ಉಡುಪಿ : ಹಿಜಬ್ ವಿವಾದ ಕುರಿತಂತೆ ಸುಪ್ರೀಂಕೋರ್ಟ್ ಇಂದು ತನ್ನ ತೀರ್ಪು ಪ್ರಕಟಿಸಿರುವ ಹಿನ್ನಲೆ ಉಡುಪಿ ಜಿಲ್ಲೆಯಾದ್ಯಂತ ಹಲವು ಕಾಲೇಜುಗಳಿಗೆ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ.
ಹಿಜಾಬ್ ವಿವಾದಕ ವಿವಾದದ ಕೇಂದ್ರಬಿಂದು ಆಗಿರುವ ಉಡುಪಿ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು, ಉಡುಪಿ ಅಜ್ಜರಕಾಡು ಮಹಿಳಾ ಪದವಿ ಕಾಲೇಜು, ಉಡುಪಿ ಎಂಜಿಎಂ ಕಾಲೇಜು ಹಾಗೂ ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜು ಸೇರಿದಂತೆ ಹಲವು ಕಾಲೇಜುಗಳಿಗೆ ಪೊಲೀಸ್ ಭದ್ರತೆ ಒದಗಿಸಲಾಗಿದೆ.
ಹಿಜಾಬ್ ಕುರಿತಾಗಿ ಸುಪ್ರೀಂ ವಿಸ್ತೃತ ಪೀಠದ ತೀರ್ಪಿಗೆ ಎಲ್ಲರೂ ಬದ್ಧರಾಗಬೇಕು..
ಸ್ಥಳಕ್ಕೆ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಅಕ್ಷಯ್ ಮಚ್ಚೇಂದ್ರ ಹಾಕೆ ಭೇಟಿ ನೀಡಿ ಭದ್ರತೆ ಪರಿಶೀಲನೆ ನಡೆಸಿದರು. ಹಿಜಾಬ್ ವಿಚಾರದಲ್ಲಿ ವಿವಾದ ಉಂಟಾದ ಕೆಲವು ಸೂಕ್ಷ್ಮ ಪ್ರದೇಶಗಳ ಕಾಲೇಜುಗಳಿಗೆ ಬಿಗಿ ಬಂದೋಬಸ್ತ್ ಒದಗಿಸಲಾಗಿದೆ. ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ವಹಿಸಲಾಗಿದೆ ಎಂದು ಎಸ್ಪಿ ಅಕ್ಷಯ್ ಎಂ ಹಾಕೆ ತಿಳಿಸಿದ್ದಾರೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…