Featured

ಹಿಜಾಬ್‌ ವಿವಾದ: ಉಡುಪಿ ಶಾಸಕ ರಘುಪತಿ ಭಟ್‌ ಗೆ ಬೆದರಿಕೆ ಕರೆ! Vishwanews24

ನನಗೆ ಯಾವುದೇ ಗನ್‌ ಮ್ಯಾನ್ ಬೇಡ ..ನನಗೆ ನನ್ನ ಜನಗಳೇ ಭದ್ರತೆ ..

ಇಂತಹ ಬೆದರಿಕೆ ಕರೆಗಳಿಗೆ ಜಗ್ಗುವ ವ್ಯಕ್ತಿ ನಾನಲ್ಲ..

ಉಡುಪಿ ಶಾಸಕ ರಘುಪತಿ ಭಟ್‌..

ಉಡುಪಿ: ಹಿಜಾಬ್‌ ಕೇಸರಿ ವಿವಾದ ಹಿನ್ನಲೆಯಲ್ಲಿ ಉಡುಪಿ ಶಾಸಕ ರಘುಪತಿ ಭಟ್‌ ಅವರಿಗೆ ಬೆದರಿಕೆ ಕರೆಗಳು ಬಂದಿದ್ದು, ಗೃಹ ಸಚಿವರಿಗೆ ಮೌಖಿಕವಾಗಿ ದೂರು ನೀಡಿದ್ದಾರೆ.

ವಿದೇಶಗಳಿಂದ, ಹೈದರಾಬಾದ್‌ ನಿಂದ ಇಂಟರ್‌ ನೆಟ್‌ ಕಾಲ್‌ ಮೂಲಕ ಶಾಸಕ ರಘುಪತಿ ಭಟ್‌ ಅವರಿಗೆ ಬೆದರಿಕೆ ಕರೆ ಮಾಡಿದ್ದು, ನಿನ್ನನ್ನು ನಾವು ನೋಡಿಕೊಳ್ಳುತ್ತೇವೆ, ಮುಸಲ್ಮಾನರ ವಿರುದ್ಧ ನೀನು ಮೆರೆದಾಡ ಬೇಡ ನಿನ್ನನ್ನು ಹೇಗೆ ನಿಯಂತ್ರಿಸಬೇಕು ಗೊತ್ತಿದೆ ಎಂದು ಕೆಲವು ನಂಬರ್‌ ಗಳಿಂದ ಕರೆ ಬಂದಿದ್ದು ಈ ಬಗ್ಗೆ ರಾಜ್ಯ ಗೃಹ ಸಚಿವರಿಗೆ ದೂರು ನೀಡಿರುವುದಾಗಿ ಅವರು ಹೇಳಿದ್ದಾರೆ.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ಗನ್‌ ಮ್ಯಾನ್‌ ಪಡೆದುಕೊಳ್ಳುವಂತೆ ತಿಳಿಸಿದ್ದಾರೆ ಆದರೆ ನನಗೆ ಯಾವುದೇ ಗನ್‌ ಮ್ಯಾಣ್‌ ಬೇಡ ನನಗೆ ನನ್ನ ಜನಗಳೇ ಭದ್ರತೆಗೆ ಇದ್ದಾರೆ ಇಂತಹ ಬೆದರಿಕೆ ಕರೆಗಳಿಗೆ ಜಗ್ಗುವ ವ್ಯಕ್ತಿ ನಾನಲ್ಲ ಎಂದು ರಘುಪತಿ ಭಟ್‌ ಹೇಳಿದ್ದಾರೆ.

ಈ ಕುರಿತು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯವರ ಬಳಿ ಮ್ಯಾಂಗಲೋರಿಯನ್‌ ಪ್ರತಿನಿಧಿ ಮಾತನಾಡಿದ್ದು ಈ ವರೆಗೆ ಅಧಿಕೃತ ದೂರು ನಮಗೆ ಬಂದಿಲ್ಲ ಆದರೂ ಈಗಾಗಲೇ ನಾವು ಇಲಾಖೆಯ ವತಿಯಿಂದ ಅವರಿಗೆ ಗನ್‌ ಮ್ಯಾನ್‌ ಪಡೆದುಕೊಳ್ಳಲು ಸೂಚನೆ ನೀಡಿದ್ದು ಅವರು ತನಗೆ ಯಾವುದೇ ಗನ್‌ ಮ್ಯಾನ್‌ ಬೇಡ ಎಂದಿದ್ದಾರೆ. ಅವರಿಗೆ ಬಂದಿರುವ ಬೆದರಿಕೆ ಕರೆಯ ಕುರಿತು ಅವರಿಂದ ಮಾಹಿತಿ ಪಡೆದು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.

 

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

8 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

8 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

8 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

9 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

9 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

9 hours ago