Featured

ಹಿಂದೂ ಸಂಪ್ರದಾಯದಂತೆ ತಮಿಳುನಾಡಿನ ಬ್ರಾಹ್ಮಣ ಯುವತಿಯ ಜೊತೆ ಸಪ್ತಪದಿ ತುಳಿದ ಬಾಂಗ್ಲಾ ಮಹಿಳೆ

ಹಿಂದೂ ಸಂಪ್ರದಾಯದಂತೆ ತಮಿಳುನಾಡಿನ ಬ್ರಾಹ್ಮಣ ಯುವತಿಯ ಜೊತೆ ಸಪ್ತಪದಿ ತುಳಿದ ಬಾಂಗ್ಲಾ ಮಹಿಳೆ

ಒಟ್ಟಾವಾ: ತಮಿಳುನಾಡಿನ ಬ್ರಾಹ್ಮಣ ಕುಟುಂಬದ ಯುವತಿ ಬಾಂಗ್ಲಾದೇಶದ ಮಹಿಳೆಯೊಂದಿಗೆ ಹಿಂದೂ ಸಂಪ್ರದಾಯದಂತೆ ಸಪ್ತಪದಿ ತುಳಿದಿರುವ ಅಚ್ಚರಿ ಘಟನೆ ಬೆಳಕಿಗೆ ಬಂದಿದೆ.

ಕೆನಡಾದ ಕ್ಯಾಲ್ಗರಿಯಲ್ಲಿ ನೆಲೆಸಿರುವ ತಮಿಳುನಾಡಿನ ಯುವತಿ ಸುಭೀಕ್ಷಾ ಸುಬ್ರಮಣಿ (29) ಹಾಗೂ ಬಾಂಗ್ಲಾದೇಶದ ಮಹಿಳೆ ಟೀನಾ (35) ಇಬ್ಬರೂ ಕಳೆದ 6 ವರ್ಷಗಳ ಹಿಂದೆ ಡೇಟಿಂಗ್ ಆಪ್ ಮೂಲಕ ಪರಿಚಯವಾಗಿದ್ದಾರೆ. ನಂತರ ಇಬ್ಬರ ಪರಿಚಯ ಪ್ರೀತಿಗೆ ತಿರುಗಿದ್ದು, ಮದುವೆಯಾಗಲು ನಿರ್ಧರಿಸಿದ್ದರು. ಇದಕ್ಕೆ ಎರಡೂ ಕುಟುಂಬಸ್ಥರೂ ಪೂರ್ಣ ಸಹಕಾರ ನೀಡಿದ್ದರಿಂದಾಗಿ ಹಿಂದೂ ಸಂಪ್ರದಾಯದಂತೆ ಸಪ್ತಪದಿ ತುಳಿದಿದ್ದಾರೆ.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿರುವ ಸುಭೀಕ್ಷಾ, ನಮ್ಮ ಪೋಷಕರು ಸಂಪ್ರದಾಯವಾದಿಗಳು, ಹಿಂದೂ ಶೈಲಿಯಲ್ಲಿ ಮದುವೆಯಾಗಲು ಒಪ್ಪಿಗೆ ನೀಡುತ್ತಾರೆಯೇ ಎಂಬ ಆತಂಕದಲ್ಲಿದ್ದೆ. ಆದರೆ ಅವರು ಯಾವುದೇ ವಿರೋಧವಿಲ್ಲದೇ ನಮ್ಮ ಬೆಂಬಲಕ್ಕೆ ನಿಂತರು. ಬ್ರಾಹ್ಮಣ ವಿವಾಹ ಕ್ರಮದಂತೆ ಎಲ್ಲಾ ವಿಧಿವಿಧಾನಗಳನ್ನು ನೆರವೇರಿಸಿದರು ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

ಟೀನಾ ಸಹ ಇದರಿಂದ ಹರ್ಷಗೊಂಡಿದ್ದು, ನನಗೆ 19 ವರ್ಷ ಇದ್ದಾಗಲೇ ಬೇರೆ ವ್ಯಕ್ತಿಯೊಂದಿಗೆ ಮದುವೆಯಾಗಿತ್ತು. ಆದರೆ ನನಗೆ ಸಲಿಂಗಿಗಳ ಕಡೆಗೆ ಒಲವಿತ್ತು. ತಾನು ಸುಭೀಕ್ಷಾಳನ್ನು ಮದುವೆಯಾಗಬೇಕು ಅಂದುಕೊಂಡಾಗ ಆಕೆಯ ಸಹೋದರಿ ವಿರೋಧಿಸಿದ್ದರು. ಆದರೆ ಸುಭೀಕ್ಷಾಳ 84 ವರ್ಷದ ಅಜ್ಜಿ ಮದುವೆಗೆ ಒಪ್ಪಿದ ನಂತರ ಎಲ್ಲರೂ ಒಪ್ಪಿಕೊಂಡು ಮದುವೆ ನೆರವೇರಿಸಿಕೊಟ್ಟರು.

ತಮಿಳುನಾಡಿನ ಮೂಲದ ಸುಭೀಕ್ಷಾ ಕೆನಡಾದಲ್ಲಿ ಚಾರ್ಟರ್ಡ್ ಅಕೌಂಟೆಂಟ್ (ಸಿಎ) ಆಗಿ ಕೆಲಸ ಮಾಡುತ್ತಿದ್ದಾರೆ. ಬಾಂಗ್ಲಾದೇಶ ಮೂಲದ ಟೀನಾ 2003ರಲ್ಲಿ ಕೆನಡಾಕ್ಕೆ ಬಂದು ನೆಲೆಸಿದ್ದು, ಕ್ಯಾಲ್ಗರಿಯ ಫೂತ್‌ಹಿಲ್ಸ್ ಆಸ್ಪತ್ರೆಯ ಪೇಷೆಂಟ್ ಕೇರ್ ಮುಖ್ಯಸ್ಥರಾಗಿ ಕೆಲಸ ಮಾಡುತ್ತಿದ್ದಾರೆ.

ಮಣಿಪಾಲ :ಮಣ್ಣಪಳ್ಳವನ್ನು ಪ್ರವಾಸೀ ತಾಣವಾಗಿ ಅಭಿವೃಧ್ದಿಪಡಿಸುವ ನಿಟ್ಟಿನಲ್ಲಿ ಕ್ರಾಪ್ಟ್ ವಿಲೇಜ್ ಮಾಡಲು ರೂಪುರೇಷೆ ಸಿದ್ದಪಡಿಸಿ : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. – Vishwanews24

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

12 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

12 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

12 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

15 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

15 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

16 hours ago