ನವದೆಹಲಿ: ಹಿಜಾಬ್ ವಿಷಯವನ್ನು ರಂಜಿಸಬೇಡಿ, ಸಂವೇದನಾಶೀಲರಾಗಬೇಡಿ. ತುರ್ತು ವಿಚಾರಣೆ ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ತಿಳಿಸಿದೆ. ಹಿಜಾಬ್ಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪನ್ನು ಪ್ರಶ್ನಿಸಿ ವಕೀಲ ದೇವದತ್ ಕಾಮತ್ ಅವರು ಮತ್ತೊಮ್ಮೆ ತುರ್ತು ವಿಚಾರಣೆಗಾಗಿ ಸಲ್ಲಿಸಿದ್ದ ಅರ್ಜಿಯನ್ನು ಕೈಗೆತ್ತಿಕೊಂಡ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಅವರ ಪೀಠ ಈ ವಿಷಯವನ್ನು ರಂಜಿಸಬೇಡಿ.
ಪರೀಕ್ಷೆ ಹಾಗೂ ಹಿಜಾಬ್ಗೂ ಯಾವುದೇ ಸಂಬಂಧವಿಲ್ಲ. ಪ್ರಸ್ತುತ ಮುಂದಿನ ವಿಚಾರಣೆ ದಿನಾಂಕವನ್ನು ತಿಳಿಸುತ್ತೇವೆ. ಆತುರ ಬೇಡ ಎಂದು ಸೂಚಿಸಿದೆ. ಮುಂದಿನ ಮಾ.28ರಿಂದ ಪರೀಕ್ಷೆಗಳು ಆರಂಭಗೊಳ್ಳಲಿವೆ.
ಹಿಜಾಬ್ ವಿಷಯಕ್ಕೆ ಸಂಬಂಧಿಸಿದಂತೆ ತುರ್ತು ವಿಚಾರಣೆ ನಡೆಸಿ ಮಧ್ಯಂತರ ತೀರ್ಪು ನೀಡಬೇಕು ಇಲ್ಲದಿದ್ದರೆ ವಿದ್ಯಾರ್ಥಿಗಳು ಪರೀಕ್ಷೆಯಿಂದ ವಂಚಿತರಾಗುತ್ತಾರೆ ಎಂದು ಅರ್ಜಿದಾರರ ಪರ ವಕೀಲ ದೇವದಾಸ್ ಕಾಮತ್ ಅವರು ಮನವಿ ಮಾಡಿದ್ದರು.
ನ್ಯಾಯಾಲಯವು ಯಾವುದೇ ನಿರ್ದಿಷ್ಟ ಸಮಯವನ್ನು ನೀಡಲು ಸದ್ಯ ಸಾಧ್ಯವಿಲ್ಲ. ತುರ್ತು ವಿಚಾರಣೆಯೂ ಅಗತ್ಯವಿಲ್ಲ. ಮಕ್ಕಳ ಪರೀಕ್ಷೆ ವಿಷಯವನ್ನು ಇದರಲ್ಲಿ ಸೇರಿಸಬೇಡಿ. ಸೂಕ್ತ ಸಮಯದಲ್ಲಿ ವಿಷಯದ ವಿಚಾರಣೆ ನಡೆಯಲಿದೆ. ಸಂಯಮ ಇರಲಿ, ಒತ್ತಡ ತರಬೇಡಿ ಎಂದು ನ್ಯಾಯಮೂರ್ತಿಗಳು ತಿಳಿಸಿದ್ದಾರೆ. ಈ ಹಿಂದೆ ಅರ್ಜಿದಾರರು ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂಕೋರ್ಟ್ ಹೋಳಿ ಹಬ್ಬದ ನಂತರ ಇದರ ಬಗ್ಗೆ ಪರಿಶೀಲಿಸುವುದಾಗಿ ತಿಳಿಸಿತ್ತು.
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…