ಹುಬ್ಬಳ್ಳಿ : ಹಾಲು ಕುಡಿದ ಮಕ್ಕಳೇ ಬದುಕೋದು ಕಷ್ಟ. ಅಂಥದ್ದರಲ್ಲಿ ವಿಷ ಕುಡಿದ ಮಕ್ಕಳು ಬದುಕ್ತಾರಾ? ಹಿಂಬಾಗಿಲ ರಾಜಕೀಯ ಮಾಡಿ ಅಧಿಕಾರಕ್ಕೆ ಬಂದಿರೋ ಈ ಸರ್ಕಾರ ಹೆಚ್ಚು ದಿನ ಉಳಿಯೋದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ.
ಸೋಮವಾರ ಬೆಳಗ್ಗೆ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಹಾಲು ಕುಡಿದ ಮಕ್ಕಳೇ ಬದುಕುವುದಿಲ್ಲ, ಇನ್ನು ವಿಷ ಕುಡಿದವರು ಬದುಕುತ್ತಾರಾ? ಎಂದು ಬಿಜೆಪಿ ಸರ್ಕಾರದ ಕುರಿತು ವಾಗ್ದಾಳಿ ನಡೆಸಿದರು. ಭೈರತಿ ಬಸವರಾಜು ಮತ್ತು ಎಸ್.ಟಿ. ಸೋಮಶೇಖರ್ರನ್ನು ನಾನು ಮುಂಬೈಗೆ ಕಳುಹಿಸಿದ್ದೆ ಎಂದು ಆರೋಪಿಸುತ್ತಿದ್ದಾರೆ. ಹಾಗಾದರೆ ವಿಶ್ವನಾಥ್, ನಾರಾಯಣಗೌಡ ಮತ್ತು ಗೋಪಾಲಯ್ಯ ಅವರನ್ನು ಮುಂಬೈಗೆ ಕಳುಹಿಸಿದ್ದು ಯಾರು? ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಮತ್ತು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ನನ್ನ ಮೇಲೆ ಗೂಬೆ ಕೂರಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಕಿಡಿ ಕಾರಿದರು.
ದೇವೇಗೌಡರ ಕುಟುಂಬದವರು ಮಾಡಿದ ಆರೋಪದ ಬಗ್ಗೆ ನಾನು ಸುಧೀರ್ಘವಾಗಿ ಉತ್ತರ ಕೊಟ್ಟಿದ್ದೇನೆ. ಬೈರತಿ ಬಸವರಾಜು ಮತ್ತು ಸೋಮಶೇಖರ್ ರನ್ನು ನಾನು ಮುಂಬೈಗೆ ಕಳುಸಿದ್ದೇನೆ ಎಂದು ಅವರು ಹೇಳುತ್ತಾರೆ. ಹಾಗಾದರೆ ವಿಶ್ವನಾಥ್, ನಾರಾಯಣಗೌಡ ಮತ್ತು ಗೋಪಾಲಯ್ಯರನ್ನು ಯಾರು ಕಳುಹಿಸಿದ್ದು, ಅವರು ಜೆಡಿಎಸ್ನವರು ಅಲ್ಲವೆ. ಹೆಚ್ಡಿಕೆ ಮತ್ತು ಹೆಚ್ಡಿಡಿ ನನ್ನ ಮೇಲೆ ಗೂಬೆ ಕೂರಿಸೋಕೆ ನೋಡುತ್ತಿದ್ದಾರೆ ಎಂದು ಆರೋಪಿಸಿದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…