Featured

ಹಿಜಾಬ್ ವಿವಾದದ ಮೂಲಕ ತಾಳ್ಮೆ ಪರೀಕ್ಷೆಯ ಯತ್ನ ಬೇಡ : ಯಶ್ ಪಾಲ್ ಸುವರ್ಣ -Vishwanews24

ಹಿಜಾಬ್ ವಿವಾದದ ಮೂಲಕ ತಾಳ್ಮೆ ಪರೀಕ್ಷೆಯ ಯತ್ನ ಬೇಡ : ಯಶ್ ಪಾಲ್ ಸುವರ್ಣ -Vishwanews24

ಉಡುಪಿಯ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಬೆರಳೆಣಿಕೆಯ ವಿದ್ಯಾರ್ಥಿನಿಯರು ಮತೀಯವಾದಿ ಸಂಘಟನೆಗಳ ಕುಮ್ಮಕ್ಕಿನಿಂದ ತರಗತಿಯಲ್ಲಿ ಹಿಜಾಬ್ ಧರಿಸಿ ವಿವಾದ ಸೃಷ್ಟಿಸಿ ಕಾಲೇಜಿನ ಶೈಕ್ಷಣಿಕ ವಾತಾವರಣ ಹದಗೆಡಿಸಲು ಯತ್ನಿಸುತ್ತಾ ನಮ್ಮ ತಾಳ್ಮೆ ಪರೀಕ್ಷೆಗೆ ಮುಂದಾಗಿದ್ದು ಮುಂದಿನ ದಿನದಲ್ಲಿ ಈ ಬಗ್ಗೆ ದಿಟ್ಟ ಉತ್ತರ ನೀಡಲು ಬದ್ಧ ಎಂದು ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ.

ಕಾಲೇಜಿನ ಅಭಿವೃದ್ಧಿ ಸಮಿತಿ ಕಾಲೇಜಿನ ಹಿತದೃಷ್ಟಿಯಿಂದ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸಂಯಮದಿಂದ ಸಮಸ್ಯೆ ಬಗೆಹರಿಸಲು ಯತ್ನಿಸುತ್ತಿದ್ದು, ಇದನ್ನೇ ನಮ್ಮ ದೌರ್ಬಲ್ಯವೆಂದು ಭಾವಿಸಿರುವ ಮತೀಯವಾದಿಗಳು ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಾಧ್ಯಮಗಳ ಮೂಲಕ ಘಟನೆಯನ್ನು ವೈಭವೀಕರಿಸಿ ಕಾಲೇಜಿನ ಘನತೆಗೆ ಧಕ್ಕೆಪಡಿಸಲು ಯತ್ನಿಸುತ್ತಿದ್ದಾರೆ.

ಈಗಾಗಲೇ ಶಿಕ್ಷಣ ಇಲಾಖೆ ಕಾಲೇಜಿನ ಸಮವಸ್ತ್ರ ವಿಚಾರದಲ್ಲಿ ಯಥಾಸ್ಥಿತಿಯನ್ನು ಮುಂದುವರೆಸುವಂತೆ ಆದೇಶ ನೀಡಿದರೂ ವಿದ್ಯಾರ್ಥಿಗಳು ಹಿಜಾಬ್ ಬಗ್ಗೆ ಗೊಂದಲ ಸೃಷಿಸಲು ಯತ್ನಿಸುತ್ತಿರುವುದು ದುರದೃಷ್ಟಕರ.

ಕಾಲೇಜಿನ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಶಾಸಕ ರಘುಪತಿ ಭಟ್ ರವರು ವಿದ್ಯಾರ್ಥಿನಿಯರ ಹಿತದೃಷ್ಟಿಯಿಂದ ಆನ್ ಲೈನ್ ಮೂಲಕ ತರಗತಿಯಲ್ಲಿ ಭಾಗವಹಿಸಲು ಅವಕಾಶ ನೀಡಿದರೂ ಈ ವಿದ್ಯಾರ್ಥಿನಿಯರು ತಮ್ಮ ಪಟ್ಟು ಬಿಡದೇ ಉದ್ಧಟತನ ಮೆರೆದಿದ್ದಾರೆ.

