ಹಿಜಾಬ್, ಕೇಸರಿ ಶಾಲು ವಿವಾದ : ಉಡುಪಿ ಎಂಜಿಎಂ ಕಾಲೇಜಿನಲ್ಲಿ ಉದ್ವಿಗ್ವ ಪರಿಸ್ಥಿತಿ – ಕಾಲೇಜಿಗೆ ರಜೆ ಘೋಷಣೆ – Vishwanews24

Featured, ಉಡುಪಿ

ಹಿಜಾಬ್, ಕೇಸರಿ ಶಾಲು ವಿವಾದ : ಉಡುಪಿ ಎಂಜಿಎಂ ಕಾಲೇಜಿನಲ್ಲಿ ಉದ್ವಿಗ್ವ ಪರಿಸ್ಥಿತಿ – ಕಾಲೇಜಿಗೆ ರಜೆ ಘೋಷಣೆ – Vishwanews24

ಉಡುಪಿ: ಕರಾವಳಿಯಾದ್ಯಂತ ಹಿಜಾಬ್, ಕೇಸರಿ ಶಾಲು ವಿವಾದ ಜೋರಾಗಿದ್ದು, ಹೈಕೋರ್ಟ್‌‌ನಲ್ಲಿ ಇಂದು ಮಹತ್ವದ ವಿಚಾರಣೆ ನಡೆಯಲಿರುವ ಮಧ್ಯೆ ಎಂಜಿಎಂ ಕಾಲೇಜಿನಲ್ಲಿ ಬುರ್ಖಾ, ಹಿಜಾಬ್ ಧರಿಸಿ ವಿದ್ಯಾರ್ಥಿನಿಯರು ಬಂದಿರೆ, ವಿದ್ಯಾರ್ಥಿಗಳು ಕೇಸರಿ ಪೇಟ, ಶಾಲಿನೊಂದಿಗೆ ಕಾಲೇಜಿಗೆ ಆಗಮಿಸಿದ್ದು ಉದ್ವಿಗ್ವ ಪರಿಸ್ಥಿತಿ ನಿರ್ಮಾಣವಾಗಿದೆ. ಕಾಲೇಜಿಗೆ ರಜೆ ಘೋಷಿಸಲಾಗಿದೆ

ವಿದ್ಯಾರ್ಥಿನಿಯರು ಬುರ್ಖಾ, ಹಿಜಬ್ ಧರಿಸಿ ಬಂದಿದ್ದು, ಕೇಸರಿ ಪೇಟ, ಕೇಸರಿ ಶಾಲು ತೊಟ್ಟು ವಿದ್ಯಾರ್ಥಿಗಳು ಕಾಲೇಜಿಗೆ ಬಂದಿದ್ದಾರೆ. ಈ ವೇಳೆ ಆಡಳಿತ ಮಂಡಳಿ ಗೇಟ್ ಗೆ ಬೀಗ ಹಾಕಿದ್ದು, ಕೇಸರಿ ಪೇಟ ತೊಟ್ಟ ವಿದ್ಯಾರ್ಥಿಗಳು ಹಾಗೂ ಬುರ್ಖಾ ತೊಟ್ಟ ವಿದ್ಯಾರ್ಥಿನಿಯರು ಆವರಣದ ಹೊರಗಿಂದ ಬೀಗ ತೆಗೆಯಲು ಕಾಯುತ್ತಿದ್ದಾರೆ.

ಮಂಗಳೂರು : ಬಿಜೆಪಿಯ ನಿರ್ಲಕ್ಷ್ಯ ಭಾವನೆಯಿಂದಾಗಿ ಮುಗ್ದ ವಿದ್ಯಾರ್ಥಿಗಳ ಮನಸ್ಸಿನಲ್ಲಿ ದ್ವೇಷದ ವಿಷಬೀಜ ಬಿತ್ತುವ ಕೆಲಸ ಮಾಡಿರುವುದು ನಾಚೀಕೆಗೇಡು : ಅಕ್ಷಿತ್‌ ಸುವರ್ಣ ಆಕ್ರೋಶ – Vishwanews24

ಇನ್ನು ರೆಸ್ಟ್‌‌ರೂಮ್ ನಲ್ಲಿ ಬುರ್ಖಾ ತೆಗೆದಿರಲು ಕಾಲೇಜು ಸೂಚನೆ ನೀಡಿದ್ದು, ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್‌ಗೆ ಅವಕಾಶ ನೀಡಿದ್ರೆ ನಮಗೂ ಕೇಸರಿ ಶಾಲು ಧರಿಸಲು ಅವಕಾಶ ನೀಡಿ ಅಂತ ಒತ್ತಾಯಿಸಿದ್ದು, ಹಿಜಾಬ್ ನಮ್ಮ ಹಕ್ಕು ಎಂದು ಘೋಷಣೆ ಕೂಗುತ್ತಾ ಮುಸ್ಲಿಂ ವಿದ್ಯಾರ್ಥಿನಿಯರ ಪ್ರತಿಭಟನೆ ನಡೆಸುತ್ತಿದ್ದು, ಕಾಲೇಜು ಆವರಣ ಒಳಗಡೆ ಗೊಂದಲದ ವಾತಾವರಣ ನಿರ್ಮಾಣವಾಗಿದೆ.

ರಾಜ್ಯಾದ್ಯಂತ ಹಿಜಬ್ ಧರಿಸುವ ಹಕ್ಕಿಗಾಗಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ 8 ವಿದ್ಯಾರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ್ದು, ಇಂದು ಪ್ರಕರಣದ ವಿಚಾರಣೆ ಆರಂಭವಾಗಲಿದೆ.

ಕಾಂಗ್ರೆಸ್ ಪಕ್ಷದ ಸರ್ವನಾಶ ಉಡುಪಿಯಿಂದಲೇ ಪ್ರಾರಂಭ : ಈಶ್ವರಪ್ಪ ಭವಿಷ್ಯ – Vishwanews24

Leave a Reply