Featured

ಹಿಜಾಬ್‌ ಪ್ರಕರಣ : ವಿದ್ಯಾರ್ಥಿನಿಯರ ಶೈಕ್ಷಣಿಕ ಭವಿಷ್ಯ ಹಾಳಾಗದಂತೆ ಎಚ್ಚರಿಕೆ ವಹಿಸಬೇಕು : ಯು.ಟಿ ಖಾದರ್‌

ಹಿಜಾಬ್‌ಗೆ ವಿರುದ್ಧವಾಗಿ ಶಾಲು ಹಾಕಿಕೊಂಡು ಹೋಗುವುದು ಸರಿಯಲ್ಲ

ಹಿಜಾಬ್ ಧರಿಸಲು ಅವಕಾಶವಿದ್ದ ಕಾಲೇಜಿಗೆ ನನ್ನ ಮಗಳನ್ನು ಸೇರಿಸಿದ್ದೇನೆ..

ವಿದ್ಯಾರ್ಥಿನಿಯರ ಶೈಕ್ಷಣಿಕ ಭವಿಷ್ಯ ಹಾಳಾಗದಂತೆ ಎಚ್ಚರಿಕೆ ವಹಿಸಬೇಕು..

ಮಂಗಳೂರು : ಉಡುಪಿ ಮಹಿಳಾ ಸರಕಾರಿ ಕಾಲೇಜಿನಲ್ಲಿ ಹಿಜಾಬ್ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ವಿಧಾನಸಭೆ ವಿಪಕ್ಷ ಉಪನಾಯಕ ಯು.ಟಿ. ಖಾದರ್ ಪ್ರತಿಕ್ರಿಯೆ ನೀಡಿದ್ದಾರೆ. ಕಾಲೇಜಿನ ಹಿಜಾಬ್ ವಿಚಾರಕ್ಕೆ ಯಾರೂ ಕೂಡ ಮೂಗು ತುರಿಸಬಾರದು ಎಂದಿದ್ದಾರೆ.

ಕಾಲೇಜು ಆಡಳಿತ ಮಂಡಳಿ, ಹೆತ್ತವರು, ಸ್ಥಳೀಯರೇ ಇದನ್ನು ಬಗೆ ಹರಿಸಿಕೊಳ್ಳಬೇಕು. ಬಗೆ ಹರಿಯದಿದ್ದರೆ ಕೋರ್ಟ್‌ಗೆ ಹೋಗಲಿ, ಕೋರ್ಟ್ ತೀರ್ಮಾನಿಸುತ್ತದೆ. ಹಿಜಾಬ್‌ಗೆ ವಿರುದ್ಧವಾಗಿ ಶಾಲು ಹಾಕಿಕೊಂಡು ಹೋಗುವುದು ಸರಿಯಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಯಾವುದೂ ಕೂಡಾ ಮಕ್ಕಳ ಭವಿಷ್ಯಕ್ಕೆ ತೊಂದರೆಯಾಗಬಾರದು. ಒಂದು ಕಡೆ ಧಾರ್ಮಿಕ ಸ್ವಾತಂತ್ರ್ಯ, ಇನ್ನೊಂದು ಕಡೆ ಸಮವಸ್ತ್ರದ ಚರ್ಚೆ ನಡೆಯುತ್ತಿದೆ. ನನ್ನ ಮಗಳಿಗೂ ಕೂಡಾ ಹಿಜಾಬ್ ಹಾಕದೆ ಇರಲು ಸಾಧ್ಯವಿರಲಿಲ್ಲ. ಹಾಗಾಗಿ ನಾನು ಹಿಜಾಬ್ ಧರಿಸಲು ಅವಕಾಶವಿದ್ದ ಕಾಲೇಜಿಗೆ ಆಕೆಯನ್ನು ಸೇರಿಸಿದೆ. ಹಿಜಾಬ್ ಧರಿಸಲು ಅವಕಾಶವಿದ್ದ ಕಾಲೇಜಿಗೆ ಮಗಳನ್ನು ಸೇರಿಸಿದ್ದೇನೆ.

ಅವಕಾಶ ಇಲ್ಲದ ಕಡೆ ಸೇರಿಸಿ ನಾನು ಹೋರಾಟಕ್ಕೆ ನಿಂತರೆ ಆಗುವುದೇ? ಹೆಣ್ಣು ಮಕ್ಕಳ ಶಿಕ್ಷಣವು ಬಹಳಷ್ಟು ಮುಖ್ಯವಾಗಿದೆ. ಆದರೆ ಈ ವಿಚಾರದಲ್ಲಿ ಮಕ್ಕಳ ಶಿಕ್ಷಣದ ಚಿಂತೆ ಯಾರಿಗೂ ಇಲ್ಲ. ಇಲ್ಲಿ ಕೇವಲ ರಾಜಕೀಯ ಮತ್ತು ಸ್ವಪ್ರತಿಷ್ಠೆಯಾಗಿಬಿಟ್ಟಿದೆ. ಮಕ್ಕಳ ಶಿಕ್ಷಣ ಮುಖ್ಯವಾದರೆ ಈ ವಿಚಾರ ಬಗೆಹರಿಯುತ್ತದೆ ಎಂದು ಮಂಗಳೂರಿನಲ್ಲಿ ವಿಧಾನಸಭೆ ವಿಪಕ್ಷ ಉಪನಾಯಕ ಯುಟಿ ಖಾದರ್ ಹೇಳಿಕೆ ನೀಡಿದ್ದಾರೆ.

