ಉಡುಪಿ: ಹಿಜಾಬ್ ಕೇಸರಿ ವಿವಾದ ಹಿನ್ನಲೆಯಲ್ಲಿ ಉಡುಪಿ ಶಾಸಕ ರಘುಪತಿ ಭಟ್ ಅವರಿಗೆ ಬೆದರಿಕೆ ಕರೆಗಳು ಬಂದಿದ್ದು, ಗೃಹ ಸಚಿವರಿಗೆ ಮೌಖಿಕವಾಗಿ ದೂರು ನೀಡಿದ್ದಾರೆ.
ವಿದೇಶಗಳಿಂದ, ಹೈದರಾಬಾದ್ ನಿಂದ ಇಂಟರ್ ನೆಟ್ ಕಾಲ್ ಮೂಲಕ ಶಾಸಕ ರಘುಪತಿ ಭಟ್ ಅವರಿಗೆ ಬೆದರಿಕೆ ಕರೆ ಮಾಡಿದ್ದು, ನಿನ್ನನ್ನು ನಾವು ನೋಡಿಕೊಳ್ಳುತ್ತೇವೆ, ಮುಸಲ್ಮಾನರ ವಿರುದ್ಧ ನೀನು ಮೆರೆದಾಡ ಬೇಡ ನಿನ್ನನ್ನು ಹೇಗೆ ನಿಯಂತ್ರಿಸಬೇಕು ಗೊತ್ತಿದೆ ಎಂದು ಕೆಲವು ನಂಬರ್ ಗಳಿಂದ ಕರೆ ಬಂದಿದ್ದು ಈ ಬಗ್ಗೆ ರಾಜ್ಯ ಗೃಹ ಸಚಿವರಿಗೆ ದೂರು ನೀಡಿರುವುದಾಗಿ ಅವರು ಹೇಳಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಗನ್ ಮ್ಯಾನ್ ಪಡೆದುಕೊಳ್ಳುವಂತೆ ತಿಳಿಸಿದ್ದಾರೆ ಆದರೆ ನನಗೆ ಯಾವುದೇ ಗನ್ ಮ್ಯಾಣ್ ಬೇಡ ನನಗೆ ನನ್ನ ಜನಗಳೇ ಭದ್ರತೆಗೆ ಇದ್ದಾರೆ ಇಂತಹ ಬೆದರಿಕೆ ಕರೆಗಳಿಗೆ ಜಗ್ಗುವ ವ್ಯಕ್ತಿ ನಾನಲ್ಲ ಎಂದು ರಘುಪತಿ ಭಟ್ ಹೇಳಿದ್ದಾರೆ.
ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಬಳಿ ಮ್ಯಾಂಗಲೋರಿಯನ್ ಪ್ರತಿನಿಧಿ ಮಾತನಾಡಿದ್ದು ಈ ವರೆಗೆ ಅಧಿಕೃತ ದೂರು ನಮಗೆ ಬಂದಿಲ್ಲ ಆದರೂ ಈಗಾಗಲೇ ನಾವು ಇಲಾಖೆಯ ವತಿಯಿಂದ ಅವರಿಗೆ ಗನ್ ಮ್ಯಾನ್ ಪಡೆದುಕೊಳ್ಳಲು ಸೂಚನೆ ನೀಡಿದ್ದು ಅವರು ತನಗೆ ಯಾವುದೇ ಗನ್ ಮ್ಯಾನ್ ಬೇಡ ಎಂದಿದ್ದಾರೆ. ಅವರಿಗೆ ಬಂದಿರುವ ಬೆದರಿಕೆ ಕರೆಯ ಕುರಿತು ಅವರಿಂದ ಮಾಹಿತಿ ಪಡೆದು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್ಸಿಇಆರ್ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್ಸಿಇಆರ್ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…