Featured

ಹಿಂದೂ ಸಹೊದರಿಯ ಮದುವೆ ಮಾಡಿಸಿಕೊಟ್ಟ ಉಳ್ಳಾಲದ ಮುಸ್ಲಿಂ ಕುಟುಂಬ -Vishwanews24

ಹಿಂದೂ ಸಹೊದರಿಯ ಮದುವೆ ಮಾಡಿಸಿಕೊಟ್ಟ ಉಳ್ಳಾಲದ ಮುಸ್ಲಿಂ ಕುಟುಂಬ -Vishwanews24

ಮಂಗಳೂರಿನ ಉಳ್ಳಾಲದಲ್ಲೊಂದು ಕೋಮು ಭಾವೈಕತೆ ಸಾರುವ ಅಪರೂಪದ ಘಟನೆ ನಡೆದಿದೆ. ಹೌದು, ಕವನ ಎಂಬ ಹಿಂದೂ ಯುವತಿಯ ಮದುವೆಯನ್ನು ಮುಸ್ಲಿಂ ಕುಟುಂಬವೇ ನಿಂತು ಮಾಡಿರುವುದು ವಿಶೇಷ. ಮೂಲತಃ ಮಂಗಳೂರಿನ ಶಕ್ತಿನಗರದ ಮೂಲದವರಾದ ಕವನ, ತಮ್ಮ ತಾಯಿ ಗೀತಾರೊಂದಿಗೆ ಉಳ್ಳಾಲ ಮಂಚಿಲದ ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದರು. ಯುವತಿ ಕವನಳಿಗೆ ಸಂಬಂಧ ಕೂಡಿಬಂದು ಜುಲೈ 11 ರಂದು ಮದುವೆ ನಿಗದಿಯಾಗಿತ್ತು. ಆದರೆ, ಮದುವೆಗೆ ಹಣದ ಕೊರತೆ ಉಂಟಾಗಿ ಮದುವೆ ನಿಲ್ಲುವ ಹಂತಕ್ಕೆ ತಲುಪಿತ್ತು. ಈ ವಿಷಯವನ್ನರಿತ ಸಂಬಂಧಿ ಸುರೇಶ್ ಎಂಬುವವರು ಆತ್ಮೀಯ ಗೆಳೆಯ ಎಂ.ಕೆ. ರಝಾಕ್ ಎಂಬುವವರೊಂದಿಗೆ ನೋವು ಹಂಚಿಕೊಂಡಿದ್ದರು. ಆನಂತರ ನಡೆದದ್ದೇ ಬೇರೆ. ಕವನಳ ಬಾಳಿಗೆ ಎಂ.ಕೆ. ಕುಟುಂಬ ಅಭಯಹಸ್ತ ನೀಡುವ ಮೂಲಕ ಮದುವೆ ಸುಸೂತ್ರವಾಗಿ ನಡೆಯಿತು. ಪ್ರಾರಂಭದಲ್ಲಿ ಎಂ.ಕೆ. ರಝಾಕ್ ಮತ್ತು ಎಂ.ಕೆ. ರಿಯಾಝ್, ಹನೀಫ್ ಜಿದ್ದಾ ಅವರು ಯುವತಿ ಕವನಳ ಕುಟುಂಬದ ಸಮೀಕ್ಷೆ ನಡೆಸಿ ಕೂಡಲೇ ಮನೆಗೆ ಗ್ಯಾಸ್, ರೇಶನ್ ವ್ಯವಸ್ಥೆ ಮಾಡುತ್ತಾರೆ. ನಂತರ ಎಂ.ಕೆ.ಗ್ರೂಪ್‌ನ ಅಧ್ಯಕ್ಷ ಯು.ಎಚ್. ಅಬ್ದುರ್‌ರೆಹ್ಮಾನ್ ಹಾಗೂ ಎಂ.ಕೆ. ಹಂಝ ಅವರ ಮುತುವರ್ಜಿಯೊಂದಿಗೆ ಕವನಳ ಮದುವೆ ಮಾಡಿಸಿಕೊಡುತ್ತಾರೆ. ಎಂ.ಕೆ.ಗ್ರೂಪ್ ಮ್ಯಾರೇಜ್ ಫಂಡ್‌ನಿಂದ ಬಡ ಹುಡುಗಿಗೆ ಸಹಾಯಹಸ್ತ ಚಾಚಿದ್ದಾರೆ. ಕವನಳ ವಿವಾಹ ಭಾನುವಾರ ರಂಜಿತ್ ಜೊತೆಗೆ ತಲಪಾಡಿಯ ದೇವಿನಗರದಲ್ಲಿರುವ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಕುಟುಂಬಿಕರ ಸಮ್ಮುಖದಲ್ಲಿ ನಡೆದಿತ್ತು.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

8 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

8 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

8 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

9 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago