ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ, 25 ಲಕ್ಷ ಮಕ್ಕಳ ಕಾಲಡಿಗೆ ನುಸುಳಿ ಬರಲಿ ಆಗ ಈ ಆದೇಶದ ಬಗ್ಗೆ ಉತ್ತರಿಸ್ತಿನಿ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಆಕ್ರೋಶ ಹೊರಹಾಕಿದ್ದಾರೆ.
ಹಿಜಬ್ಗೆ ಶಾಲಾ-ಕಾಲೇಜುಗಳಲ್ಲಿ ಅವಕಾಶ ಕೊಟ್ಟಿದ್ದನ್ನು ಬಿಜೆಪಿಯವರು ರಾಜಕೀಯವಾಗಿ ಬಳಸಿಕೊಂಡು ಅಲ್ಪಸಂಖ್ಯಾತರ ಓಲೈಸಲು ಮಾಡಿದ್ದಾರೆ ಎಂಬ ಆರೋಪದ ಬಗ್ಗೆ ಮಾತನಾಡಿದ ಅವರು, ಹಿಜಬ್ ಮಾತ್ರ ಅಲ್ಲ. ಇದಕ್ಕೂ ಮುನ್ನ ನಾನು ಶಿವದಾರ ಹಾಗೂ ಜನಿವಾರದ ಬಗ್ಗೆ ನಿರ್ಧಾರ ತೆಗೆದುಕೊಂಡಿದ್ದೆ, ಹಾಗಾದ್ರೆ ಇವರೆಲ್ಲ ಅದರ ವಿರೋಧಿಗಳಾ?, ಕಣ್ಣಿಗೆ ಇದೊಂದೇ ಕಾಣಿಸುತ್ತಾ? ಇದರ ಬಗ್ಗೆ ಮಾತಾಡೋರು ನೀಟ್ ಪರೀಕ್ಷೆ ಬಗ್ಗೆ ಮಾತಾಡಲಿ. ನೀಟ್ ಪಶ್ನೆಪತ್ರಿಕೆ ಲೀಕ್ನಿಂದಾಗಿ 25 ಲಕ್ಷ ಮಕ್ಕಳನ್ನು ಬೀದಿಗೆ ತಂದಿದ್ದಾರಲ್ಲ, ಅವರ ಕಾಲಡಿಗೆ ನುಸುಳಿ ಬರಲಿ, ಆಗ ಈ ಆದೇಶದ ಬಗ್ಗೆ ಉತ್ತರ ಕೊಡುತ್ತೇನೆಂದು ಕಿಡಿಕಾರಿದ್ದಾರೆ.
ಇದನ್ನೂ ಓದಿ:
ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ, ಜಾತಿ, ಧರ್ಮ ಓಲೈಸುವ ಮಾತಲ್ಲ. ಅದರಂತೆ ಮಾಡ್ತಾ ಇದ್ದೇವೆ. ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ. ಬಿಜೆಪಿ ನಾಯಕರು, ವಿರೋಧ ಮಾಡೋರು ಕೇಂದ್ರೀಯ ವಿದ್ಯಾಲಯದ ಮುಂದೆ ವಿರೋಧಿಸಲಿ. ಮಹಾರಾಷ್ಟ್ರದಲ್ಲಿ ಹೋಗಿ ಪ್ರತಿಭಟನೆ ಮಾಡಲಿ. ಕೇಂದ್ರ ಸರ್ಕಾರ ಮಾಡಿರುವ ಕಾನೂನನ್ನೇ ನಾನು ಈಗ ತಂದಿದ್ದೇನೆ. ಇದೇನು ಹೊಸದಲ್ಲ. ಜಾಸ್ತಿ ಫಲಿತಾಂಶ ಬಂತು ಅಂತ ಹೊಟ್ಟೆ ಕಿಚ್ಚಿಗೆ ಇವರೆಲ್ಲ ಹೀಗೆ ಮಾಡ್ತಿದ್ದಾರೆ. ಯಾರ ಓಲೈಕೆಗೆ ಆದೇಶ ಮಾಡಿಲ್ಲ. ಮಕ್ಕಳ ಹಿತದೃಷ್ಟಿಯಿಂದ ಆದೇಶ ಮಾಡಿದ್ದೇನೆ, ವಾಪಸ್ ಪಡೆಯಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸಲು ಅವಕಾಶ: ಕಾಂಗ್ರೆಸ್ ನ ಮುಸ್ಲಿಂ ಓಲೈಕೆ ನೀತಿ ಬಹಿರಂಗ : ಸುನಿಲ್ ಕುಮಾರ್ ಕಾರ್ಕಳ:…
ಉಡುಪಿ: ಹಿಜಾಬ್ಗೆ ಅನುಮತಿ; ಶಿಕ್ಷಣ ವ್ಯವಸ್ಥೆಯನ್ನ ಇಸ್ಲಾಮೀಕರಣ ಮಾಡಲು ಮುಂದಾದ ರಾಜ್ಯ ಸರ್ಕಾರ : ಯಶ್ಪಾಲ್ ಸುವರ್ಣ ಉಡುಪಿ: ರಾಜ್ಯದ…