ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ, 25 ಲಕ್ಷ ಮಕ್ಕಳ ಕಾಲಡಿಗೆ ನುಸುಳಿ ಬರಲಿ ಆಗ ಈ ಆದೇಶದ ಬಗ್ಗೆ ಉತ್ತರಿಸ್ತಿನಿ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಆಕ್ರೋಶ ಹೊರಹಾಕಿದ್ದಾರೆ.
ಹಿಜಬ್ಗೆ ಶಾಲಾ-ಕಾಲೇಜುಗಳಲ್ಲಿ ಅವಕಾಶ ಕೊಟ್ಟಿದ್ದನ್ನು ಬಿಜೆಪಿಯವರು ರಾಜಕೀಯವಾಗಿ ಬಳಸಿಕೊಂಡು ಅಲ್ಪಸಂಖ್ಯಾತರ ಓಲೈಸಲು ಮಾಡಿದ್ದಾರೆ ಎಂಬ ಆರೋಪದ ಬಗ್ಗೆ ಮಾತನಾಡಿದ ಅವರು, ಹಿಜಬ್ ಮಾತ್ರ ಅಲ್ಲ. ಇದಕ್ಕೂ ಮುನ್ನ ನಾನು ಶಿವದಾರ ಹಾಗೂ ಜನಿವಾರದ ಬಗ್ಗೆ ನಿರ್ಧಾರ ತೆಗೆದುಕೊಂಡಿದ್ದೆ, ಹಾಗಾದ್ರೆ ಇವರೆಲ್ಲ ಅದರ ವಿರೋಧಿಗಳಾ?, ಕಣ್ಣಿಗೆ ಇದೊಂದೇ ಕಾಣಿಸುತ್ತಾ? ಇದರ ಬಗ್ಗೆ ಮಾತಾಡೋರು ನೀಟ್ ಪರೀಕ್ಷೆ ಬಗ್ಗೆ ಮಾತಾಡಲಿ. ನೀಟ್ ಪಶ್ನೆಪತ್ರಿಕೆ ಲೀಕ್ನಿಂದಾಗಿ 25 ಲಕ್ಷ ಮಕ್ಕಳನ್ನು ಬೀದಿಗೆ ತಂದಿದ್ದಾರಲ್ಲ, ಅವರ ಕಾಲಡಿಗೆ ನುಸುಳಿ ಬರಲಿ, ಆಗ ಈ ಆದೇಶದ ಬಗ್ಗೆ ಉತ್ತರ ಕೊಡುತ್ತೇನೆಂದು ಕಿಡಿಕಾರಿದ್ದಾರೆ.
ಇದನ್ನೂ ಓದಿ:
ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ, ಜಾತಿ, ಧರ್ಮ ಓಲೈಸುವ ಮಾತಲ್ಲ. ಅದರಂತೆ ಮಾಡ್ತಾ ಇದ್ದೇವೆ. ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ. ಬಿಜೆಪಿ ನಾಯಕರು, ವಿರೋಧ ಮಾಡೋರು ಕೇಂದ್ರೀಯ ವಿದ್ಯಾಲಯದ ಮುಂದೆ ವಿರೋಧಿಸಲಿ. ಮಹಾರಾಷ್ಟ್ರದಲ್ಲಿ ಹೋಗಿ ಪ್ರತಿಭಟನೆ ಮಾಡಲಿ. ಕೇಂದ್ರ ಸರ್ಕಾರ ಮಾಡಿರುವ ಕಾನೂನನ್ನೇ ನಾನು ಈಗ ತಂದಿದ್ದೇನೆ. ಇದೇನು ಹೊಸದಲ್ಲ. ಜಾಸ್ತಿ ಫಲಿತಾಂಶ ಬಂತು ಅಂತ ಹೊಟ್ಟೆ ಕಿಚ್ಚಿಗೆ ಇವರೆಲ್ಲ ಹೀಗೆ ಮಾಡ್ತಿದ್ದಾರೆ. ಯಾರ ಓಲೈಕೆಗೆ ಆದೇಶ ಮಾಡಿಲ್ಲ. ಮಕ್ಕಳ ಹಿತದೃಷ್ಟಿಯಿಂದ ಆದೇಶ ಮಾಡಿದ್ದೇನೆ, ವಾಪಸ್ ಪಡೆಯಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…