Featured

ಹಿಂದೂ ಸಹೊದರಿಯ ಮದುವೆ ಮಾಡಿಸಿಕೊಟ್ಟ ಉಳ್ಳಾಲದ ಮುಸ್ಲಿಂ ಕುಟುಂಬ -Vishwanews24

ಹಿಂದೂ ಸಹೊದರಿಯ ಮದುವೆ ಮಾಡಿಸಿಕೊಟ್ಟ ಉಳ್ಳಾಲದ ಮುಸ್ಲಿಂ ಕುಟುಂಬ -Vishwanews24

ಮಂಗಳೂರಿನ ಉಳ್ಳಾಲದಲ್ಲೊಂದು ಕೋಮು ಭಾವೈಕತೆ ಸಾರುವ ಅಪರೂಪದ ಘಟನೆ ನಡೆದಿದೆ. ಹೌದು, ಕವನ ಎಂಬ ಹಿಂದೂ ಯುವತಿಯ ಮದುವೆಯನ್ನು ಮುಸ್ಲಿಂ ಕುಟುಂಬವೇ ನಿಂತು ಮಾಡಿರುವುದು ವಿಶೇಷ. ಮೂಲತಃ ಮಂಗಳೂರಿನ ಶಕ್ತಿನಗರದ ಮೂಲದವರಾದ ಕವನ, ತಮ್ಮ ತಾಯಿ ಗೀತಾರೊಂದಿಗೆ ಉಳ್ಳಾಲ ಮಂಚಿಲದ ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದರು. ಯುವತಿ ಕವನಳಿಗೆ ಸಂಬಂಧ ಕೂಡಿಬಂದು ಜುಲೈ 11 ರಂದು ಮದುವೆ ನಿಗದಿಯಾಗಿತ್ತು. ಆದರೆ, ಮದುವೆಗೆ ಹಣದ ಕೊರತೆ ಉಂಟಾಗಿ ಮದುವೆ ನಿಲ್ಲುವ ಹಂತಕ್ಕೆ ತಲುಪಿತ್ತು. ಈ ವಿಷಯವನ್ನರಿತ ಸಂಬಂಧಿ ಸುರೇಶ್ ಎಂಬುವವರು ಆತ್ಮೀಯ ಗೆಳೆಯ ಎಂ.ಕೆ. ರಝಾಕ್ ಎಂಬುವವರೊಂದಿಗೆ ನೋವು ಹಂಚಿಕೊಂಡಿದ್ದರು. ಆನಂತರ ನಡೆದದ್ದೇ ಬೇರೆ. ಕವನಳ ಬಾಳಿಗೆ ಎಂ.ಕೆ. ಕುಟುಂಬ ಅಭಯಹಸ್ತ ನೀಡುವ ಮೂಲಕ ಮದುವೆ ಸುಸೂತ್ರವಾಗಿ ನಡೆಯಿತು. ಪ್ರಾರಂಭದಲ್ಲಿ ಎಂ.ಕೆ. ರಝಾಕ್ ಮತ್ತು ಎಂ.ಕೆ. ರಿಯಾಝ್, ಹನೀಫ್ ಜಿದ್ದಾ ಅವರು ಯುವತಿ ಕವನಳ ಕುಟುಂಬದ ಸಮೀಕ್ಷೆ ನಡೆಸಿ ಕೂಡಲೇ ಮನೆಗೆ ಗ್ಯಾಸ್, ರೇಶನ್ ವ್ಯವಸ್ಥೆ ಮಾಡುತ್ತಾರೆ. ನಂತರ ಎಂ.ಕೆ.ಗ್ರೂಪ್‌ನ ಅಧ್ಯಕ್ಷ ಯು.ಎಚ್. ಅಬ್ದುರ್‌ರೆಹ್ಮಾನ್ ಹಾಗೂ ಎಂ.ಕೆ. ಹಂಝ ಅವರ ಮುತುವರ್ಜಿಯೊಂದಿಗೆ ಕವನಳ ಮದುವೆ ಮಾಡಿಸಿಕೊಡುತ್ತಾರೆ. ಎಂ.ಕೆ.ಗ್ರೂಪ್ ಮ್ಯಾರೇಜ್ ಫಂಡ್‌ನಿಂದ ಬಡ ಹುಡುಗಿಗೆ ಸಹಾಯಹಸ್ತ ಚಾಚಿದ್ದಾರೆ. ಕವನಳ ವಿವಾಹ ಭಾನುವಾರ ರಂಜಿತ್ ಜೊತೆಗೆ ತಲಪಾಡಿಯ ದೇವಿನಗರದಲ್ಲಿರುವ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಕುಟುಂಬಿಕರ ಸಮ್ಮುಖದಲ್ಲಿ ನಡೆದಿತ್ತು.

Vishwa News 24

Recent Posts

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ – vishwanews24

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ  ಸಮುದ್ರಪಾಲಾದ ಘಟನೆ ಉತ್ತರ…

19 hours ago

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ – vishwanews24

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…

19 hours ago

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ – vishwanews24

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…

19 hours ago

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ – vishwanews24

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…

20 hours ago

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ – vishwanews24

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…

20 hours ago

ಹಿಂದಿ ಕಿರುತೆರೆ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…

20 hours ago