Featured

ಹಿಜಾಬ್‌ಗೆ ಅನುಮತಿ : ಸಾಮಾಜಿಕ ಸಾಮರಸ್ಯವನ್ನು ಕದಡುವುದೇ ಸಿದ್ದರಾಮಯ್ಯ ಸರ್ಕಾರದ ಕಸುಬಾಗಿ ಬಿಟ್ಟಿದೆ : ಸುನಿಲ್ ಕುಮಾರ್ ಆಕ್ರೋಶ – vishwanews24

ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸಲು ಅವಕಾಶ: ಕಾಂಗ್ರೆಸ್ ನ ಮುಸ್ಲಿಂ ಓಲೈಕೆ ನೀತಿ ಬಹಿರಂಗ : ಸುನಿಲ್ ಕುಮಾರ್

ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತೊಮ್ಮೆ ತನ್ನ ಮುಸ್ಲಿಂ ಓಲೈಕೆ ನೀತಿಯನ್ನು ಬಹಿರಂಗವಾಗಿ ಪ್ರಕಟಗೊಳಿಸಿದೆ. 2022ರಲ್ಲಿ ರಾಜ್ಯದ ಎಲ್ಲ ಸರ್ಕಾರಿ ಶಿಕ್ಷಣ ಸಂಸ್ಥೆಗಳು ಹಾಗೂ ಪದವಿಪೂರ್ವ ಕಾಲೇಜುಗಳಲ್ಲಿ ವಸ್ತ್ರಸಂಹಿತೆಯನ್ನು ಜಾರಿಗೆ ತಂದಿತ್ತು. ಈ ವಿಚಾರ ಇನ್ನೂ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆಗೆ ಬಾಕಿ ಇರುವ ಸಂದರ್ಭದಲ್ಲೇ ಸರ್ಕಾರ ಆದೇಶವನ್ನು ವಾಪಾಸ್ ಪಡೆದು ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದಕ್ಕೆ ಅವಕಾಶ ಕಲ್ಪಿಸಿರುವುದು ಸಂವಿಧಾನ ವಿರೋಧಿಯಷ್ಟೇ ಅಲ್ಲ, ನ್ಯಾಯಾಂಗ ನಿಂದನೆಯೂ ಹೌದು ಎಂದು ಕಾರ್ಕಳ ಶಾಸಕ ಸುನಿಲ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ

ದಾವಣಗೆರೆ ಉಪ ಚುನಾವಣೆ ಸಂದರ್ಭದಲ್ಲಿ ಮುಸ್ಲಿಂ ಸಮುದಾಯ ಕಾಂಗ್ರೆಸ್ ಗೆ ಕೊಟ್ಟ ಕಪಾಳಮೋಕ್ಷದ ನೋವನ್ನು ಮರೆಯುವುದಕ್ಕಾಗಿ ಸಿದ್ದರಾಮಯ್ಯ ಸರ್ಕಾರ ಈಗ ಒಂದಾದ ಮೇಲ್ಲೊಂದರಂತೆ ಮುಸ್ಲಿಂ ತುಷ್ಟೀಕರಣ ನಡೆಸುತ್ತಿದೆ. ಕಳೆದ ಬಾರಿ ಕ್ಯಾಬಿನೆಟ್ ಸಭೆಯಲ್ಲಿ ಮುಸ್ಲಿಂ ಕಾಲೋನಿಗಳ ಅಭಿವೃದ್ಧಿಗೆ ಕೋಟ್ಯಂತರ ರೂ. ಅನುದಾನ ಕೊಡಲಾಗಿತ್ತು. ಅದರ ಬೆನ್ನಲ್ಲೇ ಈಗ ಹಿಜಾಬ್ ಗೆ ಅವಕಾಶ ನೀಡಲಾಗಿದೆ.

ಇದನ್ನೂ ಓದಿ: 

