ಕೊಡಗು : ಬಿಜೆಪಿ ಪಕ್ಷದ ಮುಖಂಡ ಹಾಗೂ ಕೇಂದ್ರ ಕೌಶಲಾಭಿವೃದ್ಧಿ ಸಚಿವರೂ ಆಗಿರುವ ಅನಂತ್ ಕುಮಾರ್ ಹೆಗ್ಡೆ ಪ್ರಚೋದನಕಾರಿ ಮತ್ತು ವಿವಾದಾತ್ಮಕ ಹೇಳಿಕೆಗಗಳಿಗೆ ಕುಖ್ಯಾತಿ ಪಡೆದವರು. ಹಿಂದೂ ಹುಡುಗಿಯರ ಮೈಮುಟ್ಟಿದವರ ಕೈಯನ್ನು ಕಡಿಯಿರಿ ಎಂದು ಪ್ರಚೋದನಾತ್ಮಕ ಹೇಳಿಕೆಯನ್ನು ನೀಡಿದ್ದಾರೆ.
ಕೊಡಗಿನ ಮಾದಾಪುರದಲ್ಲಿ ನಡೆದ ಹಿಂದೂ ಐಕ್ಯ ಸಮ್ಮೇಳನದಲ್ಲಿ ಮಾತನಾಡಿದ ಅವರು, ಶಬರಿಮಲೆಗೆ ಪ್ರವೇಶಿಸಿದ್ದ ಮಹಿಳೆಯರು ಕೊಡಗಿನಲ್ಲಿ ತಂಗಿದ್ದರು ಎಂಬ ಮಾಹಿತಿ ಇದೆ. ಅಂತಹ ದೇಶದ್ರೋಹಿಗಳು ಮುಂದೆ ಕೊಡಗಿಗೆ ಭೇಟಿ ಕೊಟ್ಟರೆ ಇಲ್ಲಿಯೇ ಮಣ್ಣಾಗಿಸಿ ಎಂದು ಕರೆ ನೀಡಿದ್ಧಾರೆ.
ದೇವರಿಗೆ ಯಾರೂ ಆನೆ, ಹುಲಿಯನ್ನು ಬಲಿಕೊಡುವುದಿಲ್ಲ. ದುರ್ಬಲವಾದ ಕುರಿ-ಕೋಳಿಗಳನ್ನೇ ಬಲಿ ಕೊಡೋದು, ನೀವು ಕುರಿ-ಕೋಳಿಗಳಾಗಬೇಡಿ ಎಂದು ಕರೆ ನೀಡಿದ್ದಾರೆ. ಐತಿಹಾಸಿಕ ಕಟ್ಟಡಗಳಾದ ಕುತುಬ್ ಮಿನಾರ್, ತಾಜ್ ಮಹಲ್ ಗಳ ಬಗ್ಗೆಯೂ ಅನಂತ್ ಕುಮಾರ್ ಹೆಗ್ಡೆ ಮಾತನಾಡಿದ್ದು, ಕುತುಬ್ ಮಿನಾರ್ ಕಟ್ಟಿದ್ದು ಮುಸಲ್ಮಾನರಲ್ಲ ಅದು ನಿರ್ಮಾಣವಾಗಿದ್ದು ಜೈನರ ಕಾಲದಲ್ಲಿ. ತಾಜ್ ಮಹಲ್ ನ್ನು ರಾಜಾ ಜಯಸಿಂಹನಿಂದ ಖರೀದಿಸಿದ ಕಟ್ಟಡ ಅದಾಗಿತ್ತು ಜಯಸಿಂಹನಿಂದ ಖರೀದಿಸಿದ ಬಳಿಕ ತೇಜೋ ಮಹಾಲಯ ತಾಜ್ ಮಹಲ್ ಆಯ್ತು ಎಂದು ಅನಂತ್ ಕುಮಾರ್ ಹೆಗ್ಡೆ ಹೇಳಿದ್ದಾರೆ.
ಇತಿಹಾಸವನ್ನು ನಾವೀಗ ಬರೆಯುತ್ತೇವೆ, ನಾವು ಬರೆದದ್ದೇ ಇತಿಹಾಸ ಎಂದು ಹೆಗಡೆ ಅವರು ಸಭೆಯ ಕರಾಡತನದ ನಡುವೆ ಹೇಳಿದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…