Featured

ಹಿಜಬ್‌ ಧರಿಸುವುದು ಮೂಲಭೂತ ಹಕ್ಕು, ಅದು ಸಾಕಷ್ಟು ವರ್ಷಗಳಿಂದ ನಡೆದುಕೊಂಡು ಬಂದಿದೆ : ಸಿದ್ದರಾಮಯ್ಯ – Vishwanews24

ಕೇಸರಿ ಶಾಲು ಹಾಕೋದು ಯಾವಾಗಿಂತ ಬಂತು? ನಿನ್ನೆ, ಮೊನ್ನೆಯಿಂದ ಬಂದಿದೆ..

ಹಿಜಬ್ ಮೊದಲಿನಿಂದಲೂ ಹಾಕುತ್ತಿದ್ದರು..

ಕರಾವಳಿಯು ಸಂಘ ಪರಿವಾರದ ಕೋಮುವಾದದ ಪ್ರಯೋಗಾಲಯವಾಗಿದೆ..

ಬೆಂಗಳೂರು: ಹಿಜಬ್‌ ಧರಿಸುವುದು ಮೂಲಭೂತ ಹಕ್ಕು. ಅದು ಸಾಕಷ್ಟು ವರ್ಷಗಳಿಂದ ನಡೆದುಕೊಂಡು ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಉಡುಪಿ ಸರ್ಕಾರಿ ಪಿಯು ಕಾಲೇಜಿನಲ್ಲಿ ತಲೆದೋರಿರುವ ಹಿಜಬ್‌-ಕೇಸರಿ ಶಾಲು ವಿವಾದ ಕುರಿತು ಮಾತನಾಡಿದ ಸಿದ್ದರಾಮಯ್ಯ, ಸಮವಸ್ತ್ರ ಕಡ್ಡಾಯ ಅಂತ ಸರ್ಕಾರ ಎಲ್ಲೂ ಹೇಳಿಲ್ಲ. ಪಿಯುಸಿ ಲೆವೆಲ್‌ನಲ್ಲಿ ಇಲ್ಲಾ. ಮುಸ್ಲಿಂ ಹೆಣ್ಣು ಮಕ್ಕಳಿಗೆ ಗೇಟ್ ಹಾಕಿಕೊಂಡು ಬರಬೇಡಿ ಅಂತ ಪ್ರಿನ್ಸಿಪಾಲ್ ಹೇಳಿದ್ದಾರೆ. ಸರ್ಕಾರಿ ಕಾಲೇಜು ಅದು. ಅದು ಮೂಲಭೂತ ಹಕ್ಕಿನ ಉಲ್ಲಂಘನೆ. ಹಿಜಬ್ ಹಾಕುವುದು ಮೂಲಭೂತ ಹಕ್ಕು. ಸಾಕಷ್ಟು ವರ್ಷಗಳಿಂದ ನಡೆದುಕೊಂಡು ಬಂದಿದೆ. ಈಗ ಅದು ನ್ಯಾಯಾಲಯದಲ್ಲಿದೆ, ಏನಾಗುತ್ತೆ ನೋಡೋಣ ಎಂದು ತಿಳಿಸಿದರು.

ಇದನ್ನೂ ಓದಿ :

ಯಾರೋ ಬಿಜೆಪಿಯವರು ಹೇಳಿ ಮಾಡಿಸುತ್ತಿದ್ದಾರೆ. ಇದು ಮುಸ್ಲಿಂ ಹೆಣ್ಣುಮಕ್ಕಳ ವಿದ್ಯಾಭ್ಯಾಸವನ್ನು ತಡೆಯುವ ಪ್ರಯತ್ನ. ಸರ್ಕಾರಿ ಕಾಲೇಜಿನ ಪ್ರಿನ್ಸಿಪಾಲ್ ಹೆಣ್ಣುಮಕ್ಕಳನ್ನ ತಡೆದಿದ್ದು ಅಮಾನವೀಯ. ಕಣ್ಣೀರು ಹಾಕಿದರೂ ಬಿಡಲಿಲ್ಲ. ಅವನ್ಯಾವನೋ ಶಾಸಕ ರಘುಪತಿ ಬಟ್, ಅವನು ಹೇಳಿದನಂತೆ ಇವನು ತಡೆದನಂತೆ ಅವನು ಯಾರು ಹೇಳೋಕೆ ಯುನಿಫಾರ್ಮ್ ತನ್ನಿ ಅಂತ ಎಂದು ಏಕವಚನದಲ್ಲಿ ಕಿಡಿಕಾರಿದರು.

ಈ ಬೆಳವಣಿಗೆ ಸಂವಿಧಾನ ವಿರೋಧಿ ನಡೆ. ಕೇಸರಿ ಶಾಲು ಹಾಕಿಕೊಂಡು ಬಂದಿದ್ದರ ಉದ್ದೇಶ ಏನು? ಆ ಪ್ರಿನ್ಸಿಪಾಲ್‌ನ ಸಸ್ಪೆಂಡ್ ಮಾಡಬೇಕು. ಕೇಸರಿ ಶಾಲು ಮೊದಲಿನಿಂದ ಹಾಕ್ತಿದ್ರಾ? ಹಿಜಬ್ ಮೊದಲಿನಿಂದಲೂ ಹಾಕುತ್ತಿದ್ದರು. ಕೋರ್ಟ್‌ನಲ್ಲಿ ವಿಚಾರಣೆಯಿದೆ. ನಾನು ಲಾಯರ್, ಪ್ರತಿಪಕ್ಷ ನಾಯಕನಾಗಿಯೇ ಹೇಳುತ್ತಿದ್ದೇನೆ. ಕೇಸರಿ ಶಾಲು ಹಾಕೋದು ಯಾವಾಗಿಂತ ಬಂತು? ನಿನ್ನೆ, ಮೊನ್ನೆಯಿಂದ ಬಂದಿದೆ. ಹಿಜಬ್ ಹಿಂದಿನಿಂದಲೂ ಇದೆ. ಕರಾವಳಿಯು ಸಂಘ ಪರಿವಾರದ ಕೋಮುವಾದದ ಪ್ರಯೋಗಾಲಯವಾಗಿದೆ ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ :

