾಗಿ ಬಂದ್ ವಾಪಸ್ ಪಡೆದಿರುವ ಎಲ್ಲಾ ಸಂಘಟನೆಗಳಿಗೆ ಧನ್ಯವಾದಗಳು :ಸಿಎಂ   ಬೆಂಗಳೂರು: ʻರಾಜ್ಯದ ಹಿತಕ್ಕಾಗಿ ಬಂದ್ ವಾಪಸ್ ಪಡೆದಿರುವ…

2 hours ago