Vishwa News 24

Recent Posts

ಕಾಪು ಪುರಸಭೆ ವ್ಯಾಪ್ತಿಯಲ್ಲಿ ನೂರಾರು ಬೀದಿನಾಯಿಗಳು-ಪ್ರತಿದಿನ ಹತ್ತಾರು ಪ್ರಕರಣಗಳು :vishwanews24

ಕಾಪು ಪುರಸಭೆ ವ್ಯಾಪ್ತಿಯಲ್ಲಿ ನೂರಾರು ಬೀದಿನಾಯಿಗಳು-ಪ್ರತಿದಿನ ಹತ್ತಾರು ಪ್ರಕರಣಗಳು ಕಾಪು: ಇಲ್ಲಿನ ಪುರಸಭಾ ವ್ಯಾಪ್ತಿಯಲ್ಲಿ ವಿಶೇಷವಾಗಿ ಕಾಪು ಪೇಟೆ ಹಾಗೂ…

1 hour ago

ಗ್ರಾಪಂ. ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ : ಸಚಿವ ಈಶ್ವರ್‌ ಖಂಡ್ರೆ ಸೂಚನೆ -vishwanews24

ಗ್ರಾಪಂ. ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ : ಸಚಿವ ಈಶ್ವರ್‌ ಖಂಡ್ರೆ ಸೂಚನೆ ಬೆಂಗಳೂರು: ಸೆ.14ರಂದು ರಾಜ್ಯಾದ್ಯಂತ ಆಚರಿಸಲಿರುವ…

23 hours ago

ಮೂಡುಬಿದಿರೆ : ನಾಳೆ (ಆ. 7 ಹಾಗೂ 8 ರಂದು ) ದೇಶದ ಬೃಹತ್ ಉಚಿತ ಉದ್ಯೋಗ ಮೇಳ ಆಳ್ವಾಸ್ ಪ್ರಗತಿ-2026ಕ್ಕೆ  ಚಾಲನೆ -vishwanews24

ಮೂಡುಬಿದಿರೆ : ನಾಳೆ (ಆ. 7 ಹಾಗೂ 8 ರಂದು ) ದೇಶದ ಬೃಹತ್ ಉಚಿತ ಉದ್ಯೋಗ ಮೇಳ ಆಳ್ವಾಸ್…

23 hours ago

ಬರ್ತ್‌ಡೇ, ಪ್ರಿವೆಡ್ಡಿಂಗ್‌ ಫೋಟೋಶೂಟ್‌ಗಳಿಗೆ ಬಾಡಿಗೆಗೆ ಸಿಗಲಿದೆ ಡಬಲ್‌ ಡೆಕ್ಕರ್‌ ಅಂಬಾರಿ ಬಸ್‌! -vishwanews24

ಬರ್ತ್‌ಡೇ, ಪ್ರಿವೆಡ್ಡಿಂಗ್‌ ಫೋಟೋಶೂಟ್‌ಗಳಿಗೆ ಬಾಡಿಗೆಗೆ ಸಿಗಲಿದೆ ಡಬಲ್‌ ಡೆಕ್ಕರ್‌ ಅಂಬಾರಿ ಬಸ್‌! ಬೆಂಗಳೂರು : ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ…

23 hours ago

ಮಲ್ಪೆ : ಕಡಲಿಗಿಳಿದ ಮೀನುಗಾರಿಕೆ ಬೋಟುಗಳು -vishwanews24

ಮಲ್ಪೆ : ಕಡಲಿಗಿಳಿದ ಮೀನುಗಾರಿಕೆ ಬೋಟುಗಳು ಮಲ್ಪೆ: ಸಮುದ್ರ ಸಹಜ ಸ್ಥಿತಿಗೆ ಬಂದ ಹಿನ್ನೆಲೆಯಲ್ಲಿ ಮಲ್ಪೆ ಬಂದರಿನಲ್ಲಿ ತಮಿಳುನಾಡಿನ ಮೀನುಗಾರ…

1 day ago

ಚಿಕ್ಕಮಗಳೂರು : ಭಾರೀ ಗಾಳಿಗೆ ಬೈಕ್ ಮೇಲೆ ಬಿದ್ದ ಮರ; ಸವಾರ ಕೂದಲೆಳೆ ಅಂತರದಲ್ಲಿ ಪಾರು -vishwanews24

ಚಿಕ್ಕಮಗಳೂರು : ಭಾರೀ ಗಾಳಿಗೆ ಬೈಕ್ ಮೇಲೆ ಬಿದ್ದ ಮರ; ಸವಾರ ಕೂದಲೆಳೆ ಅಂತರದಲ್ಲಿ ಪಾರು ಪ್ರವಾಸಿಗರು ಎಚ್ಚರಿಕೆಯಿಂದ ಸಂಚರಿಸುವಂತೆ…

1 day ago