ಚಿತ್ರದುರ್ಗ: ಹಿಜಾಬ್ಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ತೀರ್ಪು ಸ್ವಾಗತಿಸುವುದಾಗಿ ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ.
ಹಿಜಾಬ್ ವಿಚಾರವನ್ನು ಒಂದು ವಿವಾದವಾಗಿ ಬೆಳೆಸಿದ್ದೇ ಬಿಜೆಪಿ. ಇದು ಬಡವರನ್ನು ಹಾಗೂ ಅಲ್ಪಸಂಖ್ಯಾತರನ್ನು ಶಿಕ್ಷಣ ವಂಚಿತರನ್ನಾಗಿ ಮಾಡುವ ಷಡ್ಯಂತ್ರ ಎಂದು ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ ಹೇಳಿದರು.
ಜಿಲ್ಲೆಯ ಕೋನಸಾಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಅಲ್ಪಸಂಖ್ಯಾತ ಹೆಣ್ಮಕ್ಕಳು ಶಿಕ್ಷಣ ಪಡೆಯಲು ಆಗಬಾರದೆಂದು ಬಿಜೆಪಿಯವರು ಮಾಡಿದ ಷಡ್ಯಂತ್ರ ಇದು. ಅವರು ಮುಂದಿಟ್ಟ ಹೆಜ್ಜೆ ಹಿಂದಕ್ಕೆ ತೆಗೆಯುವಂತೆ ಮಾಡುವಲ್ಲಿ ಬಿಜೆಪಿ ಯಶಸ್ವಿಯಾಗಿದೆ. ಹಿಜಾಬ್ ವಿವಾದದಿಂದಾಗಿ 17,000 ಹೆಣ್ಣುಮಕ್ಕಳು ಶಾಲೆಗಳಿಂದ ಹೊರಗೆ ಬಂದಿದ್ದಾರೆ.
ಸುಪ್ರೀಂಕೋರ್ಟ್ ತೀರ್ಪನ್ನು ನಾನು ಸ್ವಾಗತಿಸುತ್ತೇನೆ. ಅದನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸುವುದಾಗಿ ಹೇಳಿದ್ದಾರೆ. ಈ ವಿವಾದದಿಂದ ಯಾರಿಗೂ ಯಾವುದೇ ಒಳಿತು ಆಗುವುದಿಲ್ಲ. ಬಡ, ಅಲ್ಪಸಂಖ್ಯಾತ ಹೆಣ್ಣು ಮಕ್ಕಳು ಶಿಕ್ಷಣ ಕ್ಷೇತ್ರದಲ್ಲಿ ಇರಬಾರದು ಎಂಬ ಷಡ್ಯಂತ್ರ ಅವರದು. ಹಲವು ಮುಸ್ಲಿಂ ಕುಟುಂಬಗಳ ಮೊದಲ ತಲೆಮಾರು ಶಿಕ್ಷಣ ಕ್ಷೇತ್ರದಿಂದ ಹಿಂದೆ ಸರಿಯುವಂತೆ ಮಾಡುವಲ್ಲಿ ಬಿಜೆಪಿ ಯಶಸ್ವಿಯಾಗಿದೆ ಎಂದು ಆರೋಪ ಮಾಡಿದರು. ಈಗ ಶಾಲೆಗಳಿಂದ ಹೊರಬಂದಿರುವ ಹೆಣ್ಣುಮಕ್ಕಳ ತಂದೆ-ತಾಯಿ ಬಹಳ ಕಷ್ಟಪಟ್ಟು ಶಾಲೆಗಳಿಗೆ ಕಳಿಸಿದ್ದರು. ಧರ್ಮ ಮತ್ತು ಸರ್ಕಾರ ಎರಡರ ಮಿಶ್ರಣ ಸಲ್ಲದು ಎನ್ನುವ ನೆಹರು ಅವರ ಮಾತನ್ನು ನಾವೆಲ್ಲರೂ ನೆನಪಿನಲ್ಲಿ ಇರಿಸಿಕೊಳ್ಳಬೇಕು ಎಂದು ಅವರು ವಿವರಿಸಿದರು.
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…