ನವದೆಹಲಿ: ಹಿಜಾಬ್ ವಿಷಯವನ್ನು ರಂಜಿಸಬೇಡಿ, ಸಂವೇದನಾಶೀಲರಾಗಬೇಡಿ. ತುರ್ತು ವಿಚಾರಣೆ ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ತಿಳಿಸಿದೆ. ಹಿಜಾಬ್ಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪನ್ನು ಪ್ರಶ್ನಿಸಿ ವಕೀಲ ದೇವದತ್ ಕಾಮತ್ ಅವರು ಮತ್ತೊಮ್ಮೆ ತುರ್ತು ವಿಚಾರಣೆಗಾಗಿ ಸಲ್ಲಿಸಿದ್ದ ಅರ್ಜಿಯನ್ನು ಕೈಗೆತ್ತಿಕೊಂಡ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಅವರ ಪೀಠ ಈ ವಿಷಯವನ್ನು ರಂಜಿಸಬೇಡಿ.
ಪರೀಕ್ಷೆ ಹಾಗೂ ಹಿಜಾಬ್ಗೂ ಯಾವುದೇ ಸಂಬಂಧವಿಲ್ಲ. ಪ್ರಸ್ತುತ ಮುಂದಿನ ವಿಚಾರಣೆ ದಿನಾಂಕವನ್ನು ತಿಳಿಸುತ್ತೇವೆ. ಆತುರ ಬೇಡ ಎಂದು ಸೂಚಿಸಿದೆ. ಮುಂದಿನ ಮಾ.28ರಿಂದ ಪರೀಕ್ಷೆಗಳು ಆರಂಭಗೊಳ್ಳಲಿವೆ.
ಹಿಜಾಬ್ ವಿಷಯಕ್ಕೆ ಸಂಬಂಧಿಸಿದಂತೆ ತುರ್ತು ವಿಚಾರಣೆ ನಡೆಸಿ ಮಧ್ಯಂತರ ತೀರ್ಪು ನೀಡಬೇಕು ಇಲ್ಲದಿದ್ದರೆ ವಿದ್ಯಾರ್ಥಿಗಳು ಪರೀಕ್ಷೆಯಿಂದ ವಂಚಿತರಾಗುತ್ತಾರೆ ಎಂದು ಅರ್ಜಿದಾರರ ಪರ ವಕೀಲ ದೇವದಾಸ್ ಕಾಮತ್ ಅವರು ಮನವಿ ಮಾಡಿದ್ದರು.
ನ್ಯಾಯಾಲಯವು ಯಾವುದೇ ನಿರ್ದಿಷ್ಟ ಸಮಯವನ್ನು ನೀಡಲು ಸದ್ಯ ಸಾಧ್ಯವಿಲ್ಲ. ತುರ್ತು ವಿಚಾರಣೆಯೂ ಅಗತ್ಯವಿಲ್ಲ. ಮಕ್ಕಳ ಪರೀಕ್ಷೆ ವಿಷಯವನ್ನು ಇದರಲ್ಲಿ ಸೇರಿಸಬೇಡಿ. ಸೂಕ್ತ ಸಮಯದಲ್ಲಿ ವಿಷಯದ ವಿಚಾರಣೆ ನಡೆಯಲಿದೆ. ಸಂಯಮ ಇರಲಿ, ಒತ್ತಡ ತರಬೇಡಿ ಎಂದು ನ್ಯಾಯಮೂರ್ತಿಗಳು ತಿಳಿಸಿದ್ದಾರೆ. ಈ ಹಿಂದೆ ಅರ್ಜಿದಾರರು ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂಕೋರ್ಟ್ ಹೋಳಿ ಹಬ್ಬದ ನಂತರ ಇದರ ಬಗ್ಗೆ ಪರಿಶೀಲಿಸುವುದಾಗಿ ತಿಳಿಸಿತ್ತು.
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…