ಶಿವಮೊಗ್ಗ:ಕುಂದಾಪುರದ ಸರ್ಕಾರಿ ಕಾಲೇಜಿನಿಂದ ಆರಂಭಗೊಂಡ ವಿವಾದ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ, ಈಗ ರಾಜ್ಯಾಧ್ಯಂತ ಹಬ್ಬಿದೆ.
ಈ ಹಿನ್ನಲೆಯಲ್ಲಿ ಶಾಲಾ-ಕಾಲೇಜುಗಳಲ್ಲಿ ಗಲಾಟೆ ಆಗದಂತೆ ಎಚ್ಚರಿಕೆ ವಹಿಸೋ ಸಂಬಂಧ, ಎಲ್ಲಾ ಶಾಲಾ-ಕಾಲೇಜುಗಳಿಗೆ ರಕ್ಷಣೆಗಾಗಿ ಪೊಲೀಸರನ್ನು ನೇಮಿಸಲಿದೆ.
ಈ ಬಗ್ಗೆ ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಗೃಹ ಸಚಿವ ಅರಗ ಜ್ಞಾನೇಂದ್ರ ಹಿಜಾಬ್, ಕೇಸರಿ ಶಾಲು ಧರಿಸಿ ವಿದ್ಯಾರ್ಥಿಗಳು ಕಾಲೇಜಿಗೆ ಬರುವಂತಿಲ್ಲ. ರಾಜ್ಯ ಸರ್ಕಾರ ಸಮವಸ್ತ್ರ ಕಡ್ಡಾಯಗೊಳಿಸಿ ಆದೇಶಿಸಿದೆ. ಇದು ಸಮಾನತೆಯ ಸಂಕೇತವಾಗಿದ್ದು, ಸಮವಸ್ತ್ರ ಧರಿಸಿಯೇ ಬರಬೇಕು ಎಂದು ಹೇಳಿದರು.
ಕೊರೋನಾದಿಂದಾಗಿ ಈಗಾಗಲೇ ಮಕ್ಕಳ ವಿದ್ಯಾಬ್ಯಾಸ ಹಾಳಾಗಿದೆ. ಈಗ ಹಿಜಾಬ್, ಕೇಸರಿ ಶಾಲು ವಿವಾದದಿಂದ ಶಾಲಾ-ಕಾಲೇಜು ನಡೆಯುತ್ತಿಲ್ಲ. ಹಿಜಾಬ್ ವಿವಾದದ ಹಿಂದೆ ಕಾರಣದ ಕೈಗಳ ಕೆಲಸವಿದೆ. ಈ ಬಗ್ಗೆ ಪೊಲೀಸರಿಗೆ ತನಿಖೆ ನಡೆಸಲು ನಿರ್ದೇಶಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರನ್ನು ರಕ್ಷಣೆಗಾಗಿ ನಿಯೋಜಿಸಲಲಾಗುತ್ತದೆ ಎಂದು ತಿಳಿಸಿದರು.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…