Featured

ಹಿಜಾಬ್, ಕೇಸರಿ ಶಾಲು ವಿವಾದ : ಉಡುಪಿ ಎಂಜಿಎಂ ಕಾಲೇಜಿನಲ್ಲಿ ಉದ್ವಿಗ್ವ ಪರಿಸ್ಥಿತಿ – ಕಾಲೇಜಿಗೆ ರಜೆ ಘೋಷಣೆ – Vishwanews24

ಹಿಜಾಬ್, ಕೇಸರಿ ಶಾಲು ವಿವಾದ : ಉಡುಪಿ ಎಂಜಿಎಂ ಕಾಲೇಜಿನಲ್ಲಿ ಉದ್ವಿಗ್ವ ಪರಿಸ್ಥಿತಿ – ಕಾಲೇಜಿಗೆ ರಜೆ ಘೋಷಣೆ – Vishwanews24

ಉಡುಪಿ: ಕರಾವಳಿಯಾದ್ಯಂತ ಹಿಜಾಬ್, ಕೇಸರಿ ಶಾಲು ವಿವಾದ ಜೋರಾಗಿದ್ದು, ಹೈಕೋರ್ಟ್‌‌ನಲ್ಲಿ ಇಂದು ಮಹತ್ವದ ವಿಚಾರಣೆ ನಡೆಯಲಿರುವ ಮಧ್ಯೆ ಎಂಜಿಎಂ ಕಾಲೇಜಿನಲ್ಲಿ ಬುರ್ಖಾ, ಹಿಜಾಬ್ ಧರಿಸಿ ವಿದ್ಯಾರ್ಥಿನಿಯರು ಬಂದಿರೆ, ವಿದ್ಯಾರ್ಥಿಗಳು ಕೇಸರಿ ಪೇಟ, ಶಾಲಿನೊಂದಿಗೆ ಕಾಲೇಜಿಗೆ ಆಗಮಿಸಿದ್ದು ಉದ್ವಿಗ್ವ ಪರಿಸ್ಥಿತಿ ನಿರ್ಮಾಣವಾಗಿದೆ. ಕಾಲೇಜಿಗೆ ರಜೆ ಘೋಷಿಸಲಾಗಿದೆ

ವಿದ್ಯಾರ್ಥಿನಿಯರು ಬುರ್ಖಾ, ಹಿಜಬ್ ಧರಿಸಿ ಬಂದಿದ್ದು, ಕೇಸರಿ ಪೇಟ, ಕೇಸರಿ ಶಾಲು ತೊಟ್ಟು ವಿದ್ಯಾರ್ಥಿಗಳು ಕಾಲೇಜಿಗೆ ಬಂದಿದ್ದಾರೆ. ಈ ವೇಳೆ ಆಡಳಿತ ಮಂಡಳಿ ಗೇಟ್ ಗೆ ಬೀಗ ಹಾಕಿದ್ದು, ಕೇಸರಿ ಪೇಟ ತೊಟ್ಟ ವಿದ್ಯಾರ್ಥಿಗಳು ಹಾಗೂ ಬುರ್ಖಾ ತೊಟ್ಟ ವಿದ್ಯಾರ್ಥಿನಿಯರು ಆವರಣದ ಹೊರಗಿಂದ ಬೀಗ ತೆಗೆಯಲು ಕಾಯುತ್ತಿದ್ದಾರೆ.

ಇನ್ನು ರೆಸ್ಟ್‌‌ರೂಮ್ ನಲ್ಲಿ ಬುರ್ಖಾ ತೆಗೆದಿರಲು ಕಾಲೇಜು ಸೂಚನೆ ನೀಡಿದ್ದು, ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್‌ಗೆ ಅವಕಾಶ ನೀಡಿದ್ರೆ ನಮಗೂ ಕೇಸರಿ ಶಾಲು ಧರಿಸಲು ಅವಕಾಶ ನೀಡಿ ಅಂತ ಒತ್ತಾಯಿಸಿದ್ದು, ಹಿಜಾಬ್ ನಮ್ಮ ಹಕ್ಕು ಎಂದು ಘೋಷಣೆ ಕೂಗುತ್ತಾ ಮುಸ್ಲಿಂ ವಿದ್ಯಾರ್ಥಿನಿಯರ ಪ್ರತಿಭಟನೆ ನಡೆಸುತ್ತಿದ್ದು, ಕಾಲೇಜು ಆವರಣ ಒಳಗಡೆ ಗೊಂದಲದ ವಾತಾವರಣ ನಿರ್ಮಾಣವಾಗಿದೆ.

ರಾಜ್ಯಾದ್ಯಂತ ಹಿಜಬ್ ಧರಿಸುವ ಹಕ್ಕಿಗಾಗಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ 8 ವಿದ್ಯಾರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ್ದು, ಇಂದು ಪ್ರಕರಣದ ವಿಚಾರಣೆ ಆರಂಭವಾಗಲಿದೆ.

Vishwa News 24

Recent Posts

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

14 minutes ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

25 minutes ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

42 minutes ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

55 minutes ago

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? – vishwanews24

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…

2 hours ago

ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ – vishwanews24

ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ ಬೆಂಗಳೂರು: ಬೆಂಗಳೂರಿನಿಂದ 100 ಕಿ.ಮೀ. ಸುತ್ತಮುತ್ತ ಇರುವ ನಗರಗಳಿಗೆ…

2 hours ago