Featured

ಹಿಂ.ಜಾ.ವೆ. ಮುಖಂಡ ಮತ್ತು ಸಂಘಪರಿವಾರ ನಾಯಕಿ ಚೈತ್ರಾ ಕುಂದಾಪುರ ನಡುವೆ ಬೀದಿಯಲ್ಲಿ ಮಾರಾಮಾರಿ

ಸುಬ್ರಹ್ಮಣ್ಯ,  : ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರ ಹಾಗೂ ಸಂಪುಟ ನರಸಿಂಹ ಮಠದ ನಡುವಿನ ವಿವಾದ ಇದೀಗ ಬೀದಿ ಕಾಳಗದವರೆಗೂ ಬಂದು ಮುಟ್ಟಿದೆ. ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ನಡೆಯುತ್ತಿರುವ ಸರ್ಪ ಸಂಸ್ಕಾರ ಹಾಗೂ ಆಶ್ಲೇಷ ಬಲಿ ಪೂಜೆಯ ವಿಚಾರಕ್ಕೆ ಸಂಬಂಧಿಸಿದಂತೆ ಹಿಂದೂ ಸಂಘಟನೆಗಳಲ್ಲಿ ಗುರುತಿಸಿಕೊಂಡಿರುವ ಎರಡು ಗುಂಪುಗಳ ನಡುವೆ ಇತ್ತೀಚೆಗೆ ವೈಮನಸ್ಸು ಏರ್ಪಟ್ಟಿತ್ತು.

ಈ ವಿಚಾರಕ್ಕೆ ಸಂಬಂಧಿಸಿದಂತೆ ಹಿಂದೂ ನಾಯಕಿಯೆಂದು ಗುರುತಿಸಿಕೊಂಡಿರುವ ಚೈತ್ರಾ ಕುಂದಾಪುರ ಅವರು ಮಠದ ಪರವಾಗಿ ಮಾತನಾಡುತ್ತಾ ದೇವಸ್ಥಾನದ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದರು. ಇದು ಸ್ಥಳೀಯ ಹಿಂದೂ ನಾಯಕರನ್ನು ಮತ್ತು ದೇವಸ್ಥಾನದ ಭಕ್ತವರ್ಗವನ್ನು ಕೆರಳಿಸಿತ್ತು. ಈ ವಿಚಾರವಾಗಿ ಹಿಂದೂ ಜಾಗರಣ ವೇದಿಕೆಯ ಸುಳ್ಯ ತಾಲೂಕು ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ್ ಪಂಜ ಹಾಗೂ ಚೈತ್ರಾ ನಡುವೆ ಸಾಮಾಜಿಕ ಜಾಲತಾಣ ಫೇಸ್ಬುಕ್ ನಲ್ಲಿ ನಿರಂತರ ವಾಗ್ವಾದ ನಡೆಯುತ್ತಿತ್ತು.

ಹೀಗಿರುವಾಗ, ಚೈತ್ರಾ ಕುಂದಾಪುರ ಹಾಗೂ ಆಕೆಯ ತಂಡ ಹಾಗೂ ಗುರುಪ್ರಸಾದ್ ಪಂಜ ಮತ್ತವರ ಬೆಂಬಲಿಗರ ನಡುವೆ ಸುಬ್ರಹ್ಮಮಣ್ಯದಲ್ಲಿ ಬುಧವಾರದಂದು ವಾಗ್ವಾದ ನಡೆದಿದೆ. ಈ ಸಂದರ್ಭದಲ್ಲಿ ಎರಡೂ ತಂಡಗಳು ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ್ದು ಘಟನೆಯಲ್ಲಿ ಗುರುಪ್ರಸಾದ್ ಅವರು ಗಾಯಗೊಂಡಿದ್ದಾರೆ. ಹಲ್ಲೆಗೊಳಗಾದ ಗುರುಪ್ರಸಾದ್ ಸುಳ್ಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರೆ, ಚೈತ್ರಾ ಕುಂದಾಪುರ ಹಾಗೂ ಇತರ 8 ಜನರನ್ನು ಸುಬ್ರಹ್ಮಣ್ಯ ಪೋಲೀಸರು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆ ನಡೆಯುತ್ತಿದ್ದ ಸಂದರ್ಭದಲ್ಲಿ ಎರಡೂ ಗುಂಪುಗಳನ್ನು ನಿಯಂತ್ರಿಸಲು ಪೋಲೀಸರು ಲಘು ಲಾಠೀ ಪ್ರಹಾರವನ್ನೂ ನಡೆಸಬೇಕಾಯಿತು.

 

 

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

6 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

6 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

6 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

7 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

7 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

7 hours ago