Vishwa News 24

Recent Posts

ಗ್ರಾಪಂ. ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ : ಸಚಿವ ಈಶ್ವರ್‌ ಖಂಡ್ರೆ ಸೂಚನೆ -vishwanews24

ಗ್ರಾಪಂ. ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ : ಸಚಿವ ಈಶ್ವರ್‌ ಖಂಡ್ರೆ ಸೂಚನೆ ಬೆಂಗಳೂರು: ಸೆ.14ರಂದು ರಾಜ್ಯಾದ್ಯಂತ ಆಚರಿಸಲಿರುವ…

18 hours ago

ಮೂಡುಬಿದಿರೆ : ನಾಳೆ (ಆ. 7 ಹಾಗೂ 8 ರಂದು ) ದೇಶದ ಬೃಹತ್ ಉಚಿತ ಉದ್ಯೋಗ ಮೇಳ ಆಳ್ವಾಸ್ ಪ್ರಗತಿ-2026ಕ್ಕೆ  ಚಾಲನೆ -vishwanews24

ಮೂಡುಬಿದಿರೆ : ನಾಳೆ (ಆ. 7 ಹಾಗೂ 8 ರಂದು ) ದೇಶದ ಬೃಹತ್ ಉಚಿತ ಉದ್ಯೋಗ ಮೇಳ ಆಳ್ವಾಸ್…

18 hours ago

ಬರ್ತ್‌ಡೇ, ಪ್ರಿವೆಡ್ಡಿಂಗ್‌ ಫೋಟೋಶೂಟ್‌ಗಳಿಗೆ ಬಾಡಿಗೆಗೆ ಸಿಗಲಿದೆ ಡಬಲ್‌ ಡೆಕ್ಕರ್‌ ಅಂಬಾರಿ ಬಸ್‌! -vishwanews24

ಬರ್ತ್‌ಡೇ, ಪ್ರಿವೆಡ್ಡಿಂಗ್‌ ಫೋಟೋಶೂಟ್‌ಗಳಿಗೆ ಬಾಡಿಗೆಗೆ ಸಿಗಲಿದೆ ಡಬಲ್‌ ಡೆಕ್ಕರ್‌ ಅಂಬಾರಿ ಬಸ್‌! ಬೆಂಗಳೂರು : ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ…

18 hours ago

ಮಲ್ಪೆ : ಕಡಲಿಗಿಳಿದ ಮೀನುಗಾರಿಕೆ ಬೋಟುಗಳು -vishwanews24

ಮಲ್ಪೆ : ಕಡಲಿಗಿಳಿದ ಮೀನುಗಾರಿಕೆ ಬೋಟುಗಳು ಮಲ್ಪೆ: ಸಮುದ್ರ ಸಹಜ ಸ್ಥಿತಿಗೆ ಬಂದ ಹಿನ್ನೆಲೆಯಲ್ಲಿ ಮಲ್ಪೆ ಬಂದರಿನಲ್ಲಿ ತಮಿಳುನಾಡಿನ ಮೀನುಗಾರ…

21 hours ago

ಚಿಕ್ಕಮಗಳೂರು : ಭಾರೀ ಗಾಳಿಗೆ ಬೈಕ್ ಮೇಲೆ ಬಿದ್ದ ಮರ; ಸವಾರ ಕೂದಲೆಳೆ ಅಂತರದಲ್ಲಿ ಪಾರು -vishwanews24

ಚಿಕ್ಕಮಗಳೂರು : ಭಾರೀ ಗಾಳಿಗೆ ಬೈಕ್ ಮೇಲೆ ಬಿದ್ದ ಮರ; ಸವಾರ ಕೂದಲೆಳೆ ಅಂತರದಲ್ಲಿ ಪಾರು ಪ್ರವಾಸಿಗರು ಎಚ್ಚರಿಕೆಯಿಂದ ಸಂಚರಿಸುವಂತೆ…

21 hours ago

ಅಮಾನವೀಯ ಘಟನೆ : ತಂದೆಯ ಅಂತಿಮ ದರ್ಶನಕ್ಕೆ ಬರಲಾಗದೆ ವಿಡಿಯೋ ಕಾಲ್ ಮೂಲಕ ಅಂತ್ಯಸಂಸ್ಕಾರ ವೀಕ್ಷಿಸಿದ ಪುತ್ರಿಯರು -vishwanews24

ಅಮಾನವೀಯ ಘಟನೆ : ತಂದೆಯ ಅಂತಿಮ ದರ್ಶನಕ್ಕೆ ಬರಲಾಗದೆ ವಿಡಿಯೋ ಕಾಲ್ ಮೂಲಕ ಅಂತ್ಯಸಂಸ್ಕಾರ ವೀಕ್ಷಿಸಿದ ಪುತ್ರಿಯರು ಸೋನಿಪತ್: ತಮ್ಮ…

21 hours ago