Featured

ಹಿಜಾಬ್ ಮುಖ್ಯ ಅಲ್ಲ-ಶಿಕ್ಷಣ ಎಲ್ಲದನ್ನ ಮೀರಿದೆ: ಖ್ಯಾತ ಗಾಯಕಿ ಸುಹಾನಾ ಸೈಯದ್: vishwanews24

ಬೆಂಗಳೂರು: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಸಮವಸ್ತ್ರ ಸಂಘರ್ಷ ನಡೆಯುತ್ತಿದೆ. ಹಿಜಾಬ್(Hijab) ಧರಿಸುವವರ ವಿರುದ್ಧ ಕೇಸರಿ ಶಾಲ್(Kesari Shwal) ಧರಿಸಿ ಯುವಕ-ಯುವತಿಯರು ರಸ್ತೆಗಿಳಿದಿದ್ದಾರೆ. ಜ್ಞಾನ ದೇಗುಲದಲ್ಲಿ ಧರ್ಮ, ಜಾತಿಗಳ ನಡುವೆ ಸಂಘರ್ಷವಾಗುತ್ತಿದೆ. ಫೆಬ್ರವರಿ 08ರಂದು ರಾಜ್ಯದ 19 ಜಿಲ್ಲೆಗಳ 55 ಕಾಲೇಜುಗಳಲ್ಲಿ ಪ್ರತಿಭಟನೆ ನಡೆದಿದೆ. 5 ಜಿಲ್ಲೆಗಳ 7 ಕಾಲೇಜುಗಳಲ್ಲಿ ಘರ್ಷಣೆಯಾಗಿದೆ. ಸದ್ಯ ಹಿಜಾಬ್ ವಿವಾದದ ಬಗ್ಗೆ‌ ಗಾಯಕಿ ಸುಹಾನಾ ಸೈಯದ್(Suhana Syed) ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಈ ಹಿಂದೇ ಗಾಯಕಿ ಸುಹಾನಾ ಕೂಡ ಇದೇ ರೀತಿ ವಿವಾದಕ್ಕೆ ಗುರಿಯಾಗಿದ್ದರು. ಸಿಂಗಿಂಗ್ ರಿಯಾಲಿಟಿ ಶೋ ನಲ್ಲಿ ಹಿಂದೂ ದೇವರನಾಮ ಹಾಡಿದ್ದ ಸುಹಾನಾ ವಿವಾದಕ್ಕೆ ಒಳಗಾಗಿದ್ದರು.

ಯಕಿ ಸುಹಾನಾ ಸೈಯದ್, ಸಿಂಗಿಂಗ್ ರಿಯಾಲಿಟಿ ಶೋ ನಲ್ಲಿ ಹಿಜಾಬ್ ಧರಿಸಿ ಶ್ರೀಕಾರನೇ ಶ್ರೀನಿವಾಸನೇ ಎಂಬ ಗೀತೆ ಹಾಡಿದ್ದರು. ಇದೇ ಕಾರಣಕ್ಕೆ ಸುಹಾನಾ ವಿರುದ್ಧ ಮುಸ್ಲಿಂ ಮೂಲಭೂತವಾದಿಗಳು ತಿರುಗಿಬಿದ್ದಿದ್ದರು. ಸದ್ಯದ ಹಿಜಾಬ್ ವಿವಾದದ ಬಗ್ಗೆ ಸುಹಾನಾ ಪ್ರತಿಕ್ರಿಯಿಸಿದ್ದಾರೆ. ನಾನು ಮುಸ್ಲಿಂ ಕುಟುಂಬಕ್ಕೆ ಸೇರಿದವಳು. ಆದರೆ ನಾನು ಹಿಜಾಬ್ ಹಾಕುವುದಿಲ್ಲ. ಹಾಗಂತ ನಾನು ಹಿಜಾಬ್ ವಿರೋಧಿ ಖಂಡಿತ ಅಲ್ಲ. ನಾನು ಹಿಜಾಬ್ ಹಾಕುವುದಿಲ್ಲ ಎಂದು ವಿರೋಧಿಸಿದವರೂ ಇದ್ದಾರೆ. ಬಟ್ಟೆ ಹಾಕೋದು ಅವರವರ ಸ್ವಾತಂತ್ರ್ಯ. ಆದರೆ ಶಿಕ್ಷಣ ಎಲ್ಲದನ್ನೂ ಮೀರಿ ನಿಂತಿದೆ. ಹೆಣ್ಣು ಮಕ್ಕಳ ಶಿಕ್ಷಣ ಅತ್ಯಂತ ಮಹತ್ವದ್ದಾಗಿದೆ. ಧರ್ಮ, ಜಾತಿ, ಲಿಂಗ, ಬಟ್ಟೆ ಎಲ್ಲದನ್ನೂ ಮೀರಿರೋದು ಶಿಕ್ಷಣ. ಹಿಂದೆ ಹೆಣ್ಣು ಮಕ್ಕಳು ಮನೆಯಿಂದ ಹೊರ ಬಂದು ಓದಲು ಕಷ್ಟಪಡುತ್ತಿದ್ದರು. ಆದರೀಗ ಕಾಲ ಬದಲಾಗಿದೆ. ಪ್ರತಿ ಹೆಣ್ಣು ಮಗುವಿಗೆ ಶಿಕ್ಷಣ ಸಿಕ್ತಿದೆ. ಇದಕ್ಕಿಂತ ಖುಷಿ ವಿಚಾರ ಇನ್ನೊಂದಿಲ್ಲ. ಶಿಕ್ಷಣ ಪಡೆಯುವ ಪ್ರತಿ ಹೆಣ್ಣಿನ ಪರ ನನ್ನ ಬೆಂಬಲವಿದೆ. ಕೇವಲ ಬಟ್ಟೆ ವಿಚಾರಕ್ಕೆ ಶಿಕ್ಷಣ ವಂಚಿತರಾಗೋದು ತಪ್ಪು ಎಂದು ಸುಹಾನಾ ಸೈಯದ್ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

 

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

5 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

6 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

6 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

6 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

7 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

7 hours ago