ದಾವಣಗೆರೆ: ಹಿಂದುಗಳ ಹೆಸರಿಟ್ಟುಕೊಂಡು ದಾವಣಗೆರೆಯ ಶಿವಕುಮಾರ ಸ್ವಾಮಿ ಬಡಾವಣೆಯಲ್ಲಿ ವಾಸವಿದ್ದ ಪಾಕಿಸ್ತಾನ ಪ್ರಜೆಗಳನ್ನು ಬೆಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ. ದಾವಣಗೆಯಲ್ಲಿ ವಾಸ್ತವ್ಯ ಹೂಡಿದ್ದ ಪಾಕಿಸ್ತಾನದ ಮಹಿಳೆ ನಕಲಿ ದಾಖಲೆ ಸೃಷ್ಟಿಸಿ ಭಾರತದಲ್ಲಿ ನೆಲೆಯಾಗಿರುವುದು ಪೊಲೀಸರಿಗೆ ತಿಳಿದುಬಂದಿದೆ. ಪಾಕ್ ಮೂಲದ ಮಹಿಳೆ ಫಾತಿಮಾ ದಾವಣಗೆರೆಯ ಅಲ್ತಾಫ್ ಜೊತೆ ವಿವಾಹವಾಗಿದ್ದಳು.
ಉಳಿದಂತೆ, ಮೊಹಮ್ಮದ್ ಹನೀಫ್ ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಈತ ಕೂಡ ಪಾಕಿಸ್ತಾನದವನಾಗಿದ್ದಾನೆ. ಹನೀಫ್ ಸೊಸೆ, ಮಗಳು, ಅಳಿಯನನ್ನೂ ಬಂಧಿಸಲಾಗಿದೆ. ರಶೀದ್ ಅಲಿ ಸಿದ್ದಿಕಿ ಎಂಬಾತನ ಮಾವ ಮೊಹಮ್ಮದ್ ಹನೀಫ್ ಬೆಂಗಳೂರಿನಲ್ಲಿ ಸೆರೆ ಸಿಕ್ಕಿರುವ ಪ್ರಮುಖ ಆರೋಪಿಯಾಗಿದ್ದಾನೆ.
ಸಿದ್ದಿಕಿ ಮೊಹಮ್ಮದ್ ಯಾಸಿನ್ (ಮಗ), ಜೈನಾಬಿ ನೂರ್ (ಸೊಸೆ), ಫಾತಿಮಾ (ಮಗಳು), ಅಲ್ತಾಫ್ ಬಂಧಿತ ಆರೋಪಿಗಳಾಗಿದ್ದಾರೆ. ಅಲ್ತಾಫ್ ಪತ್ನಿ ಫಾತಿಮಾ ಪಾಕ್ ಪ್ರಜೆಯಾಗಿದ್ದಾಳೆ.
ಬಂಧಿತರ ಪೈಕಿ ರಶೀದ್ ಅಲಿ ಸಿದ್ದಿಕಿ ಶಂಕರ್ ಶರ್ಮಾ (48) ಎಂದು ಹೆಸರಿಟ್ಟುಕೊಂಡಿದ್ದರೆ, ಆಯೇಷಾ ಹನೀಫ್ @ ಆಶಾ ಶರ್ಮಾ (38), ಮೊಹಮ್ಮದ್ ಹನೀಫ್ @ ರಾಮ್ ಬಾಬಾ ಶರ್ಮಾ (73) ರುಬೀನಾ @ ರಾಣಿ ಶರ್ಮಾ (61) ಎಂದು ಹೆಸರುಗಳನ್ನಿಟ್ಟುಕೊಂಡಿದ್ದರು.
ಬೆಂಗಳೂರಿನ ಜಿಗಣಿಯಲ್ಲಿ ಪಾಕಿಸ್ತಾನ ಪ್ರಜೆಗಳು ಬಂಧನವಾಗಿರುವ ಸಂಬಂಧ ಹೆಚ್ಚಿನ ತನಿಖೆಗಾಗಿ ಪೊಲೀಸರ 4 ತಂಡಗಳ ರಚನೆ ಮಾಡಲಾಗಿದೆ. ಡಿವೈಎಸ್ಪಿ ಮೋಹನ್ಕುಮಾರ್ ನೇತೃತ್ವದಲ್ಲಿ 4 ತಂಡಗಳನ್ನು ರಚಿಸಲಾಗಿದೆ. ಬನ್ನೇರುಘಟ್ಟ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಕೃಷ್ಣಕುಮಾರ್, ಜಿಗಣಿ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಮಂಜುನಾಥ್, ಅತ್ತಿಬೆಲೆ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ರಾಘವೇಂದ್ರ, ಸರ್ಜಾಪುರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ಗಳಾದ ನವೀನ್, ಕುಮಾರ್ ಅವರ ತಂಡ ರಚನೆ ಮಾಡಲಾಗಿದೆ.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…