ಬೆಂಗಳೂರು: ನಗರದ ಕೆಜಿ ಹಳ್ಳಿ ಹಾಗೂ ಡಿಜಿ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕೋಮು ಗಲಭೆಗೆ ಖೇದ ವ್ಯಕ್ತಪಡಿಸಿರುವ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್, ಹಿಂಸಾಚಾರ ನಡೆದಿದ್ದು ದುರದೃಷ್ಟಕರ ಎಂದು ಹೇಳಿದ್ದಾರೆ.
ಶಾಸಕ ಅಖಂಡ ಶ್ರೀನಿವಾಸಮೂರ್ತಿ ಸೋದರ ಅಳಿಯ ಅವಹೇಳನಕಾರಿ ಪೋಸ್ಟ್ ಹಾಕಿರುವುದು ನಿಜಕ್ಕೂ ಖಂಡನೀಯ. ಆದರೆ ಇದನ್ನು ಕಾನೂನಿನ ಚೌಕಟ್ಟಿನಲ್ಲಿ ವಿರೋಧಿಸಬೇಕೆ ಹೊರತು ಹಿಂಸಾಚಾರದಿಂದ ಏನೂ ಪ್ರಯೋಜನವಿಲ್ಲ ಎಂದು ಜಮೀರ್ ಅಹ್ಮದ್ ಖಾನ್ ಅಭಿಪ್ರಾಯಪಟ್ಟಿದ್ದಾರೆ.
ಗಲಭೆಗೆ ಕಾರಣರಾದವರ ವಿರುದ್ಧ ಪೊಲೀಸರು ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತಾರೆ ಎಂಬ ಭರವಸೆ ಇದೆ ಎಂದಿರುವ ಜಮೀರ್ ಅಹ್ಮದ್ ಖಾನ್. ಜನರು ಆವೇಶಕ್ಕೆ ಒಳಗಾಗದೇ ಸಂಯಮದಿಂದ ವರ್ತಿಸುವಂತೆ ಮನವಿ ಮಾಡಿದ್ದಾರೆ.
ಯಾವುದೇ ಕಾರಣಕ್ಕೂ ಕಾನೂನಿಗೆ ಭಂಗ ಬರದಂತೆ ಶಾಂತಿಯುತ ಮಾರ್ಗದಲ್ಲಿ ಹೋರಾಟ ಮಾಡಬೇಕು ಎಂದು ಮನವಿ ಮಾಡಿರುವ ಜಮೀರ್ ಅಹ್ಮದ್, ಕಾನೂನು ಕಾಪಾಡಲು ನಮ್ಮ ಪೊಲೀಸರು ಶಕ್ತರಾಗಿದ್ದಾರೆ ಎಂದು ನುಡಿದಿದ್ದಾರೆ.
ಪ್ರಜ್ವಲ್ ರೇವಣ್ಣ ಸೆಲ್ನಲ್ಲಿ ಮೊಬೈಲ್ ಪತ್ತೆ : ಜೈಲಾಧಿಕಾರಿ ಸಸ್ಪೆಂಡ್, SPಗೆ ಶೋಕಾಸ್ ನೋಟಿಸ್ ಬೆಂಗಳೂರು: ಜೀವಾವಧಿ ಶಿಕ್ಷೆಗೆ ಗುರಿಯಾಗಿ…
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…