ಹುಬ್ಬಳ್ಳಿ : ಹಾಲು ಕುಡಿದ ಮಕ್ಕಳೇ ಬದುಕೋದು ಕಷ್ಟ. ಅಂಥದ್ದರಲ್ಲಿ ವಿಷ ಕುಡಿದ ಮಕ್ಕಳು ಬದುಕ್ತಾರಾ? ಹಿಂಬಾಗಿಲ ರಾಜಕೀಯ ಮಾಡಿ ಅಧಿಕಾರಕ್ಕೆ ಬಂದಿರೋ ಈ ಸರ್ಕಾರ ಹೆಚ್ಚು ದಿನ ಉಳಿಯೋದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ.
ಸೋಮವಾರ ಬೆಳಗ್ಗೆ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಹಾಲು ಕುಡಿದ ಮಕ್ಕಳೇ ಬದುಕುವುದಿಲ್ಲ, ಇನ್ನು ವಿಷ ಕುಡಿದವರು ಬದುಕುತ್ತಾರಾ? ಎಂದು ಬಿಜೆಪಿ ಸರ್ಕಾರದ ಕುರಿತು ವಾಗ್ದಾಳಿ ನಡೆಸಿದರು. ಭೈರತಿ ಬಸವರಾಜು ಮತ್ತು ಎಸ್.ಟಿ. ಸೋಮಶೇಖರ್ರನ್ನು ನಾನು ಮುಂಬೈಗೆ ಕಳುಹಿಸಿದ್ದೆ ಎಂದು ಆರೋಪಿಸುತ್ತಿದ್ದಾರೆ. ಹಾಗಾದರೆ ವಿಶ್ವನಾಥ್, ನಾರಾಯಣಗೌಡ ಮತ್ತು ಗೋಪಾಲಯ್ಯ ಅವರನ್ನು ಮುಂಬೈಗೆ ಕಳುಹಿಸಿದ್ದು ಯಾರು? ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಮತ್ತು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ನನ್ನ ಮೇಲೆ ಗೂಬೆ ಕೂರಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಕಿಡಿ ಕಾರಿದರು.
ದೇವೇಗೌಡರ ಕುಟುಂಬದವರು ಮಾಡಿದ ಆರೋಪದ ಬಗ್ಗೆ ನಾನು ಸುಧೀರ್ಘವಾಗಿ ಉತ್ತರ ಕೊಟ್ಟಿದ್ದೇನೆ. ಬೈರತಿ ಬಸವರಾಜು ಮತ್ತು ಸೋಮಶೇಖರ್ ರನ್ನು ನಾನು ಮುಂಬೈಗೆ ಕಳುಸಿದ್ದೇನೆ ಎಂದು ಅವರು ಹೇಳುತ್ತಾರೆ. ಹಾಗಾದರೆ ವಿಶ್ವನಾಥ್, ನಾರಾಯಣಗೌಡ ಮತ್ತು ಗೋಪಾಲಯ್ಯರನ್ನು ಯಾರು ಕಳುಹಿಸಿದ್ದು, ಅವರು ಜೆಡಿಎಸ್ನವರು ಅಲ್ಲವೆ. ಹೆಚ್ಡಿಕೆ ಮತ್ತು ಹೆಚ್ಡಿಡಿ ನನ್ನ ಮೇಲೆ ಗೂಬೆ ಕೂರಿಸೋಕೆ ನೋಡುತ್ತಿದ್ದಾರೆ ಎಂದು ಆರೋಪಿಸಿದರು.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…