Featured

ಹಿಜಾಬ್ ತೀರ್ಪು : ಸುಪ್ರೀಂ ಕೋರ್ಟಿನಿಂದ ಆರಂಭಿಕ ಜಯ ಸಿಕ್ಕಿದ್ದು, ಮುಂದೆ ಉತ್ತಮ ಆದೇಶ ಬರುವ ನಿರೀಕ್ಷೆ: ಯಶ್ಪಾಲ್ ಸುವರ್ಣ – Vishwanews24

ಹಿಜಾಬ್ ತೀರ್ಪು : ಸುಪ್ರೀಂ ಕೋರ್ಟಿನಿಂದ ಆರಂಭಿಕ ಜಯ ಸಿಕ್ಕಿದೆ : ಯಶ್ಪಾಲ್ ಸುವರ್ಣ

ವಿಜಯಪುರ: ಹಿಜಾಬ್ ವಿಚಾರದಲ್ಲಿ ಸುಪ್ರೀಂ ನ್ಯಾಯಮೂರ್ತಿಗಳು ಹೈಕೋರ್ಟ್ ತೀರ್ಪು ಎತ್ತಿ ಹಿಡಿದ್ದಿದ್ದು, ಅರ್ಜಿದಾರರ ಅರ್ಜಿ ತಿರಸ್ಕಾರ ಮಾಡಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಒಬಿಸಿ ಮೋರ್ಚಾದ ಕಾರ್ಯದರ್ಶಿ ಯಶ್ಪಾಲ್ ಸುವರ್ಣ ಅಭಿಪ್ರಾಯಪಟ್ಟಿದ್ದಾರೆ.

ಈ ಕುರಿತು ವಿಜಯಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ ಸುಪ್ರೀಂ ನ್ಯಾಯಮೂರ್ತಿಗಳು ತ್ರೀಸದಸ್ಯ ಪೀಠದಲ್ಲಿ ಚರ್ಚೆ ಮಾಡುವ ಮೂಲಕ ತೀರ್ಪು ಕೊಡ್ತೇವೆ ಎಂದಿದ್ದಾರೆ. ಸುಪ್ರೀಂ ಕೋರ್ಟ್ ನಿಂದ ಆರಂಭಿಕ ಜಯ ಸಿಕ್ಕಿದ್ದು, ಮುಂದೆಯು ಉತ್ತಮ ಆದೇಶ ಬರುವ ನಿರೀಕ್ಷೆ ಇದೆ

ದೇಶದ ಜನ ಬಹಳ ಕಾತರಾಗಿದ್ದರು ಆದರೆ ನಮಗೆ ಯಾವುದೇ ಆತಂಕ ಇರಲಿಲ್ಲ. ಶಿಕ್ಷಣ ಬಡ ವಿದ್ಯಾರ್ಥಿಗಳ ಶಿಕ್ಷಣ ಜೊತೆಗೆ ಚೆಲ್ಲಾಟ ಆಡೋಕೆ ಯಾರು ಅವಕಾಶ ಕೊಡುವುದಿಲ್ಲ. ಶಿಕ್ಷಣದ ಮಹತ್ವ ಎತ್ತಿಹಿಡಿದುಕೊಂಡು ಸುಪ್ರೀಂಕೋರ್ಟ್ ಒಳ್ಳೇ ಆದೇಶ ಕೊಡುತ್ತದೆ ಎಂದರು.

ಮಲ್ಪೆ : ಬಂದರುಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಹೂಳು ತುಂಬಿಕೊಂಡು ಬೋಟಿನ ಲಂಗರು ಮತ್ತು ಸಂಚಾರಕ್ಕೆ ತೊಂದರೆ ..

ಹಿಜಾಬ್ ವಿವಾದ ಆರಂಭವಾಗಿದ್ದು ಉಡುಪಿಯಲ್ಲಿ ಆದರೆ ಇದು ನಂತರ ದಿನಗಳಲ್ಲಿ ರಾಜ್ಯಾದ್ಯಂತ ವ್ಯಾಪಿಸಿತು. ಹಿಜಾಬ್ ವಿದ್ಯಾರ್ಥಿನಿಯರು ಬಡವಿದ್ಯಾರ್ಥಿಗಳ ದಿಕ್ಕು ತಪ್ಪಿಸುವುದರ ಮೂಲಕ ಶಿಕ್ಷಣದ ವ್ಯವಸ್ಥೆ ಹಾಳು ಮಾಡಿದ್ದರು. 2004 ರಿಂದಲೂ ಉಡುಪಿಯ ಮಹಿಳಾಕಾಲೇಜಿನಲ್ಲಿ ಶಿಸ್ತು ಇದ್ದು, ಇದಕ್ಕಾಗಿ ಡ್ರೆಸ್ ಕೋಡ್ ಮಾಡಿದ್ದೇವು. ಅಲ್ಲಿಂದ ಕಳೆದ ಡಿಸೆಂಬರ್‌ ವರೆಗೆ ಯಾವುದೇ ಸಮಸ್ಯೆ ಇರಲಿಲ್ಲ. ಆದರೆ ಬಳಿಕ ಹಿಬಾಜ್ ವಿದ್ಯಾರ್ಥಿನಿಯರ ನಾಟಕದಿಂದ ಇಷ್ಟೆಲ್ಲ ಸಮಸ್ಯೆ ಆಗಿದ್ದು, ಮಕ್ಕಳ ಜೀವನದಲ್ಲಿ ಅವರು ಚೆಲ್ಲಾಟ ಆಡಿದ್ದಾರೆ ಎಂದರು.

ಹಿಜಾಬ್ ಹಿಂದೆ ಇದ್ದ ಸಂಘಟನೆಗಳು ದೇಶದ್ರೋಹಿ, ಮತಾಂಧ ಶಕ್ತಿಗಳು ಮತ್ತು ವಿದ್ಯಾರ್ಥಿನಿಯರಿಗೆ ಟೆರರ್ ಲಿಂಕ್ ಇರುವ ಬಗ್ಗೆ ನಾನು ಮಾತನಾಡಿದ್ದೆ. ಇಂದು ಇವರಿಗೆ ಸಪೋರ್ಟ್ ನೀಡಿದವರೆಲ್ಲ ಈಗ ಜೈಲಲ್ಲಿದ್ದಾರೆ. ಅವರೆಲ್ಲರೂ ದೇಶದ್ರೋಹಿ ಚಟುವಟಿಕೆ,ಮರ್ಡರ್ ಕೇಸಗಳಲ್ಲಿ ಭಾಗಿಯಾಗಿರೋದು ಸಾಬೀತಾಗಿದೆ. ನರೇಂದ್ರ ಮೋದಿ,ಅಮೀತ್ ಶಾ ನೇತೃತ್ವದ ಕೇಂದ್ರ ಸರ್ಕಾರ ಪಿಎಫ್ಐ ಎಸ್ಡಿಪಿಐ ಸೇರಿ ಐದು ಸಂಘಟನೆಗಳು ಬ್ಯಾನ್ ಆಗಿವೆ. ಇಂತವರಿಂದ ಪ್ರೇರಣೆ ಪಡೆದವರ ಅರ್ಜಿಯನ್ನು ಖಂಡಿತವಾಗಿಯೂ ಸುಪ್ರೀಂಕೋರ್ಟ್ ಎತ್ತಿ ಹಿಡಿಯಲ್ಲ ಅನ್ನೋ ಭರವಸೆ ಇದೆ ಎಂದರು.

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

14 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

14 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

14 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

17 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

18 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

18 hours ago