ಬೆಂಗಳೂರು : ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು ಪರೀಕ್ಷೆ ಬರೆಯದಿದ್ದರೆ ಅವರಿಗೆ ಮತ್ತೆ ಪರೀಕ್ಷೆ ಬರೆಯಲು ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಸಚಿವ ಜೆ. ಮಾಧುಸ್ವಾಮಿ ಹೇಳಿದ್ದಾರೆ.
ಈ ಕುರಿತು ವಿಧಾನಸಭೆಯಲ್ಲಿ ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಶಾಸಕ ರಘುಪತಿ ಭಟ್, ಹಿಜಾಬ್ ಸಂಘರ್ಷದ ವೇಳೆ ಪರೀಕ್ಷೆಯಿಂದ ವಂಚಿತರಾದವರಿಗೆ ಮತ್ತೊಮ್ಮೆ ಪರೀಕ್ಷೆಗೆ ಅವಕಾಶ ಕೊಡಬೇಕು. ಅನಗತ್ಯ ವಿವಾದ ಸೃಷ್ಟಿಸುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಮಾಧುಸ್ವಾಮಿ, ಹಿಜಾಬ್ ಕಾರಣಕ್ಕೆ ಪರೀಕ್ಷೆ ತಪ್ಪಿಸಿಕೊಂಡರೆ ಮರು ಪರೀಕ್ಷೆ ಬರೆಯಲು ಅವಕಾಶವಿಲ್ಲ. ಕೋರ್ಟ್ ಮಧ್ಯಂತರ ಆದೇಶದ ಬಳಿಕವೂ ಪರೀಕ್ಷೆ ತಪ್ಪಿಸಿಕೊಂಡರೆ ಅಂತಹ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಗೆ ಅವಕಾಶ ನೀಡಲು ಸಾಧ್ಯವಿಲ್ಲ ಎಂದಿದ್ದಾರೆ.
ಇನ್ನು ನಾವು ಒಂದು ವ್ಯವಸ್ಥೆಯಲ್ಲಿದ್ದೇವೆ. ಈಗ ಮರು ಪರೀಕ್ಷೆಗೆ ಅವಕಾಶ ಕೊಟ್ಟರೆ ಅದು ಬೇರೆ ರೀತಿ ಸಂದೇಶ ರವಾನೆಯಾಗುತ್ತದೆ ಎಂದು ಹೇಳಿದ್ದಾರೆ.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…