Featured

ಹಿಜಬ್ ವಿಚಾರದಲ್ಲಿ ಪರೀಕ್ಷೆ ವಂಚಿತರಾದ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ನಡೆಸಲ್ಲ ಎಂದ ಶಿಕ್ಷಣ ಸಚಿವರ ನಿಲುವು ಖಂಡನೀಯ: ಕ್ಯಾಂಪಸ್ ಫ್ರಂಟ್  – Vishwanews24

ಹಿಜಬ್ ವಿಚಾರದಲ್ಲಿ ಪರೀಕ್ಷೆ ವಂಚಿತರಾದ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ನಡೆಸಲ್ಲ ಎಂದ ಶಿಕ್ಷಣ ಸಚಿವರ ನಿಲುವು ಖಂಡನೀಯ: ಕ್ಯಾಂಪಸ್ ಫ್ರಂಟ್  – Vishwanews24

ಬೆಂಗಳೂರು: ಹಿಜಬ್ ವಿಚಾರದಲ್ಲಿ ಪರೀಕ್ಷೆ ವಂಚಿತರಾದ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ನಡೆಸುವುದಿಲ್ಲ ಎಂದ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರ ನಿಲುವು ಖಂಡನೀಯ ಎಂದು ಕ್ಯಾಂಪಸ್ ಫ್ರಂಟ್ ಕಿಡಿಕಾರಿದೆ.

ಈ ಬಗ್ಗೆ ಮಾಧ್ಯಮ ಪ್ರಕಟನೆ ಹೊರಡಿಸಿರುವ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸಮಿತಿ, ಸಂವಿಧಾನವು ಪ್ರತಿಯೊಬ್ಬರಿಗೂ ಧಾರ್ಮಿಕ ಸ್ವಾತಂತ್ರ್ಯ ಮತ್ತು ಶಿಕ್ಷಣದ ಹಕ್ಕನ್ನು ನೀಡಿದೆ. ಆದರೆ ಈ ಹಕ್ಕನ್ನು ಕಸಿದಿರುವ ರಾಜ್ಯ ಸರ್ಕಾರದ ಅನ್ಯಾಯದ ಕ್ರಮವನ್ನು ವಿರೋಧಿಸಿ ಪ್ರತಿಭಟಿಸಿದ ಸಾವಿರಾರು ವಿದ್ಯಾರ್ಥಿಗಳು ಪರೀಕ್ಷೆಯಿಂದ ವಂಚಿತರಾಗಿದ್ದಾರೆ. ಇದೀಗ ವಿದ್ಯಾರ್ಥಿನಿಯರಿಗೆ ಮರು ಪರೀಕ್ಷೆ ನಡೆಸುವುದಿಲ್ಲ ಎಂದಿರುವ ಶಿಕ್ಷಣ ಸಚಿವರ ನಿಲುವನ್ನು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸಮಿತಿ ತೀವ್ರವಾಗಿ ಖಂಡಿಸುತ್ತದೆ ಎಂದಿದೆ.

ಪದವಿ ಪೂರ್ವ ವಿದ್ಯಾರ್ಥಿಗಳ ಭವಿಷ್ಯದಲ್ಲಿ ಸರ್ಕಾರವು ಚೆಲ್ಲಾಟವಾಡುತ್ತಿದ್ದು, ಇಂದು ರಾಜ್ಯದಲ್ಲಿ ಹಲವಾರು ಮುಸ್ಲಿಮ್ ವಿದ್ಯಾರ್ಥಿನಿಯರು ಪರೀಕ್ಷೆಯಿಂದ ವಂಚಿತರಾಗಿದ್ದಾರೆ. ಸಚಿವರ ಹೇಳಿಕೆಯನ್ನು ಗಮನಿಸಿದರೆ, ಮುಸ್ಲಿಮ್ ವಿದ್ಯಾರ್ಥಿಗಳನ್ನು ಶಿಕ್ಷಣದಿಂದ ವಂಚಿಸಿ ಅವರ ಸಾಕ್ಷರತಾ ಪ್ರಮಾಣವನ್ನು ಕಡಿಮೆ ಮಾಡಬೇಕೆಂಬ ದುರುದ್ದೇಶ ಅವರ ಹೇಳಿಕೆಯಲ್ಲಿ ಎದ್ದು ಕಾಣುತ್ತಿದೆ. ಶಿಕ್ಷಣವು ಪ್ರತಿಯೊಬ್ಬ ಪ್ರಜೆಗಳ ಮೂಲಭೂತ ಹಕ್ಕು, ಇದನ್ನು ಕಸಿಯಲು ಸಂವಿಧಾನ ಯಾರಿಗೂ ಅನುಮತಿಸುವುದಿಲ್ಲ. ಈ ಹಿನ್ನೆಲೆಯಲ್ಲಿ ಸರ್ಕಾರವು ಧಾರ್ಮಿಕ ಸ್ವಾತಂತ್ರ್ಯದ ಹಕ್ಕಿನೊಂದಿಗೆ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅನುವು ಮಾಡಿಕೊಡಬೇಕು. ಹಾಗೆಯೇ ಸರ್ಕಾರವು ವಿದ್ಯಾರ್ಥಿಗಳ ಧಾರ್ಮಿಕ ಹಾಗೂ ಶಿಕ್ಷಣದ ಮೂಲಭೂತ ಹಕ್ಕನ್ನು ಖಾತರಿಪಡಿಸಬೇಕೆಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯಾಧ್ಯಕ್ಷರಾದ ಅಥಾವುಲ್ಲ ಪುಂಜಾಲಕಟ್ಟೆ ಒತ್ತಾಯಿಸಿದ್ದಾರೆ.

