ಚಿತ್ರದುರ್ಗ: ಹಿಜಾಬ್ಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ತೀರ್ಪು ಸ್ವಾಗತಿಸುವುದಾಗಿ ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ.
ಹಿಜಾಬ್ ವಿಚಾರವನ್ನು ಒಂದು ವಿವಾದವಾಗಿ ಬೆಳೆಸಿದ್ದೇ ಬಿಜೆಪಿ. ಇದು ಬಡವರನ್ನು ಹಾಗೂ ಅಲ್ಪಸಂಖ್ಯಾತರನ್ನು ಶಿಕ್ಷಣ ವಂಚಿತರನ್ನಾಗಿ ಮಾಡುವ ಷಡ್ಯಂತ್ರ ಎಂದು ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ ಹೇಳಿದರು.
ಜಿಲ್ಲೆಯ ಕೋನಸಾಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಅಲ್ಪಸಂಖ್ಯಾತ ಹೆಣ್ಮಕ್ಕಳು ಶಿಕ್ಷಣ ಪಡೆಯಲು ಆಗಬಾರದೆಂದು ಬಿಜೆಪಿಯವರು ಮಾಡಿದ ಷಡ್ಯಂತ್ರ ಇದು. ಅವರು ಮುಂದಿಟ್ಟ ಹೆಜ್ಜೆ ಹಿಂದಕ್ಕೆ ತೆಗೆಯುವಂತೆ ಮಾಡುವಲ್ಲಿ ಬಿಜೆಪಿ ಯಶಸ್ವಿಯಾಗಿದೆ. ಹಿಜಾಬ್ ವಿವಾದದಿಂದಾಗಿ 17,000 ಹೆಣ್ಣುಮಕ್ಕಳು ಶಾಲೆಗಳಿಂದ ಹೊರಗೆ ಬಂದಿದ್ದಾರೆ.
ಸುಪ್ರೀಂಕೋರ್ಟ್ ತೀರ್ಪನ್ನು ನಾನು ಸ್ವಾಗತಿಸುತ್ತೇನೆ. ಅದನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸುವುದಾಗಿ ಹೇಳಿದ್ದಾರೆ. ಈ ವಿವಾದದಿಂದ ಯಾರಿಗೂ ಯಾವುದೇ ಒಳಿತು ಆಗುವುದಿಲ್ಲ. ಬಡ, ಅಲ್ಪಸಂಖ್ಯಾತ ಹೆಣ್ಣು ಮಕ್ಕಳು ಶಿಕ್ಷಣ ಕ್ಷೇತ್ರದಲ್ಲಿ ಇರಬಾರದು ಎಂಬ ಷಡ್ಯಂತ್ರ ಅವರದು. ಹಲವು ಮುಸ್ಲಿಂ ಕುಟುಂಬಗಳ ಮೊದಲ ತಲೆಮಾರು ಶಿಕ್ಷಣ ಕ್ಷೇತ್ರದಿಂದ ಹಿಂದೆ ಸರಿಯುವಂತೆ ಮಾಡುವಲ್ಲಿ ಬಿಜೆಪಿ ಯಶಸ್ವಿಯಾಗಿದೆ ಎಂದು ಆರೋಪ ಮಾಡಿದರು. ಈಗ ಶಾಲೆಗಳಿಂದ ಹೊರಬಂದಿರುವ ಹೆಣ್ಣುಮಕ್ಕಳ ತಂದೆ-ತಾಯಿ ಬಹಳ ಕಷ್ಟಪಟ್ಟು ಶಾಲೆಗಳಿಗೆ ಕಳಿಸಿದ್ದರು. ಧರ್ಮ ಮತ್ತು ಸರ್ಕಾರ ಎರಡರ ಮಿಶ್ರಣ ಸಲ್ಲದು ಎನ್ನುವ ನೆಹರು ಅವರ ಮಾತನ್ನು ನಾವೆಲ್ಲರೂ ನೆನಪಿನಲ್ಲಿ ಇರಿಸಿಕೊಳ್ಳಬೇಕು ಎಂದು ಅವರು ವಿವರಿಸಿದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…