ಬೆಂಗಳೂರು: ಹಿಜಾಬ್ ನಿಷೇಧಿಸಿರುವುದಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಮನವಿಗಳ ಕುರಿತು ನ್ಯಾಯಾಲಯ ತೀರ್ಪು ಪ್ರಕಟಿಸುವವರೆಗೆ ಶಾಲೆಯ ಬಳಿ ವಿದ್ಯಾರ್ಥಿನಿಯರು ಮತ್ತು ಬೋಧಕರು ಹಿಜಾಬ್ ಮತ್ತು ಬುರ್ಕಾ ತೆಗೆಯುವುದನ್ನು ವಿಡಿಯೊ ಮಾಡುವುದು, ಫೋಟೊ ತೆಗೆಯದಂತೆ 70 ಪ್ರತಿವಾದಿ ಮಾಧ್ಯಮಗಳನ್ನು ನಿರ್ಬಂಧಿಸಿ ಮಧ್ಯಂತರ ಆದೇಶ ಮಾಡುವಂತೆ ಕೋರಿ ಕರ್ನಾಟಕ ಹೈಕೋರ್ಟ್ಗೆ ಸೋಮವಾರ ಸಾರ್ವಜನಿಕ ಹಿತಾಸಕ್ತಿ ಮನವಿ ಸಲ್ಲಿಸಲಾಗಿದೆ.
ಅಬ್ದುಲ್ ಮನ್ಸೂರ್, ಮೊಹಮ್ಮದ್ ಖಲೀಲ್ ಹಾಗೂ ಆಸೀಫ್ ಅಹ್ಮದ್ ಅವರು ವಕೀಲ ಎಸ್ ಬಾಲಕೃಷ್ಣನ್ ಅವರ ಮೂಲಕ ಸಲ್ಲಿಸಿರುವ ಮನವಿಯು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಮತ್ತು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ನೇತೃತ್ವದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ಈ ಅರ್ಜಿಯನ್ನಿ ಹಿಜಾಬ್ಗೆ ಸಂಬಂಧಿಸಿದಂತೆ ಪ್ರಕರಣಗಳ ಜೊತೆ ಸೇರಿಸಲು ಪೀಠವು ಆದೇಶ ಮಾಡಿದೆ.
ಇದನ್ನೂ ಓದಿ :
ಶಾಲಾ-ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು ಮತ್ತು ಬೋಧಕರ ವಿಡಿಯೊ ಮತ್ತು ಫೋಟೊ ಸೆರೆ ಹಿಡಿಯುವುದು ಮತ್ತು ನಿರಂತರವಾಗಿ ಅದನ್ನು ಪ್ರಸಾರ ಮಾಡುವುದಕ್ಕೆ ನಿರ್ಬಂಧ ವಿಧಿಸಬೇಕು ಎಂದು ಕೋರಿರುವ ಈ ಮನವಿಯಲ್ಲಿ ರಾಜ್ಯ ಸರ್ಕಾರದ ಗೃಹ ಮತ್ತು ಶಿಕ್ಷಣ ಇಲಾಖೆಯ ಕಾರ್ಯದರ್ಶಿಗಳನ್ನು ಮೊದಲ ಮತ್ತು ಎರಡನೇ ಪ್ರತಿವಾದಿಗಳನ್ನಾಗಿಸಲಾಗಿದೆ.
ಇದನ್ನೂ ಓದಿ :
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…