ಬೆಂಗಳೂರು: ಹೈಕೋರ್ಟ್ ನೀಡಿರುವ ಆದೇಶವನ್ನು ಧಿಕ್ಕರಿಸಿ ಹಲವೆಡೆ ವಿದ್ಯಾರ್ಥಿನಿಯರು ತಮಗೆ ಹಿಜಾಬ್ ಬೇಕು, ಇಲ್ಲದಿದ್ದರೆ ಕ್ಲಾಸ್ಗೆ ಹಾಜರಾಗುವುದಿಲ್ಲ ಎಂದು ಪಟ್ಟು ಹಿಡಿಯುತ್ತಿದ್ದಾರೆ. ಇದರ ನಡುವೆಯೇ ಇಂದಿನಿಂದ (ಫೆ.21) ದ್ವಿತೀಯ ಪಿಯುಸಿಯ ಪ್ರಾಯೋಗಿಕ (ಪ್ರಾಕ್ಟಿಕಲ್) ಪರೀಕ್ಷೆಗಳು ಶುರುವಾಗಿದ್ದು, ಇದೀಗ ಹಿಜಾಬ್ಗೆ ಹೋರಾಟ ಮಾಡುತ್ತಿರುವ ವಿದ್ಯಾರ್ಥಿನಿಯರು ಮತ್ತು ಅವರನ್ನು ಬೆಂಬಲಿಸುತ್ತಿರುವವರನ್ನು ಧರ್ಮ ಸಂಕಟಕ್ಕೆ ಸಿಲುಕಿಸಿದೆ.
ಹಿಜಾಬ್ ಕಾರಣ ನೀಡಿ ಪ್ರತಿದಿನ ಕಾಲೇಜು ಧಿಕ್ಕರಿಸಿದಂತೆ, ಇಂದು ಪರೀಕ್ಷೆಯನ್ನು ಬಹಿಷ್ಕಾರ ಮಾಡಿದರೆ ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ಇಲ್ಲ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಇದಾಗಲೇ ಸ್ಪಷ್ಟಪಡಿಸಿದ್ದಾರೆ. ಇದಾಗಲೇ ಹಿಜಾಬ್ ಕಾರಣದಿಂದ ಪರೀಕ್ಷೆಗಳನ್ನು ಕೆಲ ದಿನ ಮುಂದೂಡಲಾಗಿತ್ತು. ಇದೀಗ ಮತ್ತೆ ಮುಂದೂಡುವ ಪ್ರಶ್ನೆಯೇ ಇಲ್ಲ ಎಂದಿರುವ ಇಲಾಖೆ, ನಿಗದಿತ ವೇಳಾಪಟ್ಟಿಯಂತೆಯೇ ಪರೀಕ್ಷೆಗಳನ್ನು ಇಲಾಖೆ ನಡೆಸಲು ಸಜ್ಜಾಗಿದೆ. 25ರೊಳಗೆ ಪರೀಕ್ಷೆ ಮುಗಿಸುವಂತೆಯೂ ಇಲಾಖೆ ಹೇಳಿದೆ.
ಇದನ್ನೂ ಓದಿ :
ನಮಗೆ ಶಿಕ್ಷಣಕ್ಕಿಂತ ಹಿಜಾಬೇ ಮುಖ್ಯ ಎಂದು ಯಾರೋ ಹೇಳಿಕೊಟ್ಟಿರುವ ಮಾತನ್ನು ಹೇಳುತ್ತಾ, ತಮಗೆ ಶಿಕ್ಷಣ ನೀಡುತ್ತಿರುವ ಗುರುಗಳ ವಿರುದ್ಧವೇ ತಿರುಗಿ ಬಿದ್ದಿರುವ ವಿದ್ಯಾರ್ಥಿನಿಯರಿಗೆ ಇದೀಗ ಅಗ್ನಿ ಪರೀಕ್ಷೆಯ ಕಾಲ. ಉನ್ನತ ಶಿಕ್ಷಣ ಉದ್ಯೋಗದ ದೃಷ್ಟಿಯಲ್ಲಿ ಟರ್ನಿಂಗ್ ಪಾಯಿಂಟ್ ಎಂದು ಎನಿಸಿಕೊಂಡಿರುವ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ವಿದ್ಯಾರ್ಥಿನಿಯರು ಬಹಿಷ್ಕರಿಸುತ್ತಾರೆಯೋ ಅಥವಾ ಯಾರೋ ಮಾಡಿರುವ ಪಿತೂರಿಯಂತೆ ಇನ್ನೇನು ಗಲಾಟೆ ಸೃಷ್ಟಿ ಮಾಡುತ್ತಾರೆಯೋ ಎಂಬ ಭಯದಲ್ಲಿಯೇ ಕಾಲೇಜುಗಳಲ್ಲಿ ಬಿಗಿ ಬಂದೋಬಸ್ತ್ ಏರ್ಪಾಡು ಮಾಡಲಾಗಿದೆ.
25ರೊಳಗೆ ಪರೀಕ್ಷೆ ಮುಗಿಸುವಂತೆಯೂ ಡೆಡ್ಲೈನ್ ಕೊಟ್ಟಿದೆ. ಇದೇ ಈಗ ಹಿಜಾಬ್ಗಾಗಿ ಕ್ಲಾಸ್ನಿಂದ ದೂರ ಉಳಿದಿರೋ ವಿದ್ಯಾರ್ಥಿನಿಯರಿಗೆ ದೊಡ್ಡ ಟೆನ್ಷನ್ ತಂದಿದೆ.
ಇಂದಿನಿಂದ ನಡೆಯಲಿರುವ ದ್ವಿತೀಯ ಪಿಯು ಪ್ರಾಯೋಗಿಕ ಪರೀಕ್ಷೆ 30 ಅಂಕಗಳಿಗೆ ನಡೆಯಲಿದೆ. ಪ್ರಯೋಗಕ್ಕೆ 10 ಅಂಕ, ಪ್ರಯೋಗ ವಿಶ್ಲೇಷಣೆ – 10 ಅಂಕ, ರಿಕಾರ್ಡ್ ಬುಕ್ – 5 ಅಂಕ, ಸಂದರ್ಶನ (ವೈವಾ) – 5 ಅಂಕಗಳದ್ದಾಗಿದ್ದು, ಇದನ್ನು ವಿದ್ಯಾರ್ಥಿನಿಯರು ಬರೆಯದಿದ್ದರೆ 30 ಅಂಕ ಕಳೆದುಕೊಳ್ಳಲಿದ್ದಾರೆ.
ಇದನ್ನೂ ಓದಿ :
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…