Featured

ಹಿಜಾಬ್ ವಿವಾದದಿಂದ ಶಿಕ್ಷಣವನ್ನು ಸ್ಥಗಿತ ಮಾಡುವುದು ಸರಿಯಲ್ಲ. ಶಾಲೆಗಳನ್ನು ಶೀಘ್ರಗತಿಯಲ್ಲಿ ಆರಂಭಿಸಿ : ಮುಖ್ಯ ನ್ಯಾಯಮೂರ್ತಿ -Vishwanews24

ಹಿಜಾಬ್ ವಿವಾದದಿಂದ ಶಿಕ್ಷಣವನ್ನು ಸ್ಥಗಿತ ಮಾಡುವುದು ಸರಿಯಲ್ಲ. ಶಾಲೆಗಳನ್ನು ಶೀಘ್ರಗತಿಯಲ್ಲಿ ಆರಂಭಿಸಿ : ಮುಖ್ಯ ನ್ಯಾಯಮೂರ್ತಿ -Vishwanews24

ಬೆಂಗಳೂರು: ಹಿಜಾಬ್ ವಿವಾದದಿಂದ ಶಿಕ್ಷಣವನ್ನು ಸ್ಥಗಿತ ಮಾಡುವುದು ಸರಿಯಲ್ಲ. ಶಾಲೆಗಳನ್ನು ಶೀಘ್ರಗತಿಯಲ್ಲಿ ಆರಂಭಿಸಿ ಎಂದು ಮುಖ್ಯ ನ್ಯಾಯಮೂರ್ತಿ ಸರ್ಕಾರಕ್ಕೆ ಗುರುವಾರ ಸಲಹೆ ನೀಡಿದ್ದಾರೆ.

ಹಿಜಾಬ್ ವಿವಾದ ಸಂಬಂಧ ಮೂರನೇ ದಿನ ವಿಚಾರಣೆ ಇಂದು ಮಧ್ಯಾಹ್ನ ಆರಂಭವಾಗಿದ್ದು, ಮುಖ್ಯ ನ್ಯಾಯಮೂರ್ತಿ ರಿತುರಾಜ್​ ಅವಸ್ಥಿ, ನ್ಯಾ.ಖಾಜಿ ಜೈಬುನ್ನೀಸಾ, ನ್ಯಾ.ಕೃಷ್ಣ ಎಸ್​ ದೀಕ್ಷಿತ್​ ನೇತೃತ್ವದ ತ್ರಿಸದಸ್ಯ ಪೀಠದಲ್ಲಿ ವಿಚಾರಣೆ ನಡೆಸುತ್ತಿದೆ.

ಫೆ.8, 9 ರಂದು ಎರಡು ದಿನಗಳ ಕಾಲ ಕೃಷ್ಣ ಎಸ್​.ದೀಕ್ಷಿತ್ ಅವರಿದ್ದ ಏಕಸದಸ್ಯ ಪೀಠದಿಂದ ಹಿಜಾಬ್​ ಕುರಿತ ಅರ್ಜಿಗಳ ವಿಚಾರಣೆ ನಡೆದ ಬಳಿಕ ಪ್ರಕರಣ ಧರ್ಮ ಸೂಕ್ಷ್ಮವಾದ ಕಾರಣ ಇದನ್ನು ನ್ಯಾಯಮೂರ್ತಿಗಳು ವಿಸ್ತೃತ ಪೀಠಕ್ಕೆ ವರ್ಗಾಯಿಸಿದ್ದರು. ಇದೀಗ ಮೂವರು ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಹಿಜಾಬ್​ ಕುರಿತ ಅರ್ಜಿಗಳ ವಿಚಾರಣೆ ನಡೆಯುತ್ತಿದೆ.

ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿಯವರು, ಹಿಜಾಬ್​ ವಿವಾದದ ಕಾರಣಕ್ಕಾಗಿ ಶಾಲೆಗಳನ್ನು ಸ್ಥಗಿತಗೊಳಿಸಿದ ಸರ್ಕಾರದ ಕ್ರಮದ ವಿರುದ್ಧ ಬೇಸರ ವ್ಯಕ್ತಪಡಿಸಿದರು.

ವಿವಾದದಿಂದ ಶಿಕ್ಷಣವನ್ನು ಸ್ಥಗಿತ ಮಾಡುವುದು ಸರಿಯಲ್ಲ. ಶಾಲೆಗಳನ್ನು ಶೀಘ್ರಗತಿಯಲ್ಲಿ ಆರಂಭಿಸಿ. ವಿವಾದ ಕಾರಣದಿಂದ ಮಕ್ಕಳನ್ನು ಶಿಕ್ಷಣದಿಂದ ದೂರ ಇಡುವುದು ಸರಿಯಲ್ಲ ಎಂದು ಹೇಳಿದರು.

ಇದನ್ನು ಸರ್ಕಾರದ ಪರ ವಕೀಲರು ಒಪ್ಪಿಕೊಂಡರು. ಇದೇ ವೇಳೆ ಅರ್ಜಿದಾರರ ಪರ ವಕೀಲ ಕಾಮತ್ ಸ್ಕಾರ್ಫ್ ಅವರು, ಹಿಜಾಬ್ ಧಾರ್ಮಿಕ ಆಚರಣೆಯಲ್ಲ. ಮೂಲಭೂತ ಹಕ್ಕು ಎಂದು ವಾದ ಮಂಡನೆ ಮಾಡಿದರು. ಅಲ್ಲದೆ, ಈ ಸಂಬಂಧ ಮಧ್ಯಂತರ ಆದೇಶಕ್ಕೂ ಒತ್ತಾಯಿಸಿದರು.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

7 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

7 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

7 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

10 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

11 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

11 hours ago