ಬೆಂಗಳೂರು: ಹಿಜಬ್ ವಿವಾದದ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಇಲಾಖೆ ಹಾಗೂ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ವ್ಯಾಪ್ತಿಗೆ ಬರುವ ಶಿಕ್ಷಣ ಸಂಸ್ಥೆಗಳಿಗೆ ನೀಡಿದ್ದ ರಜೆಯನ್ನು ಮುಂಜಾಗ್ರತಾ ಕ್ರಮವಾಗಿ ಫೆ.16ರವರೆಗೂ ಮುಂದುವರಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ್ ತಿಳಿಸಿದ್ದಾರೆ.
ಶುಕ್ರವಾರ ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಇಲಾಖೆ ವ್ಯಾಪ್ತಿಗೆ ಬರುವ ಎಲ್ಲ ವಿಶ್ವವಿದ್ಯಾಲಯಗಳು, ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಥಮ ದರ್ಜೆ ಕಾಲೇಜುಗಳು, ಎಂಜಿನಿಯರಿಂಗ್ ಮತ್ತು ಡಿಪ್ಲೊಮಾ ಕಾಲೇಜುಗಳಿಗೆ ಇದು ಅನ್ವಯಿಸುತ್ತದೆ. ಆದರೆ, ಈ ಅವಧಿಯಲ್ಲಿ ಆನ್ಲೈನ್ ಬೋಧನೆ ಎಂದಿನಂತೆಯೇ ನಡೆಯಲಿದೆ. ಜೊತೆಗೆ, ಈಗಾಗಲೇ ನಡೆಯುತ್ತಿರುವ ಮತ್ತು ನಿಗದಿಯಾಗಿರುವ ಪರೀಕ್ಷೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಪರಿಸ್ಥಿತಿಯನ್ನು ಅವಲೋಕಿಸಿ, ಕಾಲೇಜು ಪುನಾರಂಭದ ಬಗ್ಗೆ ಫೆ.16ರ ಹೊತ್ತಿಗೆ ತೀರ್ಮಾನಿಸಲಾಗುವುದು ಎಂದು ಅವರು ಹೇಳಿದ್ದಾರೆ. ಹಿಜಬ್-ಕೇಸರಿ ಸಂಘರ್ಷ ಹೈಕೋರ್ಟ್ನಲ್ಲಿರುವಂತೆ ಇತ್ತ ಶಾಂತಿ ಸುವ್ಯವಸ್ಥೆ ಕಾಪಾಡಲು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…