Featured

ಹಿಜಾಬ್‌ ವಿವಾದ: ಉಡುಪಿ ಶಾಸಕ ರಘುಪತಿ ಭಟ್‌ ಗೆ ಬೆದರಿಕೆ ಕರೆ! Vishwanews24

ನನಗೆ ಯಾವುದೇ ಗನ್‌ ಮ್ಯಾನ್ ಬೇಡ ..ನನಗೆ ನನ್ನ ಜನಗಳೇ ಭದ್ರತೆ ..

ಇಂತಹ ಬೆದರಿಕೆ ಕರೆಗಳಿಗೆ ಜಗ್ಗುವ ವ್ಯಕ್ತಿ ನಾನಲ್ಲ..

ಉಡುಪಿ ಶಾಸಕ ರಘುಪತಿ ಭಟ್‌..

ಉಡುಪಿ: ಹಿಜಾಬ್‌ ಕೇಸರಿ ವಿವಾದ ಹಿನ್ನಲೆಯಲ್ಲಿ ಉಡುಪಿ ಶಾಸಕ ರಘುಪತಿ ಭಟ್‌ ಅವರಿಗೆ ಬೆದರಿಕೆ ಕರೆಗಳು ಬಂದಿದ್ದು, ಗೃಹ ಸಚಿವರಿಗೆ ಮೌಖಿಕವಾಗಿ ದೂರು ನೀಡಿದ್ದಾರೆ.

ವಿದೇಶಗಳಿಂದ, ಹೈದರಾಬಾದ್‌ ನಿಂದ ಇಂಟರ್‌ ನೆಟ್‌ ಕಾಲ್‌ ಮೂಲಕ ಶಾಸಕ ರಘುಪತಿ ಭಟ್‌ ಅವರಿಗೆ ಬೆದರಿಕೆ ಕರೆ ಮಾಡಿದ್ದು, ನಿನ್ನನ್ನು ನಾವು ನೋಡಿಕೊಳ್ಳುತ್ತೇವೆ, ಮುಸಲ್ಮಾನರ ವಿರುದ್ಧ ನೀನು ಮೆರೆದಾಡ ಬೇಡ ನಿನ್ನನ್ನು ಹೇಗೆ ನಿಯಂತ್ರಿಸಬೇಕು ಗೊತ್ತಿದೆ ಎಂದು ಕೆಲವು ನಂಬರ್‌ ಗಳಿಂದ ಕರೆ ಬಂದಿದ್ದು ಈ ಬಗ್ಗೆ ರಾಜ್ಯ ಗೃಹ ಸಚಿವರಿಗೆ ದೂರು ನೀಡಿರುವುದಾಗಿ ಅವರು ಹೇಳಿದ್ದಾರೆ.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ಗನ್‌ ಮ್ಯಾನ್‌ ಪಡೆದುಕೊಳ್ಳುವಂತೆ ತಿಳಿಸಿದ್ದಾರೆ ಆದರೆ ನನಗೆ ಯಾವುದೇ ಗನ್‌ ಮ್ಯಾಣ್‌ ಬೇಡ ನನಗೆ ನನ್ನ ಜನಗಳೇ ಭದ್ರತೆಗೆ ಇದ್ದಾರೆ ಇಂತಹ ಬೆದರಿಕೆ ಕರೆಗಳಿಗೆ ಜಗ್ಗುವ ವ್ಯಕ್ತಿ ನಾನಲ್ಲ ಎಂದು ರಘುಪತಿ ಭಟ್‌ ಹೇಳಿದ್ದಾರೆ.

ಈ ಕುರಿತು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯವರ ಬಳಿ ಮ್ಯಾಂಗಲೋರಿಯನ್‌ ಪ್ರತಿನಿಧಿ ಮಾತನಾಡಿದ್ದು ಈ ವರೆಗೆ ಅಧಿಕೃತ ದೂರು ನಮಗೆ ಬಂದಿಲ್ಲ ಆದರೂ ಈಗಾಗಲೇ ನಾವು ಇಲಾಖೆಯ ವತಿಯಿಂದ ಅವರಿಗೆ ಗನ್‌ ಮ್ಯಾನ್‌ ಪಡೆದುಕೊಳ್ಳಲು ಸೂಚನೆ ನೀಡಿದ್ದು ಅವರು ತನಗೆ ಯಾವುದೇ ಗನ್‌ ಮ್ಯಾನ್‌ ಬೇಡ ಎಂದಿದ್ದಾರೆ. ಅವರಿಗೆ ಬಂದಿರುವ ಬೆದರಿಕೆ ಕರೆಯ ಕುರಿತು ಅವರಿಂದ ಮಾಹಿತಿ ಪಡೆದು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.

 

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

56 minutes ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

1 hour ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

1 hour ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

2 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

2 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

3 hours ago