ತನ್ನ ಮತ ಬ್ಯಾಂಕ್ ಭದ್ರಪಡಿಸಿಕೊಳ್ಳುವುದಕ್ಕಾಗಿ ದೇಶದ ಸಮಗ್ರತೆ ಹಾಗೂ ಸಂವಿಧಾನವನ್ನು ಒತ್ತೆ ಇಡುವುದಕ್ಕೆ ಹೇಸದ ಕಾಂಗ್ರೆಸಿರಿಗೆ ಈಗ ಮತ್ತೆ ಹಿಜಾಬ್ ಧ್ಯಾನ ಶುರುವಾಗಿದೆ. ಈ ಆದೇಶ ಎಷ್ಟು ಗೊಂದಲ ಗೂಡಾಗಿದೆಯೆಂದರೆ ಸಮವಸ್ತ್ರದ ಮೂಲ ಉದ್ದೇಶವನ್ನು ಬದಲಾಯಿಸಬಾರದು ಅಥವಾ ಹಾಳು ಮಾಡಬಾರದು ಎಂದು ಆದೇಶದಲ್ಲಿ ಉಲ್ಲೇಖಿಸಿದ್ದಾರೆ. ಹಿಜಾಬ್ ಧರಿಸಿದರೆ ಸಮವಸ್ತ್ರದ ಮೂಲ ಕಲ್ಪನೆಯೇ ವ್ಯತ್ಯಾಸವಾಗುತ್ತದೆ. ಒಟ್ಟಾರೆಯಾಗಿ ಈ ಸರ್ಕಾರಕ್ಕೊಂದು ಶೈಕ್ಷಣಿಕ ಧೋರಣೆಯೇ ಇಲ್ಲ. ಸಾಮಾಜಿಕ ಸಾಮರಸ್ಯವನ್ನು ಕದಡುವ ವಿಷ ಕಕ್ಕುವುದೇ ಸಿದ್ದರಾಮಯ್ಯ ಸರ್ಕಾರದ ಕಸುಬಾಗಿ ಬಿಟ್ಟಿದೆ. ಇಂಥ ಓಲೈಕೆ ರಾಜಕಾರಣದಿಂದ ದೇಶಾದ್ಯಂತ ” ಕಸ”ವಾಗಿರುವ ಕಾಂಗ್ರೆಸ್ ಸದ್ಯದಲ್ಲಿ ರಾಜ್ಯದಲ್ಲೂ ಮೂಲೆಗೆ ಸೇರುವ ದಿನಗಣನೆ ಈ ಆದೇಶದೊಂದಿಗೆ ಪ್ರಾರಂಭವಾಗಿದೆ. ಅತಿಯಾದ ಓಲೈಕೆ ಮಾಡಿದಕ್ಕಾಗಿ ಪಶ್ಚಿಮ ಬಂಗಾಲ ಹಾಗೂ ಇತರೆ ರಾಜ್ಯಗಳಲ್ಲಿ ಕತೆ ಏನಾಗಿದೆ ಎಂಬುದನ್ನು ಕಾಂಗ್ರೆಸ್ ಮರೆಯದಿರಲಿ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: 

Vishwa News 24

Recent Posts

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

2 minutes ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

7 minutes ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

15 minutes ago

ಉಡುಪಿ : ಹಿಜಾಬ್‌ಗೆ ಅನುಮತಿ; ರಾಜಕೀಯಕ್ಕಾಗಿ ವಿದ್ಯಾರ್ಥಿಗಳ ಜೀವನದಲ್ಲಿ ಚೆಲ್ಲಾಟವಾಡಲು ಅವಕಾಶ ನೀಡುವುದಿಲ್ಲ : ಯಶ್‌ಪಾಲ್ ಸುವರ್ಣ ಎಚ್ಚರಿಕೆ  – vishwanews24

ಉಡುಪಿ: ಹಿಜಾಬ್‌ಗೆ ಅನುಮತಿ; ಶಿಕ್ಷಣ ವ್ಯವಸ್ಥೆಯನ್ನ ಇಸ್ಲಾಮೀಕರಣ ಮಾಡಲು ಮುಂದಾದ ರಾಜ್ಯ ಸರ್ಕಾರ : ಯಶ್‌ಪಾಲ್ ಸುವರ್ಣ ಉಡುಪಿ: ರಾಜ್ಯದ…

33 minutes ago

ಮಧ್ಯಪ್ರಾಚ್ಯ ಬಿಕ್ಕಟ್ಟು: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗುವ ಸಾಧ್ಯತೆ : ಆರ್‌ಬಿಐ ಗವರ್ನರ್ -vishwanews24

ಮಧ್ಯಪ್ರಾಚ್ಯ ಬಿಕ್ಕಟ್ಟು: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗುವ ಸಾಧ್ಯತೆ : ಆರ್‌ಬಿಐ ಗವರ್ನರ್ ನವದೆಹಲಿ : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಬಿಕ್ಕಟ್ಟು…

59 minutes ago

ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಆಯ್ಕೆ – vishwanews24

ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಆಯ್ಕೆ ನವದೆಹಲಿ: ಹಲವು ದಿನಗಳಿಂದ ನಡೆಯುತ್ತಿದ್ದ ಹೈಡ್ರಾಮಕ್ಕೆ ತೆರೆ ಬಿದ್ದಿದ್ದು ಕೇರಳದ ನೂತನ…

1 hour ago