Featured

ಹಿಜಬ್ ಹೆಸರಿನಲ್ಲಿ ಮಕ್ಕಳಿಗೆ ವಿಭಜನೆ ವಿಷವನ್ನು ತಿನ್ನಿಸಬಾರದು : ಸದ್ಗುರು ಜಗ್ಗಿ ವಾಸುದೇವ್ – Vishwanews24

ಹಿಜಬ್ ಹೆಸರಿನಲ್ಲಿ ಮಕ್ಕಳಿಗೆ ವಿಭಜನೆ ವಿಷವನ್ನು ತಿನ್ನಿಸಬಾರದು : ಸದ್ಗುರು ಜಗ್ಗಿ ವಾಸುದೇವ್ – Vishwanews24

ನವದೆಹಲಿ: ಹಿಜಬ್ ಹೆಸರಿನಲ್ಲಿ ಮಕ್ಕಳಿಗೆ ವಿಭಜನೆ ವಿಷವನ್ನು ತಿನ್ನಿಸಬಾರದು ಎಂದು ಇಶಾ ಫೌಂಡೇಶನ್ ಸಂಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಶಾಲೆಗಳಲ್ಲಿ ಡ್ರೆಸ್ ಕೋಡ್‍ನಲ್ಲಿ ಕುರಿತಂತೆ ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ನೀವು ಧರಿಸುವ ಹಿಜಬ್, ಬುರ್ಖಾ, ಸೀರೆ ಮತ್ತು ನೀವು ತಿನ್ನುವ ಖಿಚಡಿ ಅಥವಾ ಬಿರಿಯಾನಿ ಎಲ್ಲವೂ ಮಣ್ಣಿನಿಂದ ಬರುತ್ತದೆ. ಆದ್ದರಿಂದ ಮಣ್ಣಿಗೆ ಅದ್ಭುತವಾಗಿ ಒಂದುಗೂಡಿಸುವ ಶಕ್ತಿಯಿದೆ. ನಮ್ಮನ್ನು ಒಟ್ಟಿಗೆ ಸೇರಿಸುವ ಜೀವನದ ಅಂಶಗಳನ್ನು ನೋಡುವ ಬದಲು, ನಾವು ನಿರಂತರವಾಗಿ ನಮ್ಮನ್ನು ವಿಭಜಿಸುವ ಅಂಶಗಳನ್ನು ನೋಡುತ್ತಿದ್ದೇವೆ ಎಂದಿದ್ದಾರೆ.

ಮಣ್ಣು ಸಾರ್ವತ್ರಿಕ ವಸ್ತುವಾಗಿದೆ. ನೀವು ಯಾರು, ಯಾವ ಧರ್ಮ, ಜನಾಂಗ, ರಾಷ್ಟ್ರೀಯತೆಗೆ ಸೇರಿದವರು ಎಂಬುದು ಮುಖ್ಯವಲ್ಲ. ನೀವು ಮಣ್ಣಿನಿಂದ ಬಂದು, ಮರಳಿ ಮಣ್ಣಿಗೆ ಹೋಗುತ್ತೀರಾ. ಆದ್ದರಿಂದ ಇದು ಮಣ್ಣು ಒಂದು ಪ್ರಮುಖ ಒಗ್ಗೂಡಿಸುವ ಮೂಲವಾಗಿದೆ. ಹಿಂದಿನ ಪೀಳಿಗೆಯವರು ಬದುಕಿದ ಪೂರ್ವಾಗ್ರಹಗಳೊಂದಿಗೆ ಮಕ್ಕಳು ಬೆಳೆಸಬಾರದು. ನೀವು ಶಾಲೆಗಳಲ್ಲಿದ್ದಾಗ ನಿಮ್ಮನ್ನು ಮಕ್ಕಳು ಎಂದು ಪರಿಗಣಿಸಲಾಗುತ್ತದೆ. ಹೀಗಿರುವಾಗ ಮಕ್ಕಳಿಗೆ ನೀವು ಹಿಜಬ್ ಹೆಸರಿನಲ್ಲಿ ಭಜನೆಯ ವಿಷವನ್ನು ತಿನ್ನಿಸಬಾರದು ಎಂದು ಹೇಳಿದ್ದಾರೆ.

ಹಿಂದಿನ ಪೀಳಿಗೆಯ ಜನರಂತೆ ಮಕ್ಕಳು ಬೆಳೆಯಬೇಕು ಎಂದಿಲ್ಲ. ನಮ್ಮಲ್ಲಿ ಯಾವುದೇ ಪೂರ್ವಾಗ್ರಹಗಳು, ಸಮಸ್ಯೆಗಳು, ದ್ವೇಷ ಅಥವಾ ಪ್ರೀತಿ ಇರಲಿ ಇದನ್ನು ಮಕ್ಕಳ ಮೇಲೆ ಬಲವಂತವಾಗಿ ಹೇರಬಾರದು. ನೀವು ಬದುಕಿದ ಪೂರ್ವಾಗ್ರಹಗಳೊಂದಿಗೆ ಮಕ್ಕಳು ಬೆಳೆಯಬಾರದು ಎಂದಿದ್ದಾರೆ.

 

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

4 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

4 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

4 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

4 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

5 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

5 hours ago