Featured

ಹಿಜಾಬ್ ಮುಖ್ಯ ಅಲ್ಲ-ಶಿಕ್ಷಣ ಎಲ್ಲದನ್ನ ಮೀರಿದೆ: ಖ್ಯಾತ ಗಾಯಕಿ ಸುಹಾನಾ ಸೈಯದ್: vishwanews24

ಬೆಂಗಳೂರು: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಸಮವಸ್ತ್ರ ಸಂಘರ್ಷ ನಡೆಯುತ್ತಿದೆ. ಹಿಜಾಬ್(Hijab) ಧರಿಸುವವರ ವಿರುದ್ಧ ಕೇಸರಿ ಶಾಲ್(Kesari Shwal) ಧರಿಸಿ ಯುವಕ-ಯುವತಿಯರು ರಸ್ತೆಗಿಳಿದಿದ್ದಾರೆ. ಜ್ಞಾನ ದೇಗುಲದಲ್ಲಿ ಧರ್ಮ, ಜಾತಿಗಳ ನಡುವೆ ಸಂಘರ್ಷವಾಗುತ್ತಿದೆ. ಫೆಬ್ರವರಿ 08ರಂದು ರಾಜ್ಯದ 19 ಜಿಲ್ಲೆಗಳ 55 ಕಾಲೇಜುಗಳಲ್ಲಿ ಪ್ರತಿಭಟನೆ ನಡೆದಿದೆ. 5 ಜಿಲ್ಲೆಗಳ 7 ಕಾಲೇಜುಗಳಲ್ಲಿ ಘರ್ಷಣೆಯಾಗಿದೆ. ಸದ್ಯ ಹಿಜಾಬ್ ವಿವಾದದ ಬಗ್ಗೆ‌ ಗಾಯಕಿ ಸುಹಾನಾ ಸೈಯದ್(Suhana Syed) ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಈ ಹಿಂದೇ ಗಾಯಕಿ ಸುಹಾನಾ ಕೂಡ ಇದೇ ರೀತಿ ವಿವಾದಕ್ಕೆ ಗುರಿಯಾಗಿದ್ದರು. ಸಿಂಗಿಂಗ್ ರಿಯಾಲಿಟಿ ಶೋ ನಲ್ಲಿ ಹಿಂದೂ ದೇವರನಾಮ ಹಾಡಿದ್ದ ಸುಹಾನಾ ವಿವಾದಕ್ಕೆ ಒಳಗಾಗಿದ್ದರು.

ಯಕಿ ಸುಹಾನಾ ಸೈಯದ್, ಸಿಂಗಿಂಗ್ ರಿಯಾಲಿಟಿ ಶೋ ನಲ್ಲಿ ಹಿಜಾಬ್ ಧರಿಸಿ ಶ್ರೀಕಾರನೇ ಶ್ರೀನಿವಾಸನೇ ಎಂಬ ಗೀತೆ ಹಾಡಿದ್ದರು. ಇದೇ ಕಾರಣಕ್ಕೆ ಸುಹಾನಾ ವಿರುದ್ಧ ಮುಸ್ಲಿಂ ಮೂಲಭೂತವಾದಿಗಳು ತಿರುಗಿಬಿದ್ದಿದ್ದರು. ಸದ್ಯದ ಹಿಜಾಬ್ ವಿವಾದದ ಬಗ್ಗೆ ಸುಹಾನಾ ಪ್ರತಿಕ್ರಿಯಿಸಿದ್ದಾರೆ. ನಾನು ಮುಸ್ಲಿಂ ಕುಟುಂಬಕ್ಕೆ ಸೇರಿದವಳು. ಆದರೆ ನಾನು ಹಿಜಾಬ್ ಹಾಕುವುದಿಲ್ಲ. ಹಾಗಂತ ನಾನು ಹಿಜಾಬ್ ವಿರೋಧಿ ಖಂಡಿತ ಅಲ್ಲ. ನಾನು ಹಿಜಾಬ್ ಹಾಕುವುದಿಲ್ಲ ಎಂದು ವಿರೋಧಿಸಿದವರೂ ಇದ್ದಾರೆ. ಬಟ್ಟೆ ಹಾಕೋದು ಅವರವರ ಸ್ವಾತಂತ್ರ್ಯ. ಆದರೆ ಶಿಕ್ಷಣ ಎಲ್ಲದನ್ನೂ ಮೀರಿ ನಿಂತಿದೆ. ಹೆಣ್ಣು ಮಕ್ಕಳ ಶಿಕ್ಷಣ ಅತ್ಯಂತ ಮಹತ್ವದ್ದಾಗಿದೆ. ಧರ್ಮ, ಜಾತಿ, ಲಿಂಗ, ಬಟ್ಟೆ ಎಲ್ಲದನ್ನೂ ಮೀರಿರೋದು ಶಿಕ್ಷಣ. ಹಿಂದೆ ಹೆಣ್ಣು ಮಕ್ಕಳು ಮನೆಯಿಂದ ಹೊರ ಬಂದು ಓದಲು ಕಷ್ಟಪಡುತ್ತಿದ್ದರು. ಆದರೀಗ ಕಾಲ ಬದಲಾಗಿದೆ. ಪ್ರತಿ ಹೆಣ್ಣು ಮಗುವಿಗೆ ಶಿಕ್ಷಣ ಸಿಕ್ತಿದೆ. ಇದಕ್ಕಿಂತ ಖುಷಿ ವಿಚಾರ ಇನ್ನೊಂದಿಲ್ಲ. ಶಿಕ್ಷಣ ಪಡೆಯುವ ಪ್ರತಿ ಹೆಣ್ಣಿನ ಪರ ನನ್ನ ಬೆಂಬಲವಿದೆ. ಕೇವಲ ಬಟ್ಟೆ ವಿಚಾರಕ್ಕೆ ಶಿಕ್ಷಣ ವಂಚಿತರಾಗೋದು ತಪ್ಪು ಎಂದು ಸುಹಾನಾ ಸೈಯದ್ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

 

Vishwa News 24

Recent Posts

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು – vishwanews24

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…

3 hours ago

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌’ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ – vishwanews24

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…

3 hours ago

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ – vishwanews24

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…

3 hours ago

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ – vishwanews24

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…

4 hours ago

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ – vishwanews24

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…

4 hours ago

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಮೂವರ ಬಂಧನ – vishwanews24

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…

4 hours ago