ವಿಜಯಪುರ: ಹಿಜಾಬ್ ವಿಷಯದಲ್ಲಿ ಸುಪ್ರೀಂ ಕೋರ್ಟ್ ದ್ವಿಸದಸ್ಯ ಪೀಠ ನೀಡಿರುವ ಎರಡು ರೀತಿಯ ನಿರ್ಧಾರದಿಂದ ಪ್ರಕರಣ ವಿಸ್ತ್ರತ ಪೀಠಕ್ಕೆ ಹೋಗಿದೆ. ಸುಪ್ರೀಂ ಕೋರ್ಟ್ ವಿಸ್ತೃತ ಪೀಠ ನೀಡುವ ತೀರ್ಪಿಗೆ ಎಲ್ಲರೂ ಬದ್ಧರಾಗಬೇಕು ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಗುರುವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಇಸ್ಲಾಂ ಧರ್ಮದಲ್ಲಿ ಹಿಜಾಬ್ ಕಡ್ಡಾಯವೇ ಅಲ್ಲ. ಕುರಾನ್ ಧರ್ಮ ಗ್ರಂಥದಲ್ಲೂ ಉಲ್ಲೇಖವಿಲ್ಲದ ಹಿಜಾಬ್ ಹೆಸರಿನಲ್ಲಿ ಕೆಲವು ದೇಶ ದ್ರೋಹಿಗಳು ಆರು ಹೆಣ್ಣುಮಕ್ಕಳ ಮೂಲಕ ಬೆಂಕಿ ಹಚ್ಚುವ ಕೆಲಸ ಮಾಡಿದರು. ಮುಸ್ಲಿಂ ಮುಖಂಡರು ಆಗಲೇ ಬುದ್ದಿ ಹೇಳಿದ್ದರೆ ಪರಿಸ್ಥಿತಿ ಇಲ್ಲಿಗೆ ಬರುತ್ತಿರಲಿಲ್ಲ ಎಂದರು.
ಹೈಕೋರ್ಟ್ ತೀರ್ಪು ನೀಡಿದಾಗಲೇ ಮುಸ್ಲಿಂ ಮುಖಂಡರು ಆ ಆರು ಹೆಣ್ಣು ಮಕ್ಕಳಿಗೆ ಬೈದು ಬುದ್ದಿ ಹೇಳಿದ್ದರೆ ಇಂದು ಈ ಪರಿಸ್ಥಿತಿ ಬರುತ್ತಿರಲಿಲ್ಲ. ಸದ್ಯ ಸುಪ್ರೀಂ ಕೋರ್ಟ್ ದ್ವಿಸದಸ್ಯ ಪೀಠ ವಿಭಿನ್ನ ಅಭಿಪ್ರಾಯ ನೀಡಿದ್ದು ಅದನ್ನು ಪ್ರಶ್ನೆ ಮಾಡುವ ಹಕ್ಕು ಯಾರಿಗೂ ಇಲ್ಲ. ಸಮಾನತೆಗೆ, ಸಂವಿಧಾನಕ್ಕೆ ಆದ್ಯತೆ ಕೊಡಬೇಕು. ಐದು ಅಥವಾ ಏಳು ಜನರ ನ್ಯಾಯಾಧೀಶರ ವಿಸ್ತೃತ ಪೀಠ ನೀಡುವ ತೀರ್ಪು ಏನಾಗಲಿದೆ ಎಂಬುದು ನೋಡಬೇಕು, ವಿಸ್ತೃತ ಪೀಠ ನೀಡುವ ತೀರ್ಪಿಗೆ ಎಲ್ಲರೂ ಬದ್ಧವಾಗಿರಬೇಕು ಎಂದರು.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…