Featured

ಹಿಜಬ್ ಹೆಸರಿನಲ್ಲಿ ಮಕ್ಕಳಿಗೆ ವಿಭಜನೆ ವಿಷವನ್ನು ತಿನ್ನಿಸಬಾರದು : ಸದ್ಗುರು ಜಗ್ಗಿ ವಾಸುದೇವ್ – Vishwanews24

ಹಿಜಬ್ ಹೆಸರಿನಲ್ಲಿ ಮಕ್ಕಳಿಗೆ ವಿಭಜನೆ ವಿಷವನ್ನು ತಿನ್ನಿಸಬಾರದು : ಸದ್ಗುರು ಜಗ್ಗಿ ವಾಸುದೇವ್ – Vishwanews24

ನವದೆಹಲಿ: ಹಿಜಬ್ ಹೆಸರಿನಲ್ಲಿ ಮಕ್ಕಳಿಗೆ ವಿಭಜನೆ ವಿಷವನ್ನು ತಿನ್ನಿಸಬಾರದು ಎಂದು ಇಶಾ ಫೌಂಡೇಶನ್ ಸಂಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಶಾಲೆಗಳಲ್ಲಿ ಡ್ರೆಸ್ ಕೋಡ್‍ನಲ್ಲಿ ಕುರಿತಂತೆ ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ನೀವು ಧರಿಸುವ ಹಿಜಬ್, ಬುರ್ಖಾ, ಸೀರೆ ಮತ್ತು ನೀವು ತಿನ್ನುವ ಖಿಚಡಿ ಅಥವಾ ಬಿರಿಯಾನಿ ಎಲ್ಲವೂ ಮಣ್ಣಿನಿಂದ ಬರುತ್ತದೆ. ಆದ್ದರಿಂದ ಮಣ್ಣಿಗೆ ಅದ್ಭುತವಾಗಿ ಒಂದುಗೂಡಿಸುವ ಶಕ್ತಿಯಿದೆ. ನಮ್ಮನ್ನು ಒಟ್ಟಿಗೆ ಸೇರಿಸುವ ಜೀವನದ ಅಂಶಗಳನ್ನು ನೋಡುವ ಬದಲು, ನಾವು ನಿರಂತರವಾಗಿ ನಮ್ಮನ್ನು ವಿಭಜಿಸುವ ಅಂಶಗಳನ್ನು ನೋಡುತ್ತಿದ್ದೇವೆ ಎಂದಿದ್ದಾರೆ.

ಮಣ್ಣು ಸಾರ್ವತ್ರಿಕ ವಸ್ತುವಾಗಿದೆ. ನೀವು ಯಾರು, ಯಾವ ಧರ್ಮ, ಜನಾಂಗ, ರಾಷ್ಟ್ರೀಯತೆಗೆ ಸೇರಿದವರು ಎಂಬುದು ಮುಖ್ಯವಲ್ಲ. ನೀವು ಮಣ್ಣಿನಿಂದ ಬಂದು, ಮರಳಿ ಮಣ್ಣಿಗೆ ಹೋಗುತ್ತೀರಾ. ಆದ್ದರಿಂದ ಇದು ಮಣ್ಣು ಒಂದು ಪ್ರಮುಖ ಒಗ್ಗೂಡಿಸುವ ಮೂಲವಾಗಿದೆ. ಹಿಂದಿನ ಪೀಳಿಗೆಯವರು ಬದುಕಿದ ಪೂರ್ವಾಗ್ರಹಗಳೊಂದಿಗೆ ಮಕ್ಕಳು ಬೆಳೆಸಬಾರದು. ನೀವು ಶಾಲೆಗಳಲ್ಲಿದ್ದಾಗ ನಿಮ್ಮನ್ನು ಮಕ್ಕಳು ಎಂದು ಪರಿಗಣಿಸಲಾಗುತ್ತದೆ. ಹೀಗಿರುವಾಗ ಮಕ್ಕಳಿಗೆ ನೀವು ಹಿಜಬ್ ಹೆಸರಿನಲ್ಲಿ ಭಜನೆಯ ವಿಷವನ್ನು ತಿನ್ನಿಸಬಾರದು ಎಂದು ಹೇಳಿದ್ದಾರೆ.

ಹಿಂದಿನ ಪೀಳಿಗೆಯ ಜನರಂತೆ ಮಕ್ಕಳು ಬೆಳೆಯಬೇಕು ಎಂದಿಲ್ಲ. ನಮ್ಮಲ್ಲಿ ಯಾವುದೇ ಪೂರ್ವಾಗ್ರಹಗಳು, ಸಮಸ್ಯೆಗಳು, ದ್ವೇಷ ಅಥವಾ ಪ್ರೀತಿ ಇರಲಿ ಇದನ್ನು ಮಕ್ಕಳ ಮೇಲೆ ಬಲವಂತವಾಗಿ ಹೇರಬಾರದು. ನೀವು ಬದುಕಿದ ಪೂರ್ವಾಗ್ರಹಗಳೊಂದಿಗೆ ಮಕ್ಕಳು ಬೆಳೆಯಬಾರದು ಎಂದಿದ್ದಾರೆ.

 

Vishwa News 24

Recent Posts

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ – vishwanews24

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…

17 hours ago

ಮಹಾರಾಷ್ಟ್ರ : ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ- vishwanews24

ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…

17 hours ago

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  – vishwanews24

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…

17 hours ago

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…

18 hours ago

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…

18 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

4 days ago