ಶಿವಮೊಗ್ಗ:ಕುಂದಾಪುರದ ಸರ್ಕಾರಿ ಕಾಲೇಜಿನಿಂದ ಆರಂಭಗೊಂಡ ವಿವಾದ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ, ಈಗ ರಾಜ್ಯಾಧ್ಯಂತ ಹಬ್ಬಿದೆ.
ಈ ಹಿನ್ನಲೆಯಲ್ಲಿ ಶಾಲಾ-ಕಾಲೇಜುಗಳಲ್ಲಿ ಗಲಾಟೆ ಆಗದಂತೆ ಎಚ್ಚರಿಕೆ ವಹಿಸೋ ಸಂಬಂಧ, ಎಲ್ಲಾ ಶಾಲಾ-ಕಾಲೇಜುಗಳಿಗೆ ರಕ್ಷಣೆಗಾಗಿ ಪೊಲೀಸರನ್ನು ನೇಮಿಸಲಿದೆ.
ಈ ಬಗ್ಗೆ ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಗೃಹ ಸಚಿವ ಅರಗ ಜ್ಞಾನೇಂದ್ರ ಹಿಜಾಬ್, ಕೇಸರಿ ಶಾಲು ಧರಿಸಿ ವಿದ್ಯಾರ್ಥಿಗಳು ಕಾಲೇಜಿಗೆ ಬರುವಂತಿಲ್ಲ. ರಾಜ್ಯ ಸರ್ಕಾರ ಸಮವಸ್ತ್ರ ಕಡ್ಡಾಯಗೊಳಿಸಿ ಆದೇಶಿಸಿದೆ. ಇದು ಸಮಾನತೆಯ ಸಂಕೇತವಾಗಿದ್ದು, ಸಮವಸ್ತ್ರ ಧರಿಸಿಯೇ ಬರಬೇಕು ಎಂದು ಹೇಳಿದರು.
ಕೊರೋನಾದಿಂದಾಗಿ ಈಗಾಗಲೇ ಮಕ್ಕಳ ವಿದ್ಯಾಬ್ಯಾಸ ಹಾಳಾಗಿದೆ. ಈಗ ಹಿಜಾಬ್, ಕೇಸರಿ ಶಾಲು ವಿವಾದದಿಂದ ಶಾಲಾ-ಕಾಲೇಜು ನಡೆಯುತ್ತಿಲ್ಲ. ಹಿಜಾಬ್ ವಿವಾದದ ಹಿಂದೆ ಕಾರಣದ ಕೈಗಳ ಕೆಲಸವಿದೆ. ಈ ಬಗ್ಗೆ ಪೊಲೀಸರಿಗೆ ತನಿಖೆ ನಡೆಸಲು ನಿರ್ದೇಶಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರನ್ನು ರಕ್ಷಣೆಗಾಗಿ ನಿಯೋಜಿಸಲಲಾಗುತ್ತದೆ ಎಂದು ತಿಳಿಸಿದರು.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…