Vishwa News 24

Recent Posts

ಮಲ್ಪೆ : ಕಡಲಿಗಿಳಿದ ಮೀನುಗಾರಿಕೆ ಬೋಟುಗಳು -vishwanews24

ಮಲ್ಪೆ : ಕಡಲಿಗಿಳಿದ ಮೀನುಗಾರಿಕೆ ಬೋಟುಗಳು ಮಲ್ಪೆ: ಸಮುದ್ರ ಸಹಜ ಸ್ಥಿತಿಗೆ ಬಂದ ಹಿನ್ನೆಲೆಯಲ್ಲಿ ಮಲ್ಪೆ ಬಂದರಿನಲ್ಲಿ ತಮಿಳುನಾಡಿನ ಮೀನುಗಾರ…

2 hours ago

ಚಿಕ್ಕಮಗಳೂರು : ಭಾರೀ ಗಾಳಿಗೆ ಬೈಕ್ ಮೇಲೆ ಬಿದ್ದ ಮರ; ಸವಾರ ಕೂದಲೆಳೆ ಅಂತರದಲ್ಲಿ ಪಾರು -vishwanews24

ಚಿಕ್ಕಮಗಳೂರು : ಭಾರೀ ಗಾಳಿಗೆ ಬೈಕ್ ಮೇಲೆ ಬಿದ್ದ ಮರ; ಸವಾರ ಕೂದಲೆಳೆ ಅಂತರದಲ್ಲಿ ಪಾರು ಪ್ರವಾಸಿಗರು ಎಚ್ಚರಿಕೆಯಿಂದ ಸಂಚರಿಸುವಂತೆ…

2 hours ago

ಅಮಾನವೀಯ ಘಟನೆ : ತಂದೆಯ ಅಂತಿಮ ದರ್ಶನಕ್ಕೆ ಬರಲಾಗದೆ ವಿಡಿಯೋ ಕಾಲ್ ಮೂಲಕ ಅಂತ್ಯಸಂಸ್ಕಾರ ವೀಕ್ಷಿಸಿದ ಪುತ್ರಿಯರು -vishwanews24

ಅಮಾನವೀಯ ಘಟನೆ : ತಂದೆಯ ಅಂತಿಮ ದರ್ಶನಕ್ಕೆ ಬರಲಾಗದೆ ವಿಡಿಯೋ ಕಾಲ್ ಮೂಲಕ ಅಂತ್ಯಸಂಸ್ಕಾರ ವೀಕ್ಷಿಸಿದ ಪುತ್ರಿಯರು ಸೋನಿಪತ್: ತಮ್ಮ…

3 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಎ-14 ಪ್ರದೋಷ್‌ನಿಂದ ಮಾಫಿ ಸಾಕ್ಷಿಗೆ ಅರ್ಜಿ -vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಎ-14 ಪ್ರದೋಷ್‌ನಿಂದ ಮಾಫಿ ಸಾಕ್ಷಿಗೆ ಅರ್ಜಿ ನಾನು ಸತ್ಯವನ್ನೇ ಹೇಳುತ್ತೇನೆ.. ಮಾಫಿ ಸಾಕ್ಷಿಯಾಗಿ ಪರಿಗಣಿಸಿ…

3 hours ago

ಸುರತ್ಕಲ್: ಶಾಲೆಯಲ್ಲಿ ವಾಲಿಬಾಲ್ ಆಡುತ್ತಿದ್ದ ವೇಳೆ ಕುಸಿದು ಬಿದ್ದು 10ನೇ ತರಗತಿ ವಿದ್ಯಾರ್ಥಿ ಸಾವು -vishwanews24

ಸುರತ್ಕಲ್: ಶಾಲೆಯಲ್ಲಿ ವಾಲಿಬಾಲ್ ಆಡುತ್ತಿದ್ದ ವೇಳೆ ಕುಸಿದು ಬಿದ್ದು 10ನೇ ತರಗತಿ ವಿದ್ಯಾರ್ಥಿ ಸಾವು ಮಂಗಳೂರು: ಸುರತ್ಕಲ್ ಸಮೀಪದ ಕೋಟೆ…

4 hours ago

ಮಂಗಳೂರು : ನ್ಯುಮೋನಿಯ ಜ್ವರದಿಂದ ವಿದ್ಯಾರ್ಥಿನಿ ಮೃತ್ಯು -vishwanews24

ಮಂಗಳೂರು : ನ್ಯುಮೋನಿಯ ಜ್ವರದಿಂದ ವಿದ್ಯಾರ್ಥಿನಿ ಮೃತ್ಯು ಮಂಗಳೂರು: ಒಂದು ವಾರದಿಂದ ನ್ಯುಮೋನಿಯ ಜ್ವರದಿಂದ ಬಳಲುತ್ತಿದ್ದ ಕಂದಾವರದ ನಿವಾಸಿ, ವಿದ್ಯಾರ್ಥಿನಿ…

4 hours ago