ಡಿಸೆಂಬರ್ 30ರಂದು ಕಾಪು ಪುರಸಭಾ ಚುನಾವಣೆಯಲ್ಲಿ ಎಸ್ ಡಿ ಪಿ ಐ ಪಕ್ಷ 3 ಸ್ಥಾನಗಳಲ್ಲಿ ಗೆಲುವು ಸಾಧಿಸಿದ ಮರುದಿನದಿಂದಲೇ ಕಾಲೇಜಿನಲ್ಲಿ ಹಿಜಾಬ್ ವಿವಾದ ಆರಂಭಗೊಂಡಿದ್ದು, ತಮ್ಮ ರಾಷ್ಟ್ರವಿರೋಧಿ ಚಟುವಟಿಕೆಯನ್ನು ಈ ವಿವಾದದ ಮೂಲಕ ಕಾರ್ಯಗತ ಗೊಳಿಸಲು ಮುಂದಾಗಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ.

ಪಂಚ ರಾಜ್ಯಗಳ ಚುನಾವಣೆ ಹಿನ್ನಲೆಯಲ್ಲಿ ಈ ಘಟನೆಯನ್ನು ವ್ಯವಸ್ಥಿತವಾಗಿ ರಾಷ್ಟ್ರೀಯ ಮಟ್ಟದಲ್ಲಿ ಅಪಪ್ರಚಾರಗೊಳಿಸಿ ರಾಜಕೀಯ ಲಾಭ ಪಡೆಯಲು ಈ ಸಂಘಟನೆಗಳು ಯತ್ನಿಸುತ್ತಿದ್ದಾರೆ.

ಕಾಲೇಜಿನ ಉಪನ್ಯಾಸಕರಿಗೆ ಅಗೌರವ ತೋರುತ್ತಾ, ಅಶಿಸ್ತಿನಿಂದ ವರ್ತಿಸುತ್ತಿರುವ ಈ ವಿದ್ಯಾರ್ಥಿನಿಯರಿಂದಾಗಿ ಕಾಲೇಜಿನ ಸಾವಿರಾರು ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೂ ಸಮಸ್ಯೆ ಉಂಟಾಗಿದೆ.

ಕಾಲೇಜಿನಲ್ಲಿ ಪುರುಷ ಶಿಕ್ಷಕರು ಪಾಠ ಮಾಡುವುದರಿಂದ ತಮಗೆ ಹಿಜಾಬ್ ಧರಿಸಲು ಅವಕಾಶ ನೀಡಬೇಕೆಂದು ಆಗ್ರಹಿಸುತ್ತಿರುವ ವಿದ್ಯಾರ್ಥಿನಿಯರ ಮನಸ್ಥಿತಿಯೇ ಸಮಾಜಕ್ಕೆ ಆತಂಕಕಾರಿಯಾಗಿದ್ದು , ವಿದ್ಯೆ ಕಲಿಸುವ ಗುರುಗಳ ಬಗ್ಗೆ ಅಗೌರವ ತೋರುವವರಿಂದ ಇನ್ನೂ ಹೆಚ್ಚಿನದನ್ನು ನಿರೀಕ್ಷಿಸುವುದು ಅಸಾಧ್ಯ.

ಹಿಜಾಬ್ ವಿಚಾರದಲ್ಲಿ ಸರಕಾರಿ ಕಾಲೇಜಿನ ಈ ಘಟನೆ ಮುಂದಿನ ದಿನಗಳಲ್ಲಿ ಇತರ ಕಾಲೇಜಿನಲ್ಲೂ ಸಮಸ್ಯೆ ಸೃಷ್ಟಿಸಲಿದ್ದು, ಈ ವಿದ್ಯಾರ್ಥಿಗಳಿಗೆ ಕುಮ್ಮಕ್ಕು ನೀಡುತ್ತಿರುವ ಮತೀಯವಾದಿಗಳಿಗೆ ಕಾಲೇಜಿನ ಶಿಕ್ಷಣದ ವಿಚಾರದಲ್ಲಿ ಗೊಂದಲ ಸೃಷ್ಟಿಸಲು ಅವಕಾಶ ನೀಡುವುದಿಲ್ಲ ಹಾಗೂ ಕಾಲೇಜಿನ ಶಿಸ್ತು ಕಾಪಾಡುವ ವಿಚಾರದಲ್ಲಿ ರಾಜೀ ಮಾಡುವ ಪ್ರಶ್ನೆಯೇ ಇಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

18 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago