ಹುಬ್ಬಳ್ಳಿ : ಹಾಲು ಕುಡಿದ ಮಕ್ಕಳೇ ಬದುಕೋದು ಕಷ್ಟ. ಅಂಥದ್ದರಲ್ಲಿ ವಿಷ ಕುಡಿದ ಮಕ್ಕಳು ಬದುಕ್ತಾರಾ? ಹಿಂಬಾಗಿಲ ರಾಜಕೀಯ ಮಾಡಿ ಅಧಿಕಾರಕ್ಕೆ ಬಂದಿರೋ ಈ ಸರ್ಕಾರ ಹೆಚ್ಚು ದಿನ ಉಳಿಯೋದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ.
ಸೋಮವಾರ ಬೆಳಗ್ಗೆ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಹಾಲು ಕುಡಿದ ಮಕ್ಕಳೇ ಬದುಕುವುದಿಲ್ಲ, ಇನ್ನು ವಿಷ ಕುಡಿದವರು ಬದುಕುತ್ತಾರಾ? ಎಂದು ಬಿಜೆಪಿ ಸರ್ಕಾರದ ಕುರಿತು ವಾಗ್ದಾಳಿ ನಡೆಸಿದರು. ಭೈರತಿ ಬಸವರಾಜು ಮತ್ತು ಎಸ್.ಟಿ. ಸೋಮಶೇಖರ್ರನ್ನು ನಾನು ಮುಂಬೈಗೆ ಕಳುಹಿಸಿದ್ದೆ ಎಂದು ಆರೋಪಿಸುತ್ತಿದ್ದಾರೆ. ಹಾಗಾದರೆ ವಿಶ್ವನಾಥ್, ನಾರಾಯಣಗೌಡ ಮತ್ತು ಗೋಪಾಲಯ್ಯ ಅವರನ್ನು ಮುಂಬೈಗೆ ಕಳುಹಿಸಿದ್ದು ಯಾರು? ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಮತ್ತು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ನನ್ನ ಮೇಲೆ ಗೂಬೆ ಕೂರಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಕಿಡಿ ಕಾರಿದರು.
ದೇವೇಗೌಡರ ಕುಟುಂಬದವರು ಮಾಡಿದ ಆರೋಪದ ಬಗ್ಗೆ ನಾನು ಸುಧೀರ್ಘವಾಗಿ ಉತ್ತರ ಕೊಟ್ಟಿದ್ದೇನೆ. ಬೈರತಿ ಬಸವರಾಜು ಮತ್ತು ಸೋಮಶೇಖರ್ ರನ್ನು ನಾನು ಮುಂಬೈಗೆ ಕಳುಸಿದ್ದೇನೆ ಎಂದು ಅವರು ಹೇಳುತ್ತಾರೆ. ಹಾಗಾದರೆ ವಿಶ್ವನಾಥ್, ನಾರಾಯಣಗೌಡ ಮತ್ತು ಗೋಪಾಲಯ್ಯರನ್ನು ಯಾರು ಕಳುಹಿಸಿದ್ದು, ಅವರು ಜೆಡಿಎಸ್ನವರು ಅಲ್ಲವೆ. ಹೆಚ್ಡಿಕೆ ಮತ್ತು ಹೆಚ್ಡಿಡಿ ನನ್ನ ಮೇಲೆ ಗೂಬೆ ಕೂರಿಸೋಕೆ ನೋಡುತ್ತಿದ್ದಾರೆ ಎಂದು ಆರೋಪಿಸಿದರು.
ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…
‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…
ವೋಟರ್ ಲಿಸ್ಟ್ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ…
ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…
ಉಡುಪಿ: ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…