ಕೊಡಗು : ಬಿಜೆಪಿ ಪಕ್ಷದ ಮುಖಂಡ ಹಾಗೂ ಕೇಂದ್ರ ಕೌಶಲಾಭಿವೃದ್ಧಿ ಸಚಿವರೂ ಆಗಿರುವ ಅನಂತ್ ಕುಮಾರ್ ಹೆಗ್ಡೆ ಪ್ರಚೋದನಕಾರಿ ಮತ್ತು ವಿವಾದಾತ್ಮಕ ಹೇಳಿಕೆಗಗಳಿಗೆ ಕುಖ್ಯಾತಿ ಪಡೆದವರು. ಹಿಂದೂ ಹುಡುಗಿಯರ ಮೈಮುಟ್ಟಿದವರ ಕೈಯನ್ನು ಕಡಿಯಿರಿ ಎಂದು ಪ್ರಚೋದನಾತ್ಮಕ ಹೇಳಿಕೆಯನ್ನು ನೀಡಿದ್ದಾರೆ.
ಕೊಡಗಿನ ಮಾದಾಪುರದಲ್ಲಿ ನಡೆದ ಹಿಂದೂ ಐಕ್ಯ ಸಮ್ಮೇಳನದಲ್ಲಿ ಮಾತನಾಡಿದ ಅವರು, ಶಬರಿಮಲೆಗೆ ಪ್ರವೇಶಿಸಿದ್ದ ಮಹಿಳೆಯರು ಕೊಡಗಿನಲ್ಲಿ ತಂಗಿದ್ದರು ಎಂಬ ಮಾಹಿತಿ ಇದೆ. ಅಂತಹ ದೇಶದ್ರೋಹಿಗಳು ಮುಂದೆ ಕೊಡಗಿಗೆ ಭೇಟಿ ಕೊಟ್ಟರೆ ಇಲ್ಲಿಯೇ ಮಣ್ಣಾಗಿಸಿ ಎಂದು ಕರೆ ನೀಡಿದ್ಧಾರೆ.
ದೇವರಿಗೆ ಯಾರೂ ಆನೆ, ಹುಲಿಯನ್ನು ಬಲಿಕೊಡುವುದಿಲ್ಲ. ದುರ್ಬಲವಾದ ಕುರಿ-ಕೋಳಿಗಳನ್ನೇ ಬಲಿ ಕೊಡೋದು, ನೀವು ಕುರಿ-ಕೋಳಿಗಳಾಗಬೇಡಿ ಎಂದು ಕರೆ ನೀಡಿದ್ದಾರೆ. ಐತಿಹಾಸಿಕ ಕಟ್ಟಡಗಳಾದ ಕುತುಬ್ ಮಿನಾರ್, ತಾಜ್ ಮಹಲ್ ಗಳ ಬಗ್ಗೆಯೂ ಅನಂತ್ ಕುಮಾರ್ ಹೆಗ್ಡೆ ಮಾತನಾಡಿದ್ದು, ಕುತುಬ್ ಮಿನಾರ್ ಕಟ್ಟಿದ್ದು ಮುಸಲ್ಮಾನರಲ್ಲ ಅದು ನಿರ್ಮಾಣವಾಗಿದ್ದು ಜೈನರ ಕಾಲದಲ್ಲಿ. ತಾಜ್ ಮಹಲ್ ನ್ನು ರಾಜಾ ಜಯಸಿಂಹನಿಂದ ಖರೀದಿಸಿದ ಕಟ್ಟಡ ಅದಾಗಿತ್ತು ಜಯಸಿಂಹನಿಂದ ಖರೀದಿಸಿದ ಬಳಿಕ ತೇಜೋ ಮಹಾಲಯ ತಾಜ್ ಮಹಲ್ ಆಯ್ತು ಎಂದು ಅನಂತ್ ಕುಮಾರ್ ಹೆಗ್ಡೆ ಹೇಳಿದ್ದಾರೆ.
ಇತಿಹಾಸವನ್ನು ನಾವೀಗ ಬರೆಯುತ್ತೇವೆ, ನಾವು ಬರೆದದ್ದೇ ಇತಿಹಾಸ ಎಂದು ಹೆಗಡೆ ಅವರು ಸಭೆಯ ಕರಾಡತನದ ನಡುವೆ ಹೇಳಿದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…