Featured

ಹಿಜಾಬ್ ಧರಿಸಿ ಶಾಲೆಗೆ ಬರುವಂತಿಲ್ಲ. ಇದನ್ನು ಕಾಂಗ್ರೆಸ್, ಪಿಎಫ್ಐ ಅರ್ಥ ಮಾಡಿಕೊಳ್ಳಬೇಕು : ಹಿಜಾಬ್ ತೀರ್ಪಿನ ಬಗ್ಗೆ ಸುನೀಲ್ ಕುಮಾರ್ ಪ್ರತಿಕ್ರಿಯೆ – Vishwanews24

ಹಿಜಾಬ್ ಧರಿಸಿ ಶಾಲೆಗೆ ಬರುವಂತಿಲ್ಲ. ಇದನ್ನು ಕಾಂಗ್ರೆಸ್, ಪಿಎಫ್ಐ ಅರ್ಥ ಮಾಡಿಕೊಳ್ಳಬೇಕು : ಹಿಜಾಬ್ ತೀರ್ಪಿನ ಬಗ್ಗೆ ಸುನೀಲ್ ಕುಮಾರ್ ಪ್ರತಿಕ್ರಿಯೆ

ಬೆಂಗಳೂರು: ಹಿಜಾಬ್ ಧರಿಸಿ ಶಾಲೆಗೆ ಬರುವಂತಿಲ್ಲ. ಇದನ್ನು ಕಾಂಗ್ರೆಸ್, ಪಿಎಫ್ಐ ಅರ್ಥ ಮಾಡಿಕೊಳ್ಳಬೇಕು ಎಂದು ಸಚಿವ ಸುನೀಲ್ ಕುಮಾರ್ ಹೇಳಿದರು. ಬೆಂಗಳೂರಿನಲ್ಲಿ ಗುರುವಾರ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ಭಿನ್ನ ತೀರ್ಪಿನ ಬಗ್ಗೆ ಈ ರೀತಿಯಲ್ಲಿ ಪ್ರತಿಕ್ರಿಯೆ ನೀಡಿದರು.

ಫೆ.5 ರಂದು ರಾಜ್ಯ ಸರ್ಕಾರ ಹಿಜಾಬ್ ನಿಷೇಧ ಕುರಿತು ಸುತ್ತೊಲೆ ಹೊರಡಿಸಿದೆ. ಇದರಿಂದ ಹಿಂದೆ ಸರಿಯೋ ಪ್ರಶ್ನೆ ಇಲ್ಲ. ಆದರೆ ಇದೀಗ ಸುಪ್ರೀಂ ಕೋರ್ಟ್ ವಿಭಿನ್ನವಾಗಿ ತೀರ್ಪು ಬಂದಿದೆ. ಆದರೆ ಹೈಕೋರ್ಟ್ ತೀರ್ಪಿನಿಂದ ಹಿಂದೆ ಸರಿಯೋ ಪ್ರಶ್ನೆ ಇಲ್ಲ ಎಂದರು‌.

ಹಿಜಾಬ್ ಧರಿಸಿ ಶಾಲೆಗೆ ಬರುವಂತಿಲ್ಲ. ಕಾಂಗ್ರೆಸ್, ಪಿಎಫ್ಐ ಅರ್ಥ ಮಾಡಿಕೊಳ್ಳಬೇಕು, ಸಮಾಜಕ್ಕೆ ವ್ಯತಿರಿಕ್ತವಾಗಿ ನಡೆದುಕೊಳ್ಳಲು ಸಾಧ್ಯವಿಲ್ಲ. ಕೋರ್ಟ್ ಹಿಜಾಬ್ ಧರಿಸಿ ಬರಬಾರದು ಅಂದಾಗ ಸುಪ್ರೀಂ ಕೋರ್ಟ್ ಹೋಗ್ತಾರೆ ಅಂದ್ರೆ. ಇದರಿಂದ ಅರ್ಥ ಆಗುತ್ತೆ ಮತೀಯ ಶಕ್ತಿ ಎಷ್ಟಿದೆ ಅಂತ ಎಂದು ಹೇಳಿದರು.

ಹಿಜಾಬ್​ಗೆ ಸಂಬಂಧಿಸಿದ ಸುಪ್ರೀಂಕೋರ್ಟ್ ತೀರ್ಪು ಸ್ವಾಗತ : ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್

ಮುಸ್ಲಿಂ ರಾಷ್ಟ್ರ ಇರಾನ್, ಇರಾಕ್‌ನಲ್ಲಿ ಹಿಜಾಬ್ ಬೇಡ ಅಂತ ಇದ್ದಾರೆ. ಶಾಲೆಯಲ್ಲಿ ಹಿಜಾಬ್ ಬೇಕು ಅಂತ ಇಲ್ಲಿ ಪ್ರತಿಭಟನೆ ಮಾಡ್ತಾರೆ.
ಪಿಎಫ್ಐ ಇನ್ನಾದ್ರೂ ಬದಲಾಗಬೇಕು. ಈಗಾಗಲೇ ಪಿಎಫ್ಐ ನಿಷೇಧ ಮಾಡಲಾಗಿದೆ. ಕಾಂಗ್ರೆಸ್ ಇದನ್ನು ಪುಷ್ಠೀಕರಿಸುವ ಕೆಲಸ ಮಾಡಿತು. ಸಿದ್ದರಾಮಯ್ಯ ಸ್ವಾಮೀಜಿ ಕೂಡ ಕಾವಿ ಹಾಕ್ತಾರೆ ಅಂತ ಹೇಳಿದ್ರು. ಕಾಂಗ್ರೆಸ್ ಕೂಡ ಹಿಜಾಬ್ ಚೋಡೋ ಅಂತ ಭಾರತ್ ಜೋಡೋದಲ್ಲಿ ಜೋಡಿಸಿಕೊಳ್ಳಲಿ ಎಂದು ಸವಾಲು ಹಾಕಿದರು.

ಹಿಜಾಬ್ ನಿರ್ಬಂಧದಿಂದ ಒಳ್ಳೆಯ ವಾತಾವರಣ ಸೃಷ್ಟಿಯಾಗಲಿದೆ. ಎಲ್ಲಾ ವಿದ್ಯಾರ್ಥಿಗಳು ಒಂದೇ ರೀತಿ ಕಾಣಬೇಕು ಅಂತ ಶಾಲಾ ಸಮವಸ್ತ್ರ ತರಲಾಗಿದೆ. ಯಾವುದೇ ಕಾರಣಕ್ಕೂ ಫೆಬ್ರವರಿ 5ರಂದು ಹೊರಡಿಸಿದ ಆದೇಶ ವಾಪಸ್ ಪಡೆಯೋ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.

Vishwa News 24

Recent Posts

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

2 minutes ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

9 minutes ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago