ನವದೆಹಲಿ: ಹಿಂಸಾಚಾರ ಮತ್ತು ದ್ವೇಷವನ್ನು ಹರಡುವ ಬಿಜೆಪಿಯವರಿಗೆ ಹಿಂದೂ ಧರ್ಮದ ಮೂಲ ತತ್ವಗಳು ಅರ್ಥವಾಗುತ್ತಿಲ್ಲ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಬುಧವಾರ ಆಡಳಿತ ಪಕ್ಷವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.
ಲೋಕಸಭೆಯಲ್ಲಿ ರಾಹುಲ್ ಗಾಂಧಿ ಮಾಡಿದ ಟೀಕೆಗಳ ವಿರುದ್ಧ ಮಂಗಳವಾರ ನಡೆದ ಪ್ರತಿಭಟನೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಅಹಮದಾಬಾದ್ನಲ್ಲಿರುವ ಗುಜರಾತ್ ಕಾಂಗ್ರೆಸ್ ಪ್ರಧಾನ ಕಚೇರಿಯ ಹೊರಗೆ ಪರಸ್ಪರ ಕಲ್ಲು ತೂರಾಟ ನಡೆಸಿದರು.
ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ರಾಹುಲ್ ಗಾಂಧಿ, “ಗುಜರಾತ್ ಕಾಂಗ್ರೆಸ್ ಕಚೇರಿಯ ಮೇಲಿನ ಹೇಡಿತನದ ಮತ್ತು ಹಿಂಸಾತ್ಮಕ ದಾಳಿಯು ಬಿಜೆಪಿ ಮತ್ತು ಸಂಘ ಪರಿವಾರದ ಬಗ್ಗೆ ನನ್ನ ಅಭಿಪ್ರಾಯವನ್ನು ಇನ್ನಷ್ಟು ಬಲಪಡಿಸುತ್ತದೆ. ಹಿಂಸೆ ಮತ್ತು ದ್ವೇಷವನ್ನು ಹರಡುವ ಬಿಜೆಪಿ ಜನರಿಗೆ ಹಿಂದೂ ಧರ್ಮದ ಮೂಲ ತತ್ವಗಳು ಅರ್ಥವಾಗುತ್ತಿಲ್ಲ” ಎಂದಿದ್ದಾರೆ.
“ಗುಜರಾತ್ ಜನರು ಬಿಜೆಪಿಯ ಸುಳ್ಳನ್ನು ಸ್ಪಷ್ಟವಾಗಿ ತೀರಸ್ಕರಿಸುತ್ತಾರೆ ಮತ್ತು ಬಿಜೆಪಿ ಸರ್ಕಾರಕ್ಕೆ ನಿರ್ಣಾಯಕ ಪಾಠ ಕಲಿಸುತ್ತಾರೆ. ನಾನು ಮತ್ತೊಮ್ಮೆ ಹೇಳುತ್ತಿದ್ದೇನೆ — ಗುಜರಾತ್ ನಲ್ಲಿ ಇಂಡಿಯಾ ಗೆಲ್ಲಲಿದೆ!”ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ಹೇಳಿದ್ದಾರೆ.
ಕಾಂಗ್ರೆಸ್ ಕಚೇರಿ ಮೇಲೆ ಕಲ್ಲು ತೂರಾಟಕ್ಕೆ ಸಂಬಂಧಿಸಿದಂತೆ ಪಾಲ್ಡಿ ಪ್ರದೇಶದಲ್ಲಿ ಎರಡು ಕಡೆಯ ಹಲವಾರು ಕಾರ್ಯಕರ್ತರು ಮತ್ತು ಮುಖಂಡರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ನಗರ ಪೊಲೀಸ್ ನಿಯಂತ್ರಣ ಕೊಠಡಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…